ಸೆಪ್ಟೆಂಬರ್ ೩, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಜುಲೈ ತಿಂಗಳ ಅತಿಥಿ ಸಂಪಾದಕ ಸುದರ್ಶನ್ ಪರಿಚಯ    
ಸುದರ್ಶನ್
ಬುಧವಾರ, 1 ಜುಲೈ 2009 (05:48 IST)
ಸುದರ್ಶನ್
ಸುದರ್ಶನ್ ಎಂಬತ್ತರ ದಶಕದಿಂದಲೇ ಹಲವು ನಿಟ್ಟಿನಿಂದ ಕನ್ನಡ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದವರು. ಪ್ರೇಮಾ ಕಾರಂತರ ನಿರ್ದೇಶನದಲ್ಲಿ ಚಂದ್ರಶೇಖರ ಕಂಬಾರರ "ಅಲಿಬಾಬಾ ಮತ್ತು ನಲವತ್ತು ಮಂದಿ ಕಳ್ಳರು" ನಾಟಕದಲ್ಲಿ ಅಲಿಬಾಬಾನಾಗಿ ರಂಗ ಹತ್ತಿದವರು. ಮುಂದೆ ಬೆನಕ ತಂಡದ "ಹ್ಯಾಮ್ಲೆಟ್", "ಸತ್ತವರ ನೆರಳು", "ಜೋಕುಮಾರಸ್ವಾಮಿ", "ಕಾಗೆ ಕುಣಿತ", "ಸಂಕೀರ್ಣ", "ಯಮರಂಜನೆ" ಹೀಗೆ ಹಲವಾರು ನಾಟಕಗಳಲ್ಲಿ ತೊಡಗಿಕೊಂಡವರು. ಮುಂದೆ ಪ್ರಯೋಗರಂಗದವರ "ಬ್ರಹ್ಮಚಾರಿ ಶರಣಾದ", "ಟೆಂಪೆಸ್ಟ್", "ಮೌನಿ" ಮುಂತಾದ ನಾಟಕಗಳಲ್ಲಿ ನಟಿಸಿದ್ದರು. ಅಲ್ಲದೆ "ಮಣ್ಣಿನ ಬಂಡಿ" ಹಾಗು "ಬೇವಾರ್ಸಿಗಳ ಸಂಭ್ರಮ (ಭಗವದಜ್ಜುಕೀಯ)" ನಾಟಕಗಳಲ್ಲಿ ನಟನೆ, ರಚನೆ ಹಾಗು ನಿರ್ಮಾಣದಲ್ಲಿ ಕಾರ್ಯ ನಿರ್ವಹಿಸಿದವರು.

"ಮಂಡೇ ಥಿಯೇಟರ್‍" ಎಂಬ ಆಪ್ತ ರಂಗಪ್ರಯೋಗವನ್ನು ಬೆಂಗಳೂರಿನಲ್ಲಿ ಆರಂಭಿಸಿ "ಗೋಡೆ", "ಸಿಂಹ", "ಕುರ್ಚಿಗಳು", "ಸುರಂಗ" ಮುಂತಾದ ನಾಟಕಗಳನ್ನು ಅನುವಾದಿಸಿ, ನಿರ್ದೇಶಿಸಿದ್ದರು. ಕಂಬಾರರ "ಹಳವಂಡಗಳು" ಹಾಗು ಕೆಲವು ಬೀದಿನಾಟಕಗಳ ನಿರ್ಮಾಣದಲ್ಲೂ ಸಕ್ರಿಯವಾಗಿ ತೊಡಗಿಕೊಂಡವರು. ಕಾವ್ಯ, ಸಾಹಿತ್ಯ ಹಾಗು ಚಲನಚಿತ್ರಗಳಲ್ಲೂ ಆಸಕ್ತಿಯಿರುವ ಸುದರ್ಶನರು ೧೯೮೮ರಲ್ಲಿ "ಭಾಗಿ ೮೮" ಎಂಬ ಪೋಸ್ಟ್ ಕಾರ್ಡಿನಲ್ಲಿ ಪುಟ್ಟಪದ್ಯಗಳನ್ನು ಬರೆದು ಕಳಿಸುವ ವಿಭಿನ್ನ ಚಟುವಟಿಕೆಯನ್ನು ಕೈಗೊಂಡಿದ್ದರು.

೯೦ರ ದಶಕದ ಮೊದಲಿಂದ ಆಸ್ಟ್ರೇಲಿಯದ ಸಿಡ್ನಿಯಲ್ಲಿ ನೆಲೆಸಿರುವ ಸುದರ್ಶನ ಅಲ್ಲಿಯೂ ಸಹ "ಅನಿವಾಸಿ ಕಲಾ ತಂಡ" ಎಂಬ ನಾಟಕದ ಗುಂಪನ್ನು ಕಟ್ಟಿಕೊಂಡು ಕನ್ನಡ ನಾಟಕ, ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದಾರೆ. ಶಾ. ಬಾಲುರಾಯರ "ಬೆಕ್ಕು ಬಾವಿ", ಗೊಗೋಲನ "ಜುಗಾರಿಕೂಟ", ಕಂಬಾರರ "ಜೋಕುಮಾರ ಸ್ವಾಮಿ" ನಾಟಕಗಳನ್ನು ನಿರ್ದೇಶಿಸಿದ್ದಾರೆ.

ನಾಟಕವಷ್ಟೇ ಅಲ್ಲದೆ, ಸಾಕ್ಷ್ಯ ಚಿತ್ರ, ಕಿರುಚಿತ್ರರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತಮ್ಮ ಹದಿವಯಸ್ಸಿನಲ್ಲೇ "ಹೆಲ್ಪ್" ಎಂಬ ಕಿರುಚಿತ್ರವನ್ನು ಬೆಂಗಳೂರಿನಲ್ಲಿ ನಿರ್ಮಿಸಿದ್ದರು. "ಕ್ಲೌಡ್ಸ್ ವೀಪ್ ಆನ್ ದಿ ಗ್ರೀನ್‌ನೆಸ್" ಎಂಬ ಅವರ ಕಿರುಚಿತ್ರವು ಆಸ್ಟ್ರೇಲಿಯದ "ಇಂಟೆಲ್ ಟ್ರಾಪ್‌ಫೆಸ್ಟ್" ಎಂಬ ಜಗತ್ತಿನಲ್ಲೇ ಅತಿ ದೊಡ್ಡ ಪ್ರದರ್ಶನ ಉಳ್ಳದ್ದಾಗಿರುವ ಚಿತ್ರೋತ್ಸವದ ಫೈನಲಿಸ್ಟ್ ಆಗಿ ಪ್ರದರ್ಶನಗೊಂಡಿತು. ಮತ್ತೊಂದು ಕಿರುಚಿತ್ರ "ಓಯಸಿಸ್" ಬೈರನ್ ಬೇ ಚಿತ್ರೋತ್ಸವದಲ್ಲಿ ಪ್ರಶಸ್ತಿ ಪಡೆಯಿತಲ್ಲದೆ, ಬಾರ್ಸಲೋನ ಹಾಗು ರೋಮಿನ ಚಿತ್ರೋತ್ಸವಗಳಲ್ಲೂ ಆಯ್ಕೆಯಾಗಿ ಪ್ರದರ್ಶನಗೊಂಡಿತು.

೨೦೦೬ರಲ್ಲಿ ಇವರು ಬರೆದು ನಿರ್ದೇಶಿಸಿದ "ಮುಖಾಮುಖಿ" ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ಸಂಭಾಷಣೆ ರಾಜ್ಯ ಪ್ರಶಸ್ತಿ ದೊರೆತಿದೆ. ೨೦೦೭ರಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ "ಸುವರ್ಣ ಕರ್ನಾಟಕ ರಂಗ ಪುರಸ್ಕಾರ"ವನ್ನು ನೀಡಲಾಯಿತು. ಇವರ ಸ್ವಂತ ನಾಟಕ "ಲೀಲಾಂತ"ವನ್ನು ಎಂ.ಎಸ್.ಸತ್ಯುರವರು ರಂಗಾಯಣದ ನಾಟಕ ಶಿಬಿರಕ್ಕೆ ನಿರ್ದೇಶಿಸಿದ್ದು, ಈಗ ಹಲವು ಕಡೆ ಪ್ರದರ್ಶನವನ್ನು ಕಾಣುತ್ತಿದೆ. "ಲೀಲಾಂತ", "ಜುಗಾರಿಕೂಟ" ಹಾಗು ಕವನ ಸಂಕಲನ "ಚೌಕಿ" ಪ್ರಕಟಗೊಂಡಿರುವ ಕೃತಿಗಳು.
ಪುಟದ ಮೊದಲಿಗೆ
 
Votes:  2     Rating: 3.5    
 
 
ಸಂಬಂಧಿಸಿದ ಲೇಖನಗಳು
  ಯಡಿಯೂರಪ್ಪನವರು ಬೀದರಿಗೆ ಬಂದ ವೃತ್ತಾಂತವು
  ಧಾರಾಳ ಮಾತು ನಮಗೇ ಆಪತ್ತು!
  ಏಳು ಕಲಾವಿದೆಯರ ಏಳು ವರ್ಣಗಳು
  ರಾಮ ಭಕ್ತ ಹನುಮನೋ, ಹನುಮ ಭಕ್ತ ರಾಮನೋ
  `ಅಲ್ನೋಡಿ ಕಲೀರಿ' ಅಂದ್ರೇನು ದರ್ಶನ್?
  ಹುಲ್ಲಿನ ಮೇಲೆ ಕೂತ ಹುಡುಗ ರಾಮುಲು
  ಜಾಗತೀಕರಣ ನೀತಿಕಥಾ-6: ಗುರುಚರಿತೆ
  ನ್ಯೂಯಾರ್ಕ್ ಜಿಮ್ ಬಳ್ಳಾರಿ ದೇವರ ನೋಡಲು ಬಂದ ಕಥೆ!
  ಶಿಕ್ಷಣ ಮೀಸಲು ನೀತಿಯನ್ನು ನೀವೂ ಬೆಂಬಲಿಸಿ
  ಯೋಗರಾಜ್ ಭಟ್ ಬರೆದ `ಪಂಚರಂಗಿ' ಕವಿತೆಗಳು
  ನೋವೆಂದರೆ ಅಳು ಮಾತ್ರವೇ? :ಹರೀಶ್ ಬರಹ
  ರಾಖೀ ಹಬ್ಬದ ದಿನ ವಿಲಾಸಣ್ಣನ ನೆನಪು
  ಭಿಕ್ಷುಕರು ಮತ್ತು ಸಾಹಿರ್ ಸಾಲುಗಳು: ದಿವಾಕರ್ ಬರಹ
  ಕನ್ನಡ ಯುವ ಬರಹಗಾರರಿಗೆ ಟೊಟೊ ಪುರಸ್ಕಾರ
  ಕನ್ನಡದ ಜಗನ್ಮೋಹಿನಿ ಹರಿಣಿಯೊಂದಿಗೆ ಒಂದಷ್ಟು ಹರಟೆ
  ಪೆಜತ್ತಾಯ ಬರೆದ ತ್ರಿಚಕ್ರಿ ಗೋವಿಂದ ಭಟ್ಟರ ಕಥೆ
  ಜಾಗತೀಕರಣ ನೀತಿಕಥಾ-5: ಕಲ್ಲು ಸಿಕ್ಕರೆ ಕೊಳ್ಳಿರೋ...
  ಏನೂ ನನ್ನದಲ್ಲವೆಂಬ ಸ್ವಾತಂತ್ರ್ಯ:ನಾಗಶ್ರೀ ನಂಬಿರುವುದು
  ಸ್ವಾತಂತ್ರ್ಯ ಅಂದ್ರೆ ಏನು?:ಸುಶ್ರುತ ಕೇಳಿದ ಪ್ರಶ್ನೆಗಳು
  ಮೆಟ್ರೋ ಬದಿಯಲ್ಲೇ ಮಲ್ಲಿಗೆ ದಂಡೆಯ ಪರಿಮಳ
  ಗುಬ್ಬಚ್ಚಿಗಳಿಗೆ ಸ್ವಾತಂತ್ರ್ಯದ ಕಾಳು: ಹೇಮಾ ಬರಹ
  ಸ್ವಾತಂತ್ರದ ಮೊದಲ ಕ್ಷಣಗಳು:ಅಯ್ಯಂಗಾರ್ ನೆನಪುಗಳು
  ಕೆಂಡಸಂಪಿಗೆ ಕಮೆಂಟಿಗರು ಮೊನ್ನೆಯಿಂದಲೇ ಸ್ವತಂತ್ರರು!
  ಹಳ್ಳಿ ಹೈಕಳಿಗೆ ಬೇಡದ ಕನ್ನಡ ಶಾಲೆ: ಪೆಜತ್ತಾಯ ಚಿಂತನೆ
  ಅನು ಪಾವಂಜೆ ಬರೆದ ಅಜ್ಜನ ಮನೆಯ ನೆನಪುಗಳು
  ಒಬ್ಬ ಅತಿಸಾಮಾನ್ಯನ ಗೊಣಗಾಟ : ಸುದರ್ಶನ್ ಬರಹ
  ಮುಂಬೈನ ಮಂಕಿ ಬ್ರಿಡ್ಜ್ ನಲ್ಲೊಬ್ಬ ಪತಿತ ಪಾವನ ತಿರುಕ
  ಗ್ರೆಗರಿಯವರ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ?
  ಅಮೇರಿಕಾ ದೇಶದ ಅಂಗಳದ ಅಂಗಡಿಗಳು
  ಗವಾಕ್ಷಿಯಲ್ಲಿ ಬಂದಿರುವ ಡಬ್ಬಿಂಗ್ ಪಿಶಾಚಿ!
  ಮಹಾನುಭಾವ ಬಿ.ಆರ್.ಪಂತುಲು:ಬಸವರಾಜು ಬರಹ
  ನಾನೂ ಲಾಂಗ್ ಜಂಪ್ ಹಾರಿದೆ: ಆರ್.ಜಿ.ಭಟ್ ಬರಹ
  ಆಸ್ಟ್ರೇಲಿಯಾ ಪತ್ರ: ದೇವರ ನಂಬದ ಸ್ತ್ರೀ ಪ್ರಧಾನಿ
  ತೆಂಗಿನ ಜುಟ್ಟೂ ತಮ್ಮನ ಜುಟ್ಟೂ: ಪರೀಕ್ಷಿತಾ ಬರಹ
  ಸ್ಯಾನ್ ಬಾರ್ನ್ ಪ್ರಾಯೋಗಿಕ ಕೃಷಿ ಕ್ಷೇತ್ರ: ವೆಂಕಟೇಶ್ ಬರಹ
  ಸವಣೂರಿನ ಭಂಗಿಗಳು ತೋರಿಸಿದ ಸತ್ಯಗಳು
  ಗ್ರೆಗರಿ ಕಳಕೊಂಡದ್ದು,ಎಂ ಆರ್ ಪಿ ಎಲ್ ಕಳೆದುಕೊಂಡದ್ದು
  ನಾರೀಕೇರಳ...ಮಳೆ,ಸುದ್ದಿರಾಜಕೀಯ:ಕನಕ ಬರಹ
  ಜಾಗತೀಕರಣ ನೀತಿಕಥಾ- ಕತೆಯೆಂಬ ಕತೆ
  ಇಟ್ಟಿಗೆ ಮಣ್ಣಿನ ರಾಶಿಯ ಮುಂದೆ..:ಲಕ್ಷ್ಮಿ ಕುಡ್ಲ ಬರಹ
  ಅಕ್ರಮ ಗಣಿ ಕಂಡರೂ ನಾವು ಯಾಕೆ ಕುರುಡರು?
  ಮಂಗಳೂರಲ್ಲಿ ಪತ್ರಾವೋ ಉಪವಾಸ ಕುಂತಿದ್ದರು...
  ಗ್ರೆಗರಿ ಪತ್ರಾವೊಗಾಗಿ ವೈದೇಹಿ ಮೊರೆ
  ಗ್ರೆಗರಿ ಪತ್ರಾವೋ ಮನೆಗೆ ಜೆ.ಸಿ.ಬಿ. ಎರಗಿದ ಕಥೆ
  ಅರವತ್ತರ ಉಲ್ಲಾಸದಲ್ಲಿ ನಸೀರುದ್ದೀನ್ ಷಾ: ಬಸು ಬರಹ
  ಜಾಗತೀಕರಣ ನೀತಿಕಥಾ 3: ಸಿಐಡಿ ಹೇಳಿದ ಕತೆ
  ಆಸ್ಟ್ರೇಲಿಯಾ ಓಲೆ: ಓದಲು ಬಂದು ತಾಯಾದವರ ಕಥೆ
  ಗಣಿಯಿಂದ ಹೊರಬರುತ್ತಿರುವ ದುರ್ನಾತಗಳು
  ಆಳುವವರೂ,ಆಳಿಸಿಕೊಳ್ಳುವವರೂ,ಪ್ರಜಾಪ್ರಭುತ್ವವೂ....
  ಈ ಗೋಕಾಕ್ ಎಂದರೆ ಯಾರು? ಹೃಷಿಕೇಶ್ ಬರಹ
  ಫುಟ್ಬಾಲ್, ಮಂಡೇಲಾ ಮತ್ತು ಒಂದು ಕವಿತೆ
  ಅಹಲ್ಯೆಯಾಗಬೇಕಿದ್ದವಳು ಏಡಿ ಹಿಡಿದದ್ದು....
  ರಾಧಜ್ಜಿ ಸೀಕರ್ಣೆ ಬೇಡಾ ಅಂದ ಕಥೆ
  ಬದಲಾದ ಕಾಲಮಾನ: ರಾಜೇಶ್ವರಿ ತೇಜಸ್ವಿ ಬರಹ
  ಈ ಪೈಶಾಚಿಕತೆಗೆ ಕೊನೆಯೇ ಇಲ್ಲವೇ?