ಸೆಪ್ಟೆಂಬರ್ ೯, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಲಂಕೇಶರಿಗೊಂದು ಕವಿತೆ    
ಅಬ್ದುಲ್ ರಶೀದ್
ಸೋಮವಾರ, 25 ಜನವರಿ 2010 (03:37 IST)
ಚಿತ್ರ: ಎಂ.ಎಸ್.ಮೂರ್ತಿ

ಇದು ಕನ್ನಡದ ಹೊಸ ಕವಿತೆಗಳ ತಾಣ. ಬಿರಿದ ಕುಸುಮಗಳಿಂದ ಕಿಕ್ಕಿರಿದುಹೋಗಿರುವ ಖುಷಿಯ ಟೊಂಗೆಗಳಲ್ಲಿ ಸುಮ್ಮನೇ ಕುಳಿತಿರುವ ಒಂಟಿಹಕ್ಕಿಗಳು ಇಲ್ಲಿರುವ ಈ ಕವಿತೆಗಳು. ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು.

ಯಾವಾಗಲೂ ಈ ಜಾಗ ಹೀಗೆಯೇ ಇರುವುದಿಲ್ಲ. ಕೆಲವೊಮ್ಮೆ ಜೋರು ಬಾಯಿಯ ಗಟ್ಟಿ ತೋಳಿನ ಕವಿತೆಗಳೂ ಇಲ್ಲಿರುತ್ತವೆ.ಆದರೆ ಇವೆಲ್ಲವೂ ಕನ್ನಡದ ಕವಿತೆಗಳು.ಒಂದಕ್ಕೊಂದು ಸವತಿಯರಂತೆ ಒಂದೇಕಡೆ ಹೇಗಾದರೂ ಏಗಿಕೊಂಡಿರುತ್ತವೆ.ಒಮ್ಮೊಮ್ಮೆ ಇದೇ ತರಹದ ಜಾಯಮಾನಗಳ ಪರಭಾಷಾ ಕವಿತೆಗಳೂ ಇಲ್ಲಿ ಕನ್ನಡಕ್ಕೆ ಬಂದಿರುತ್ತವೆ. ಈ ದಿನ ಲಂಕೇಶ್ ತೀರಿಹೋಗಿ ಹತ್ತು ವರ್ಷಗಳಾದವು.ಅವರ ನೆನಪಿಗೆ ರಶೀದ್ ಬರೆದ ಒಂದು ಕವಿತೆ ಇಲ್ಲಿದೆ

ನಾವು ಎಲ್ಲರೂ
ನೀವು ಇದ್ದಿದ್ದರೆ
ಈ ಎಲ್ಲದರ ಕುರಿತು
ಏನು ತೀರ್ಮಾನ ತೆಗೆದುಕೊಳ್ಳುತ್ತಿದ್ದಿರಿ ಎಂದು
ಯೋಚಿಸುತ್ತಾ ಕುಳಿತಿರುವೆವು.
ಹೀಗೆ ನೀವು ಸಾರ್ವಜನಿಕ ತೀರ್ಮಾನಗಳನ್ನು
ತೆಗೆದುಕೊಳ್ಳುತ್ತಿರಲಿಲ್ಲ ಎಂಬುದು ಬಹುಶಃ
ನಮಗೆ ಗೊತ್ತಿಲ್ಲ ಎನ್ನುವುದೂ ಒಂದು
ಚರ್ಚೆಯ ವಿಷಯವಾಗಿರುವುದು.
ನಿಮ್ಮ ಬಕ್ಕತಲೆಯ ಒಳಗೆ ಸುಳಿದಾಡುತ್ತಿದ್ದ
ಮಿಂಚುಗಳು,ಅಳ್ಳೆದೆಯವರ ಮೇಲೆ ಸದಾ ಮಸೆಯುತ್ತಿದ್ದ ಸೃಜನಶೀಲ
ಮಚ್ಚು ಮತ್ತು ಎಲ್ಲ ಸುಂದರಿಯರ ಬೆವರಸೆಲೆ
ಹುಡುಕಿಕೊಂಡು ಅಂಡಲೆಯುತ್ತಿದ್ದ
ಮಹಾನಾಚುಗೆಬುರುಕ ವಿಧ್ವತ್ತು.
ನಡೆಯುತ್ತಿರುವುದು ಸದಾ ತಂತಿಯ ಮೇಲೆಂಬ
ದೊಂಬರ ಹುಡುಗಿಯ
ವಿನಾಕಾರಣ ಆಪತ್ತಿನ ಭಯ,ಅದಕ್ಕೂ ಮಿಗಿಲಾಗಿದ್ದ
ಅವ್ವನಂತಹ ಮೊಸರು ಮಾರುವ ನಿಯತ್ತು.
ನಾಚುಗೆಯ, ಲೆಕ್ಕಾಚಾರದ, ಪತರಗುಟ್ಟುವ,
ಕವಿತೆಯ, ಗದ್ಯದ, ಬೈಗುಳಗಳ
ಈ ಎಲ್ಲದರ ತಳದಲ್ಲಿ ಉಳಿಯುವ
ಅಲ್ಲೋಲಕಲ್ಲೋಲದಂತಹ ಏಕಾಂತದ ನಡುವೆಯೂ
ನೀವು ನೀಡುತ್ತಿದ್ದ ಕಠಿಣ ಏಟು.
ಅವುಗಳನು ಉಂಡೂ ಸುಖಿಸುತ್ತಿದ್ದ
ಮಹಾ ಪೋಕರಿ ಸಾಮಾಜಿಕ ಮನಸ್ಸು.
ಹಾದರದವಳ ಮಹಾ ಲೆಕ್ಕಾಚಾರ
ಮತ್ತು ಗರತಿಯ ಹುಚ್ಚುಕೋಡಿ ಮನಸ್ಸು
ಲಂಕೇಶ್ ನೀವು ಇದ್ದಿದ್ದರೆ ಕೌದಿಯೊಳಗೆ ಸದಾ
ತಾಪದಿಂದ ಕಾತರಿಸುತ್ತಿದ್ದ ನಿಮಗೆ ಬಹಳಷ್ಟು ಕಥೆಕಟ್ಟಿ
ಹೇಳ ಬಹುದಿತ್ತು. ಮತ್ತು ಬಹಳಷ್ಟು ಕೇಳಬಹುದಿತ್ತು
ಈ ಎಲ್ಲ ಬಿಕ್ಕಟ್ಟು ಯಾಕೆ ಬೇಕಿತ್ತು!

ಪುಟದ ಮೊದಲಿಗೆ
 
Votes:  6     Rating: 4.33    
 
 
ಸಂಬಂಧಿಸಿದ ಲೇಖನಗಳು
  ಅರವಿಂದ ಬರೆದ ಇನ್ನೂ ಕೆಲವು ಕವಿತೆಗಳು
  ಸಹ್ಯಾದ್ರಿ ನಾಗರಾಜ್ ಬರೆದ ದಿನದ ಕವಿತೆ
  ಕೃಷ್ಣ ಜನ್ಮಾಷ್ಟಮಿಗೆ ಹೇಮಾ ಕವಿತೆಗಳು
  ಸಂಧ್ಯಾ ಬರೆದ ದಿನದ ಕವಿತೆ
  ಪ್ರಾಚೀ ಬರೆದ ದಿನದ ಕವಿತೆ
  ಭಾನುವಾರದ ವಿಶೇಷ: ವೈದೇಹಿ `ಸೂರ್ಯ ಸಾಂಗತ್ಯ'
  ಬೊಳುವಾರು ಗಾಂಧಿ ಕತೆಗೆ ಕೇಂದ್ರ ಸಾಹಿತ್ಯ ಸಮ್ಮಾನ
  ನಾ.ಡಿಸೋಜಾ ಬರೆದ ಒಂದು ‘ಲೈನ್’ ಪ್ರಕರಣ
  ಅರವಿಂದ ಬರೆದ ದಿನದ ಕವಿತೆ
  ವಿವೇಕ ಶಾನಭಾಗ ಕಂಡ ಜಯಂತ ಕಾಯ್ಕಿಣಿ `ಸ್ವಪ್ನದೋಷ'
  ಜಯಂತ ಕಾಯ್ಕಿಣಿ ಕತೆ `ಸ್ವಪ್ನ ದೋಷ'
  ಕೃತಿಯೂ, ಕರ್ತಾರನ ಪೂರ್ವಗ್ರಹಗಳೂ
  ನಾಗಶ್ರೀ ಶ್ರೀರಕ್ಷ ಬರೆದ ದಿನದ ಕವಿತೆ
  ಬೆಡ್ ರೂಮಿಂದ ಈಚೆಗ ಬರದ ಭೈರಪ್ಪನವರ ಕವಲು
  ಸರ್ಜಾಶಂಕರ್ ಬರೆದ ಹರಳಿಮಠ ಪುರಾಣ
  ಭೈರಪ್ಪ ಎಂದರೆ ಏಕೆ ಕನಲುವಿರಿ?:ಸುಪ್ರೀತ್ ಬರಹ
  ರವಿಪ್ರಕಾಶ್ ಬರೆದ ದಿನದ ಕವಿತೆ
  ಭಾನುವಾರದ ವಿಶೇಷ: ರಾಜೀವ್ ನಾಯಕರ ಕತೆ `ಎಸ್ಸೆಮ್ಮೆಸ್'
  ವಿಜಯಕಾಂತ ಪಾಟೀಲರ ಎರಡು ಕವಿತೆಗಳು
  ಸುಧೀರ್ ಕಾರ್ಕಳ ಬರೆದ ಬಿಯರ್ ಕವಿತೆ
  ಕನ್ನಂಬಾಡಿ ಶಿವಶಂಕರ್ ಕವಿತೆಗಳು
  ಎಸ್.ಬಿ.ಜೋಗುರ ಕತೆ `ಮತ್ಸ್ಯ ವೃತ್ತಾಂತ'
  ವೈಶಾಲಿ ಹೆಗಡೆ ಬರೆದ ನಾಲ್ಕು ಚುಟುಕುಗಳು
  ರಶೀದ್ ಅನುವಾದಿಸಿದ ಒಂದು ಫ್ರೆಂಚ್ ಕವಿತೆ
  ಭಾನುವಾರದ ವಿಶೇಷ: ನಾ. ಡಿಸೋಜ ಕತೆ `ಮೂರು ಕೈ'
  ಹೊನ್ನವಳ್ಳಿ ಆರ್. ದಿಲೀಪ ಬರೆದ ಹತ್ತು ಹೊಳಹು
  ವೈಶಾಲಿ ಕನ್ನಡದಲ್ಲಿ ರಿಲ್ಕ್ ಮತ್ತು ಝೆನ್
  ‘ಹೊಸತೇನೂ ಹೇಳದ ಭೈರಪ್ಪನವರ ‘ಕವಲು’
  ರಜನಿ ಭಟ್ ಕತೆ `ಮಾರಪ್ಪನು ಹಾಗು ಸೋಡಾ ಕುಪ್ಪಿಯೂ..'
  ಎನ್.ಶಂಕರ್ ಬರೆದ ದಿನದ ಕವಿತೆ
  ತಿರುಮಲೇಶ್ ಕನ್ನಡಿಸಿದ ಎಜ್ರಾ ಪೌಂಡ್ ಕವಿತೆಗಳು
  ನನ್ನ ಗೆಳೆಯ ವೆಂಕಟ್, ನನ್ನ ಗಂಡ ವೆಂಕಟ್
  ವೆಂಕಟ್ ಮೋಂಟಡ್ಕ ಬರೆದ ಅಪೂರ್ಣ ಕಥೆ
  ದಿವ್ಯಪ್ರಕಾಶ್ ಬರೆದ ದಿನದ ಕವಿತೆ
  ವಿನಾಯಕ ಭಟ್ ತದ್ದಲಸೆ ಬರೆದ ದಿನದ ಕವಿತೆ
  ರಾಘವೇಂದ್ರ ಹೆಗಡೆ ಬರೆದ ದಿನದ ಕವಿತೆ
  ನಾಗರಾಜ ವಸ್ತಾರೆ ಬರೆದ ನಾಲ್ಕು ಕವಿತೆಗಳು
  ವೈಶಾಲಿ ಹೆಗಡೆ ಕತೆ `ಬೋಳುಮರಕ್ಕೊಂದು ಬಾನು'
  ರೇವನ್ ಜೇವೂರ್ ಬರೆದ ಹನಿಗವಿತೆಗಳು
  ಹರ್ಷಾದ್ ವರ್ಕಾಡಿ ಬರೆದ ದಿನದ ಕವಿತೆ
  ಆನಂದ ಈ.ಕುಂಚನೂರ ಬರೆದ ದಿನದ ಕವಿತೆ
  ಬಾಗೇಶ್ರೀ ಅನುವಾದಿಸಿದ ಬಿಲ್ಕಿಸ್ ಕವಿತೆ
  ವಿಶ್ವ ಶರ್ಮ ಬರೆದ ದಿನದ ಕವಿತೆ
  ಭಾಗೀರಥಿ ಹೆಗಡೆ ಬರೆದ ಕತೆ `ವಂದೇ ಮಾತರಂ'
  ಪದ್ಮನಾಭ ಭಟ್ ಶೇವ್ಕಾರ್ ಬರೆದ ಒಂದಿಷ್ಟು ಕವಿತೆಗಳು
  ರಮೇಶ್ ಸೋಗೆಮನೆ ಬರೆದ ದಿನದ ಕವಿತೆ
  ಎಸ್.ಕುಮಾರ್ ಅನುವಾದಿಸಿದ ಕ್ಯೂಬನ್ ಕವಿತೆ
  ಅನು ಪಾವಂಜೆ ಬರೆದ ದಿನದ ಕವಿತೆ
  ಕವಿ ಮತ್ತು ಕುಣಿಕೆದಾರನ ಯುಗದ ಕುಂದೇರಾ
  ಡಿ.ಎಸ್.ರಾಮಸ್ವಾಮಿ ಬರೆದ ದಿನದ ಕವಿತೆ
  ಬಸವಣ್ಣೆಪ್ಪ ಕಂಬಾರ ಬರೆದ ದಿನದ ಕವಿತೆ
  ಲಕ್ಷ್ಮಿ ಟಿ.ಎನ್. ಬರೆದ ದಿನದ ಕವಿತೆ
  ‘ಮಾಸ್ತಿ’ ಹುಟ್ಟು ಹಬ್ಬಕ್ಕೆ ನಿಸಾರ್ ಬರೆದ ಕವಿತೆ
  ಕಲಿಗಣನಾಥ ಗುಡದೂರು ಬರೆದ ಕತೆ `ಗಾಂಧಿಕಟ್ಟೆ'
  ನಾಗಶ್ರೀ ಶ್ರೀರಕ್ಷ ಬರೆದ ದಿನದ ಕವಿತೆ