ಇಂದಿನ ಮಂದಿಯ ಬಿಂಬದ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ
ವಿಲಿಯಮ್ಸ್ ಪ್ರಕಾರ ಟೆಲಿವಿಷನ್ ಕೇವಲ ಒಂದು ತಾಂತ್ರಿಕತೆಯಲ್ಲ, ಅದು ಒಂದು ಸಾಂಸ್ಕೃತಿಕ ರೂಪವೂ ಹೌದು. ಅದರಲ್ಲಿ ಜಾಹೀರಾತುಗಳು ಧಾರಾವಾಹಿಗಳ ನಡುವೆ ‘ಅಕಸ್ಮಾತ್ತಾಗಿ’ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅವೇ ಧಾರಾವಾಹಿಗಳನ್ನು ರೂಪಿಸುವ ಶಕ್ತಿಗಳು. ಪ್ರಾಯೋಜಕರು ತಮಗೆ ಬೇಕಾದ ನೋಡುಗರನ್ನು ಅದರ ಮೂಲಕ ಸೃಷ್ಟಿಸಿಕೊಳ್ಳುತ್ತಿರುತ್ತಾರೆ. ಆ ಪೂರಕತೆಯನ್ನು ಅರ್ಥಮಾಡಿಕೊಳ್ಳುವುದು ತುಂಬ ಮುಖ್ಯ. ಅಲ್ಲಿ ಈ ಒಂದರ ದೃಶ್ಯಗುಣ ಮತ್ತು ದನಿಗುಣ ಆ ಇನ್ನೊಂದಕ್ಕೆ ಕುಮ್ಮಕ್ಕು ನೀಡುತ್ತಿರುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೇಳನೆಯ ಬರಹ


