Advertisement

ಎಸ್. ಗಂಗಾಧರಯ್ಯ ಅನುಭವ ಕಥಾನಕ “ಕಾಡ ಕಕ್ಕೆ” ಇಂದಿನಿಂದ…

ನಾನು ಸೋಮ್ಲಾನಾಯಕ್‌ರನ್ನು ಎಷ್ಟು ಹಚ್ಚಿಕೊಂಡಿದ್ದೆ ಅಂದರೆ ಅವರೊಂದಿಗೆ ಕೆಲವೊಮ್ಮೆ ಅವರುಗಳು ಮಲಗುತ್ತಿದ್ದ ಆ ಹೊಂಗೆಯ ಮರದಡಿಯಲ್ಲೇ ಮಲಗುತ್ತಿದ್ದೆ. ಬೇಸಿಗೆಯ ಬೆಳದಿಂಗಳಿನಲ್ಲಿ ಆ ಏಕಾಂತ, ಆ ಹಾಲು ಚೆಲ್ಲಿದಂತ ಬೆಳದಿಂಗಳು, ಹೊಂಗೆ ಸೀಗೆ ಹೂಗಳ ಆಹ್ಲಾದಕರ ಘಮಲು ಇಂದಿಗೂ ಮಾಸಿಲ್ಲ. ಆ ತಂಗಾಳಿ, ಅದರೊಂದಿಗೆ ಅಡ್ಡಾಡುತ್ತಿದ್ದ ಯಾರದೋ ಹೊಲದಲ್ಲಿ ಹಾಕಿರುತ್ತಿದ್ದ ಮಂದೆಯಿಂದ ಕುರಿ, ಮೇಕೆಗಳ ಕೂಗು, ನಾಯಿಗಳ ಬೊಬ್ಬಿರಿಯುವಿಕೆ, ಕುರಿಗಾಹಿಗಳು ಹಾಡುತ್ತಿದ್ದ ಹಾಡುಗಳು, ಜಲ್ಲೆ ಗಾಡಿಯವರ ಅರ್ಥವಾಗದ ಭಾಷೆಯ ಮಾತುಗಳ ಸಂಗೀತ ಮಾಧುರ್ಯ ಇಂದಿಗೂ ಮರೆಯಾಗಿಲ್ಲ.
ಕನ್ನಡದ ಕತೆಗಾರ ಎಸ್.‌ ಗಂಗಾಧರಯ್ಯ ಬರೆಯುವ ಅನುಭವ ಕಥನ “ಕಾಡ ಕಕ್ಕೆ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Loading

ಅಂಕಣ

Latest

ಕನ್ನಡ ವಿಜ್ಞಾನ ಸಂವಹನಕ್ಕೆ ಡಾ. ಕೆ. ಶಿವರಾಮ ಕಾರಂತರ ಕೊಡುಗೆ: ಎಲ್. ಜಿ. ಮೀರಾ ಅಂಕಣ

ಇಂತಹ ವಿಚಾರ ಮನಸ್ಸಿಗೆ ಬಂದ ಮೇಲೆ ಕಾರಂತರು ಸುಮ್ಮನೆ ಕೂರುವ ಜಾಯಮಾನದವರಲ್ಲ. ಮಕ್ಕಳಿಗೆ ತಮ್ಮ ಜಿಲ್ಲೆಯಾದ ದಕ್ಷಿಣಕನ್ನಡದ ಪರಿಚಯವನ್ನು ಸ್ವಾರಸ್ಯಕರವಾಗಿ ಮತ್ತು ಚಿತ್ರಸಹಿತವಾಗಿ ಮಾಡಿಕೊಡುವ `ಚಿತ್ರಮಯ ದಕ್ಷಿಣಕನ್ನಡ’ ಕೃತಿಯನ್ನು ರಚಿಸಿಯೇಬಿಟ್ಟರು. ಇದಕ್ಕಾಗಿ ಜಿಲ್ಲೆಯ ತುಂಬ ಓಡಾಡಿ ಅನೇಕ ಛಾಯಾಚಿತ್ರಗಳನ್ನು ತೆಗೆದರು, ಚಿತ್ರಗಳನ್ನು ಸ್ವತಃ ಬರೆದರು! ಮುಂದೆ ಮಕ್ಕಳಿಗಾಗಿ ಮತ್ತು ಆಸಕ್ತ ದೊಡ್ಡವರಿಗಾಗಿ `ದಕ್ಷಿಣ ಹಿಂದೂಸ್ಥಾನ’ ಕೃತಿಯನ್ನು ಹಾಗೂ `ಬಾಲಪ್ರಪಂಚ’, `ವಿಜ್ಞಾನ ಪ್ರಪಂಚ’ ಎಂಬ ವಿಶ್ವಕೋಶಗಳನ್ನು ರಚಿಸಿದರು. ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೈದನೆಯ ಬರಹ

ಸಾಹಿತ್ಯ

ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಭಾಷಣ

ಇವತ್ತು ಇಲ್ಲಿ ಈ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಈ ಬಿರುಬಿಸಿಲ ಹೊತ್ತು ಅವರು ಯಾರೂ ಇಲ್ಲಿ ಇಲ್ಲ. ಆದರೆ ಅವರ ಹಾಗಿರುವ ಹಲವು ಹಾಡುಗಾರರೂ ಇಲ್ಲೇ ಅಕ್ಕಪಕ್ಕ ತೋಟದಲ್ಲಿ ಕೆಲಸ ಮಾಡುತ್ತಿರಬಹುದು. ಅಥವಾ ಅವರ ಜಾಗವನ್ನು ಅಸ್ಸಾಮಿನಿಂದ ಬಂಗಾಳದಿಂದ ಬಂದ ಕೆಲಸಗಾರರು ವಹಿಸಿಕೊಂಡಿರಬಹುದು. ಅವರಲ್ಲೂ ಇಂತಹ ಕಥೆಗಾರರಿರಬಹುದು. ಸುಮಾರು ಐವತ್ತು ವರ್ಷಗಳ ಹಿಂದೆ ಅಸ್ಸಾಮಿನಿಂದ ಜೇನುಪೆಟ್ಟಿಗೆಗಳನ್ನು ಇಡಲು ದಾಸ್ ಎಂಬ ಯುವಕ ಬಂದಿದ್ದ. ಅವನೂ ಆಗ ಬಾಲಕನಾಗಿದ್ದ ನನಗೆ ಕಥೆಗಳನ್ನು ಹೇಳುತ್ತಿದ್ದ. ಈಗ ಬಹುಶಃ ಆತ ಎಲ್ಲಿರಬಹುದೋ ಗೊತ್ತಿಲ್ಲ. ಆದರೆ ಆತ ನನ್ನ ಕಥಾ ಪಾತ್ರವಾದ. ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ನಡೆದ “ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ”ನ ಅಧ್ಯಕ್ಷರಾದ ಅಬ್ದುಲ್ ರಶೀದ್ ಭಾಷಣ ನಿಮ್ಮ ಓದಿಗೆ

ಸರಣಿ

ನಂಬಿ ಕೆಟ್ಟವರಿಲ್ಲವೋ ಮನುಜ….: ಬಸವನಗೌಡ ಹೆಬ್ಬಳಗೆರೆ ಸರಣಿ

ಅವನ ಮಾತು ಕೇಳಿದ ಮನಸ್ಸು ಇನ್ನೊಂದು ರೀತಿ ಯೋಚನೆ ಮಾಡಲು ಶುರು ಮಾಡ್ತು. ಸುಮ್ಮನೇ ಕೆಲಸಕ್ಕೆ ಸೇರದೇ ಮೆಡಿಕಲ್ ರೆಪ್ ಕೆಲಸದಲ್ಲಿ ಮುಂದುವರೆದರೆ ಹೇಗೆ? ಎಂದು ಯೋಚಿಸಿದೆ. ಇದಕ್ಕೆ ಪೂರಕವಾಗಿ ಹಲವಾರು ನನ್ನ ಮೆಡಿಕಲ್ ರೆಪ್ ಗೆಳೆಯರು ಅಲ್ಲಿ ಪೆನ್ಶನ್ ಇಲ್ವಂತೆ. ಸುಮ್ನೇ ಇಲ್ಲೇ ಇದ್ಬಿಡು ಎಂದರು. ನಾನು ಇದೇ ರೀತಿ ಮಾಡಬೇಕು ಎಂದುಕೊಂಡರೆ ನಮ್ಮ ಸಂಬಂಧಿಕರು ಇದಕ್ಕೆ ಒಪ್ಪಲಿಲ್ಲ. ಸರ್ಕಾರಿ ಕೆಲಸ ಸಿಗೋಕೂ ಪುಣ್ಯ ಮಾಡಿರಬೇಕು ಈ ರೀತಿ ಮಾಡಿ ತಿನ್ನೋ ಅನ್ನದಾಗೆ ಕಲ್ಲು ಹಾಕಿಕೊಳ್ಳಬೇಡ ಎಂದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೆರಡನೆಯ ಕಂತು ನಿಮ್ಮ ಓದಿಗೆ

ಪ್ರವಾಸ

ಹಿಂಡ್ಲು ಮನೆಯ ಹಾದಿಯಲ್ಲಿ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಇದಕ್ಕೂ ಮುಂಚೆ ಹತ್ತಾರು ಚಾರಣ ಮಾಡಿದ ಅನುಭವವಿದ್ದ ನನಗೆ ಈಗ ರಕ್ತ ಒಸರಿದ್ದು ಹೇಗೆಂದು ಹೊಳೆದು ಕೊಂಚ ಸಮಾಧಾನವಾಯಿತು. ನಾನು ಗಣೇಶನ ಬಳಿಗೆ ಓಡಿ ಗಾಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. ಒಂದು ದೊಡ್ಡ ಗಾಯ ಮಾತ್ರವಿತ್ತು. ಇನ್ನೊಂದು ಗಾಯ ಸುಮಾರು 5 ಸೆ.ಮೀ. ಆಚೆಗಿತ್ತು. ಹಾಗಾಗಿ ಆತ ಇದು ಹಾವು ಕಡಿದದ್ದಲ್ಲಾ ಎಂದು ತೀರ್ಪಿತ್ತೆ. ಹಾವಾಗಿದ್ದರೆ ಗಾಯಗಳೆರಡು ಹತ್ತಿರ ಹತ್ತಿರವಿರಬೇಕಿತ್ತು. ಹಾಗಾದರೆ ರಕ್ತ?! ಎಂದು ಉಳಿದವರೆಲ್ಲಾ ಕಿರುಚಿದರು. ಅದು ಇಂಬಳ ಎಂಬ ಜೀವಿಯ ಕೆಲಸ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಬರಹ

ವ್ಯಕ್ತಿ ವಿಶೇಷ

ಹೆಣ್ಣಿನ ನೋವಿಗೂ ಬಣ್ಣವೇ ಮುಲಾಮು: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಟ್ಟೆ ಜಾರಿತೋ ಅಥವಾ ನಾನೇ ಕದಲಿಸಿದೆನೋ ಮಾಂಸವೆಲ್ಲ ತುಂಡುತುಂಡಾಗಿ ಹರಿದುಬಂತು. ಗರ್ಭದಲ್ಲಿ ಭ್ರೂಣದ ಮಾಂಸ ಉಳಿದಿತ್ತೋ ಏನೊ, ‘ನನ್ನನ್ನು ಬೇಡವೆನ್ನುವ ಮೊದಲು ನನ್ನ ಹೇಳಿ-ಕೇಳಿ ಮಾಡಿದ್ದೀಯಾ? ಇಲ್ಲ ತಾನೆ, ಮತ್ತೆ ನಾನೇಕೆ ನಿನ್ನ ಒಪ್ಪಿಗೆ ಕೇಳಲಿ?’ ಎಂಬಂತಿತ್ತು ಆ ಸನ್ನಿವೇಶ. ಹಾರಿದ ಜಾಗದ ಸುತ್ತಲೂ ಮಾಂಸ ಚೂರಾಗಿ ಚೆಲ್ಲಿಬಿದ್ದಿತ್ತು. ಏನೂ ಮಾಡಲಾರದೆ, ತೊಟ್ಟ ಬಟ್ಟೆಯನ್ನೆಲ್ಲ ಹರಡಿ ಅಲ್ಲಿಯೇ ಸುಮ್ಮನೆ ಕುಳಿತೆ. ನೇಪಥ್ಯದಲ್ಲಿ ಪರದೆ ಎಳೆಯುವವರಿಗೂ ಏನಾಗುತ್ತಿದೆ ಎಂದು ಗೊತ್ತಾಗಿತ್ತು. ಬೆಳಕನ್ನು ಆರಿಸಿ, ಪರದೆಯನ್ನು ಎಳೆದೇಬಿಟ್ಟರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೈದನೆಯ ಕಂತು

ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ವೈದೇಹಿ ಬರಹ

ಏನು ಕಾರಣವೋ, ಮದುವೆಯಾಗಿಯೂ ಒಬ್ಬಂಟಿಯಿದ್ದರು. ಬರೆಯುತ್ತಿದ್ದಂತೆ, ಉಸಿರನ್ನು ನಡುನಡುವೆ ಸಶಬ್ದ ಒಳಗೆಳೆದುಕೊಂಡು ಸೇಂಕಿ ಮಾತಾಡುವ ಅವರ ಪರಿ ಅಚ್ಚ ನೆನಪಿನಿಂದ ಹೇಗೆ ಎದ್ದು ಬರುತ್ತಿದೆ! ಹೋಗಲಿ, ಹೊಲಿಗೆ ದುಡ್ಡು ಇಷ್ಟಾಯಿತು ಅಂತ ಹೇಳುವುದರಲ್ಲಾದರೂ ಸಂಕೋಚ ಬಿಡುವರೆ? ಇಲ್ಲ. ಹೇಳಿದ ಮೇಲೆ ಈಗ ಇಟ್ಟುಬಿಡಿ ಅಂತ ಅಂದವರೂ ಅಲ್ಲ. ಸ್ವಲ್ಪ ಕೊಟ್ಟು ಉಳಿದದ್ದು ಎರಡುದಿನ ಬಿಟ್ಟು ಕಳಿಸಿಕೊಡುತ್ತೇನೆ ಎಂದರೆ ‘ಆಯಿತಪ್ಪ, ಅಡ್ಡಿಲ್ಲ ಅಡ್ಡಿಲ್ಲ’. ಕೊಟ್ಟ ದುಡ್ಡನ್ನು ಎದುರೇ ಎಣಿಸಿದವರೂ ಅಲ್ಲ. ನನಗೆ ತಿಳಿದಂತೆ ದುಡ್ಡಿನ ಮಟ್ಟಿಗೆ ಅವರಿಗೆ ಮೋಸಮಾಡಿದ ಮನೆಗಳೂ ಇಲ್ಲ. ಬಿಡಿ. "ಹಳೆಯ ಪುಟಗಳಿಂದ..." ಸರಣಿಯಲ್ಲಿ ಕನ್ನಡದ ಅನುಪಮ ಲೇಖಕಿ ವೈದೇಹಿ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಸಿ.ಬಿ.ಐನಳ್ಳಿ ಬರೆದ ಮೂರು ಕವಿತೆಗಳು

"ಆಡು ಕುರಿ ಜೀವಜಂತುಗಳ ಸಲಹಿ ಮಳೆ ಬೆಳೆ ಬರದಲಿ ನೆರವಾಗಿ ಭಾವ ಬುದ್ಧಿಯ ಸಸಿಗಳಿಗೆ ಗೊಬ್ಬರವಿಡುವುದೆಲ್ಲಾ ಜೀವಮತವೇ ! ನಿತ್ಯದ ಕೃತಿಗಳ ಒಳಪದರದಲಿ ಹಿರೀಕರ ಧ್ವನಿ ಕೇಳಿದಂತಾಗಿ ಒಮ್ಮೆಲೇ ಚಕಿತನಾಗುತ್ತೇನೆ"-ಸಿ.ಬಿ.ಐನಳ್ಳಿ ಬರೆದ ಮೂರು ಕವಿತೆಗಳು

ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ”

ನವತೀರದಲ್ಲಿ, ಒಂದು ಸಂಜೆ ಮೀರಾ ದಿಬ್ಬದ ಮೇಲೆ ನಿಂತು, ಲೈಟ್‌ಹೌಸ್ ಇದ್ದ ಜಾಗವನ್ನೇ ನೋಡುತ್ತಿದ್ದಳು. ನಮಗೆ ಪ್ರಿಯವಾದವರನ್ನು ಕಳೆದುಕೊಂಡಾಗ ನಾವು ಲೆಕ್ಕ ಹಾಕುತ್ತೇವಲ್ಲಾ – ಅವರು ನಮಗೆ ಏನು ಕೊಟ್ಟರು, ಏನನ್ನು ಅರ್ಧಕ್ಕೇ ಬಿಟ್ಟುಹೋದರು, ಅವರನ್ನು ನೋಡಿಯೇ ನಾವು ಏನೇನು ಕಲಿತೆವು ಎಂದು – ಹಾಗೆ ಅವಳೂ ಲೆಕ್ಕ ಹಾಕುತ್ತಿದ್ದಳು. ತನ್ನ ಅಣ್ಣನ ಕೆಲಸದ ರೀತಿ, ಆತನ ಏಕಾಗ್ರತೆ, ಸಮಸ್ಯೆ ಕಂಡರೆ ಬಿಡದೆ ಅಂಟಿಕೊಳ್ಳುವ ಅವನ ಛಲ – ಎಲ್ಲವನ್ನೂ ನೆನಪಿಸಿಕೊಂಡಳು. ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ