ಕುದಿಯದ ಕಡಲು: ವಿನಾಯಕ ಅರಳಸುರಳಿ ಅಂಕಣ
ಇಂದಿಗೂ ನನ್ನನ್ನು ಇದೊಂದು ಪ್ರಶ್ನೆ ಕಾಡುತ್ತಲೇ ಇದೆ: ನಾವು ಓದಿಕೊಳ್ಳುವ ಸಾಹಿತ್ಯ, ಕೇಳಿಸಿಕೊಳ್ಳುವ ಕಿವಿ ಮಾತು, ಪ್ರತಿ ದಿನ ನೋಡುವ ಯಾರದ್ದೋ ಬದುಕಿನ ನಿದರ್ಶನಗಳು, ತತ್ವ, ಸಿದ್ಧಾಂತ, ಆದರ್ಶ, ಭಾಷಣಗಳು… ವೈಯಕ್ತಿಕ ಬದುಕಿನ ತಿರುವುಗಳಿಗೆ ಇವು ಹೇಗೆ ಅನ್ವಯವಾಗುತ್ತವೆ? ಯಾರದೋ ವಿಷಯದಲ್ಲಿ ಎಷ್ಟೆಲ್ಲ ಪ್ರಬುದ್ಧವಾಗಿ ದಾರಿ ಹೇಳುವ ನಾವು ನಮ್ಮ ಪ್ರಯಾಣದಲ್ಲಿ ಮಾತ್ರ ಏಕೆ ಓಲಾಡುತ್ತ ನಡೆಯುತ್ತೇವೆ? ಥಿಯರಿ ಹಾಗೂ ಪ್ರಾಕ್ಟಿಕಲ್ಗಳ ನಡುವಿನ ವ್ಯತ್ಯಾಸ ಇಷ್ಟು ಅಗಾಧವೇಕೆ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

