Advertisement

Category: ದಿನದ ಅಗ್ರ ಬರಹ

ಸಿಡ್ನಿಯಲ್ಲಿ ಕದಡಿದ ಶಾಂತಿ, ಮಾನಸಿಕ ಆರೋಗ್ಯ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಇಂತಹ ಸಮುದಾಯ ಶಾಂತಿ ಕದಡುವ ಘಟನೆಗಳು ನಡೆಯುವುದು ಅಪರೂಪ. ಕನಿಷ್ಟ ಶಿಕ್ಷಣ, ಮಧ್ಯಮ ವರ್ಗ ಸಮಾಜದ ಹೆಚ್ಚು ಜನರು ದುಡಿದು ಗಳಿಸಿ ಸಾಮಾನ್ಯ ಜೀವನ ನಡೆಸುವ ಮೌಲ್ಯವನ್ನಿಟ್ಟುಕೊಂಡು ಬದುಕುವವರು. ಒಂದು ರೀತಿಯಲ್ಲಿ ಹೇಳುವುದಾದರೆ ಏಕತಾನದಲ್ಲಿ ಚಲಿಸುವ ಸಮಾಜದ ಸ್ತರಕ್ಕೆ ಕುಂದು ಬಂದರೆ ಎಲ್ಲರಿಗೂ ತಬ್ಬಿಬ್ಬಾಗಿ ಬಿಡುತ್ತದೆ. ಸಿಡ್ನಿಯಲ್ಲಿ ನಡೆದ ಕಳೆದ ವಾರಾಂತ್ಯದ ಘಟನೆಯಿಂದ ಜನರು ವಿಚಲಿತರಾಗಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಹಿರಿಯ ಕಾದಂಬರಿಕಾರ ಕೆ.ಟಿ. ಗಟ್ಟಿ ನಿಧನ…

ಪ್ರವಾಸ ನಮಗಿಷ್ಟವಾಗುವುದು ಯಾವಾಗಲೂ ಮನೆಯಲ್ಲಿದ್ದು ಒಮ್ಮೊಮ್ಮೆ ಪ್ರವಾಸ ಹೋದಾಗ. ನಿರಂತರ ಪ್ರವಾಸದಲ್ಲಿರುವುದು ಎಷ್ಟು ರಸಹೀನ ಎಂದು ಗಗನಸಖಿಯರು ಮತ್ತು ಮೆಡಿಕಲ್ ರೆಪ್ರಸೆಂಟೇಟಿವ್‌ಗಳು ಹೇಳಿಯಾರು. ಬೇರೆ ದೇಶ, ಬೇರೆ ನಗರ, ಬೇರೆ ಮನೆ ಎಲ್ಲಾ ಅಷ್ಟೆ. ಸಾಮಾನ್ಯವಾಗಿ ‘ಅತ್ಯಂತ ಪ್ರೇಕ್ಷಣೀಯ ಸ್ಥಳ’ ಸುಪ್ರಸಿದ್ಧವಾಗಿರುತ್ತದೆ. ಅದು ಹಲವು ಬಾರಿ ಟೀವಿಯಲ್ಲಿ ಮತ್ತು ಸಿನಿಮಾದಲ್ಲಿ ಕಂಡ, ಪತ್ರಿಕೆ ಪುಸ್ತಕಗಳಲ್ಲಿ ಓದಿದ ಸ್ಥಳವೇ ಆಗಿರುತ್ತದೆ.
ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದು ಅವರು ಕೆಂಡಸಂಪಿಗೆಗೆ ಬರೆದ “ಬಿಸಿಲುಕೋಲು” ಸರಣಿಯ ಕೆಲ ಬರಹಗಳು ನಿಮ್ಮ ಓದಿಗೆ

Read More

ನೌಕರಿ ಬಿಟ್ಟ ಎಂ.ಟೆಕ್ ಪದವೀಧರ ಬಾವಿ ತೋಡಿದ: ಸಿದ್ದು ಸತ್ಯಣ್ಣನವರ ಬರಹ

ಸೂರ್ಯಕಾಂತ್ ಕೃಷಿಯೆಡೆಗಿನ ಸೆಳೆತ ಇತ್ತಲ್ಲ, ಅದೇನೂ ಸಣ್ಣದಲ್ಲ. ಆದರೆ ನೀರಿಲ್ಲದೆ ಕೃಷಿ ಕೆಲಸ ಮಾಡುವುದು ಹೇಗೆ? ಅದಕ್ಕಾಗಿ ಬೋರ್‍ವೆಲ್ ಉತ್ತರದಂತೆ ಕಾಣಿಸಿದರೂ ಅದು ಪರಿಹಾರವಾಗಿ ಕಾಣಲಿಲ್ಲ. ಅದಕ್ಕಾಗಿ ಬೋರ್‍ವೆಲ್ ಹಾಕಿಸಲು ಆತನ ಮನಸ್ಸು ಒಪ್ಪಲಿಲ್ಲ. ಸತತ ಐದು ತಿಂಗಳು ಒಬ್ಬರೇ ಬಾವಿ ತೋಡಿದರು. ಮೈಗೆ ಗಾಯ, ನೋವು ಎಲ್ಲಾ ಆದವು. ಆಗ ಜನರ ಪ್ರತಿಕ್ರಿಯೆ ಇತ್ತಲ್ಲ, ಅದು ಇರಿದದ್ದು ಮನಸ್ಸಿಗೆ; ಎಲ್ಲಾ ಗಾಯಕ್ಕಿಂತ ಹೆಚ್ಚು ಕಾಡಿದ್ದು ಅದೇ ಎನ್ನುವುದು ಸೂರ್ಯಕಾಂತ್ ಮನದಾಳ.
ಸಿದ್ದು ಸತ್ಯಣ್ಣವರ ಹೊಸ ಕೃತಿ “ಬೆಳಕಿನ ತೆನೆ”ಯ ಒಂದು ಬರಹ ನಿಮ್ಮ ಓದಿಗೆ

Read More

ಸುಲಭವಾಗಿಯೇ ಬಿದ್ದ ಸೀಲು!: ಗುರುಪ್ರಸಾದ ಕುರ್ತಕೋಟಿ ಸರಣಿ

ಚೆನ್ನೈನಲ್ಲಿ ತಮಿಳು ಬರದಿದ್ದರೆ ತುಂಬಾ ಕಷ್ಟ ಅಂತ ಗೊತ್ತಿತ್ತು. ಕಾರಿನಲ್ಲಿಯೇ ಅಲ್ಲಿಗೆ ಹೊಗಿದ್ದ ನಾವು ಅಲ್ಲೊಬ್ಬರಿಗೆ ಹೊಟೇಲ್‌ಗೆ ಹೇಗೆ ಹೋಗೋದು ಅಂತ ಮಾರ್ಗದರ್ಶನ ಕೇಳಿದ್ದಕ್ಕೆ ತಮಿಳಿನಲ್ಲೇ ವಿವರಣೆ ನೀಡಿದರು. ತಮಿಳು ಬರೋದಿಲ್ಲ ಅಂತ ಹೇಳುವಷ್ಟು ಮಾತ್ರ ತಮಿಳು ಕಲಿತಿದ್ದ ನಾನು ಹಾಗೆ ಹೇಳಿ ಅವರ ಬಳಿ ಹಿಗ್ಗಾಮುಗ್ಗ ಬೈಸಿಕೊಂಡೆ. ಚೆನ್ನೈಗೆ ಬಂದವರು ಯಾಕೆ ಬೇಗನೆ ತಮಿಳು ಕಲಿಯುತ್ತಾರೆ ಅಂತ ಆಗ ನನಗೆ ತಿಳಿಯಿತು! ಬೆಂಗಳೂರಿನಲ್ಲೂ ಕನ್ನಡ ಮಾತಾಡದ ನಮ್ಮ ಕನ್ನಡಿಗರಿಗೆ ಹೀಗೆಯೇ ಬೈಯಬೇಕು ಅಂತ ಅಂದುಕೊಂಡೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ನಾಲ್ಕನೆಯ ಬರಹ

Read More

ಕಲಿತ ಬುದ್ಧಿಗಳೇ ನಮ್ಮ ನೆರಳು: ಎಸ್ ನಾಗಶ್ರೀ ಅಜಯ್ ಅಂಕಣ

ಎಷ್ಟೋ ಜನ ಸರಳತೆ, ಸಹೃದಯತೆ, ಸಹನೆ, ಕರುಣೆಯನ್ನು ನಂಬದೆ ಡಂಭಾಚಾರ, ನಾಟಕ, ಕೃತಕತೆ ಎಂಬ ಹಣೆಪಟ್ಟಿ ಕಟ್ಟಿ ಸಂಶಯದಿಂದಲೇ ಎದುರುಗೊಳ್ಳುತ್ತಾರೆ. ಹಣದೊಂದಿಗೆ ಮದ, ಅಧಿಕಾರದೊಂದಿಗೆ ದರ್ಪ, ಶ್ರೀಮಂತಿಕೆಯೊಂದಿಗೆ ಖಾಯಿಲೆ, ಬಡತನದೊಂದಿಗೆ ನೆಮ್ಮದಿ ಇದ್ದಿರಲೇಬೇಕೆಂದು ಭಾವಿಸಿರುತ್ತಾರೆ. ಅತ್ಯಂತ ರಂಜನೀಯವಾಗಿ ಅದನ್ನು ಬಣ್ಣಿಸಿಯೂ ತೋರುತ್ತಾರೆ. ಪ್ರತಿಯೊಬ್ಬ ಮನುಷ್ಯನೂ ಭಿನ್ನ. ಪ್ರತಿಯೊಬ್ಬರ ಪರಿಸ್ಥಿತಿಯೂ ಭಿನ್ನ. ಒಂದೇ ಅಚ್ಚಿನಲ್ಲಿ ಅಳೆದು, ಸುರಿದು ತಯಾರಾದ ಬದುಕಲ್ಲ ಎಲ್ಲರದ್ದು.
ಎಸ್.‌ ನಾಗಶ್ರೀ ಅಜಯ್‌ ಬರೆಯುವ ‘ಲೋಕ ಏಕಾಂತ’ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ