Advertisement
ದೀಪಾ ಫಡ್ಕೆ

ದೀಪಾ ಫಡ್ಕೆ ಬೆಂಗಳೂರು ನಿವಾಸಿ. ಹರಿದಾಸ ಸಾಹಿತ್ಯದಲ್ಲಿ ಅಧ್ಯಯನ ನಡೆಸಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ ಪಡೆದಿದ್ದಾರೆ. ದೀಪಾ ಚಂದನ ಮತ್ತು ಉದಯ ಟಿವಿಯಲ್ಲಿ ಹಲವು ವರ್ಷಗಳ ಕಾಲ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದರು.

ಏಳು ಪುಣ್ಯದ ಕೆರೆಗಳನ್ನು ಕೊಟ್ಟವರು ತೀರಿಹೋದರು

ನೋಡಲು ಬಿಕಾರಿಯಂತೆ ತೋರುವ ಆದರೆ ಮಾತನಾಡಲು ತೊಡಗಿದರೆ ಸಂತನಂತೆ ಕಾಣುವ ಕಾಮೇಗೌಡರು ಒಣ ಪ್ರದೇಶವಾದ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದ ಪಾದದಲ್ಲಿ ಕೈಯ್ಯಾರೆ ತೋಡಿರುವ ಈ ಏಳು ಕೆರೆಗಳು ಕರ್ಮಯೋಗಿಯೊಬ್ಬ ನಲವತ್ತು ವರ್ಷಗಳಿಂದ ನಡೆಸಿರುವ ಕಾಯಕದಂತೆ ಬೆಳಗುತ್ತಿವೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ತಾವು ಕಟ್ಟಿದ ಹದಿನಾರು ಕೆರೆಗಳನ್ನು ಇಲ್ಲೇ ಬಿಟ್ಟು ತಾವು ಮಾತ್ರ ಇಂದು ಬೆಳಗ್ಗೆ ತೀರಿಹೋದರು. ಅವರ ಕುರಿತು ಅಬ್ದುಲ್ ರಶೀದ್ ಬರೆದಿದ್ದ ವ್ಯಕ್ತಿಚಿತ್ರ ನಿಮ್ಮ ಓದಿಗೆ

Read More

ಸಂಧ್ಯಾರಾಣಿ ಸಿನಿ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

ಕಣ್ಣು ಮುಚ್ಚಿಕೊಂಡು ಓದುವ ಹಾಗಿದ್ದರೆ ಸಿನೆಮಾ ನೋಡಬೇಕಾಗಿಲ್ಲ ಅನ್ನುವಷ್ಟು ಕಣ್ಣಿಗೆ ಕಟ್ಟುವ ಬರವಣಿಗೆಗಳು ಅವು. ಬರೀ ಕಣ್ಣಿಗೆ ಮಾತ್ರವಲ್ಲ. ಸಿನೆಮಾದ ಸದ್ದುಗಳನ್ನು ಕಿವಿಗೆ, ಭಾವಗಳನ್ನು ಮನಸ್ಸಿಗೆ, ಕ್ಯಾಮರಾದ ಕೋನಗಳನ್ನು ಮಿದುಳಿಗೆ ಮತ್ತು ಸಿನೆಮಾ ಕೊನೆಗೆ ಉಂಟುಮಾಡುವ ತರ್ಕಗಳನ್ನು ವೈಚಾರಿಕತೆಗೆ ಅಕ್ಷರಗಳಲ್ಲೇ ದಾಟಿಸಿಬಿಡುತ್ತಿದ್ದರು. ಎಲ್ಲೂ ತರ್ಕಗಳಿಲ್ಲ, ತಪ್ಪುವ ಎಳೆಗಳಿಲ್ಲ. ಸಿನೆಮಾ ಹೇಳುವುದನ್ನು ಪರದೆ ಎಳೆದ ಹಾಗೆ ಕ್ವಚಿತ್ತಾಗಿ ಹೇಳಿ ಮುಗಿಸಿ ಮುಂದಿನ ಹದಿನೈದು ದಿನಗಳಿಗಾಗಿ ಕಾಯುವಂತೆ ಮಾಡುತ್ತಿದ್ದರು. ಸಂಪಾದಕನೂ, ಓದುಗರೂ ಏಕಪ್ರಕಾರವಾಗಿ ಕಾಯುತ್ತಿದ್ದ ಕೆಲವೇ ಬರವಣಿಗೆಗಳಲ್ಲಿ ಸಂಧ್ಯಾರಾಣಿ ಅವರದ್ದೂ ಒಂದಾಗಿತ್ತು.
ಎನ್. ಸಂಧ್ಯಾರಾಣಿ ಬರೆದ ‘ಸಿನಿ ಮಾಯಾಲೋಕ’ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ