ಮನುಷ್ಯನ ಒಂದೇ ಜನ್ಮದಲ್ಲಿ ಹಲವು ಜನ್ಮಗಳು – ಏನಿದರ ಮರ್ಮ?: ಎಲ್. ಜಿ. ಮೀರಾ ಅಂಕಣ
ನಮ್ಮ ಗುರುತು ನಮಗೇ ಸಿಗದಷ್ಟು ನಾವು ಬದಲಾವುಗುವುದರ ಮರ್ಮ ಏನು? ಅದೂ ಅಲ್ಲದೆ ಎಲ್ಲರೂ ಹೀಗಾಗುವುದಿಲ್ಲ. ಎಲ್ಲ ಸಿದ್ಧಾರ್ಥರೂ ಬುದ್ಧರಾಗುವುದಿಲ್ಲ, ಎಲ್ಲ ನವಕೋಟಿ ನಾರಾಯಣರೂ ಪುರಂದರದಾಸರಾಗುವುದಿಲ್ಲ, ಎಲ್ಲ ಅಂಗುಲಿಮಾಲರೂ ಬೌದ್ಧಭಿಕ್ಷುವಾಗುವುದಿಲ್ಲ. ಹೀಗೆ ತಮ್ಮನ್ನು ತಾವು ಗುರುತೇ ಸಿಗದಂತೆ ನವೀಕರಿಸಿಕೊಳ್ಳಲು ಎಲ್ಲರಲ್ಲೂ ಇಲ್ಲದ ಏನೋ ಒಂದು ಗುಣವಿಶೇಷ ಈ ವ್ಯಕ್ತಿಗಳಲ್ಲಿ ಇರಬೇಕು ಅಥವಾ ಹೀಗೆ ಬದಲಾವುಗುವುದಕ್ಕಾಗಿ ಏನೋ ಒಂದು ಬಲವಾದ ಕಾರಣವನ್ನು ಬದುಕು ನಿರ್ಮಿಸಿರಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತಾರನೆಯ ಬರಹ


