ನಂಬಿ ಕೆಟ್ಟವರಿಲ್ಲವೋ ಮನುಜ….: ಬಸವನಗೌಡ ಹೆಬ್ಬಳಗೆರೆ ಸರಣಿ
ಅವನ ಮಾತು ಕೇಳಿದ ಮನಸ್ಸು ಇನ್ನೊಂದು ರೀತಿ ಯೋಚನೆ ಮಾಡಲು ಶುರು ಮಾಡ್ತು. ಸುಮ್ಮನೇ ಕೆಲಸಕ್ಕೆ ಸೇರದೇ ಮೆಡಿಕಲ್ ರೆಪ್ ಕೆಲಸದಲ್ಲಿ ಮುಂದುವರೆದರೆ ಹೇಗೆ? ಎಂದು ಯೋಚಿಸಿದೆ. ಇದಕ್ಕೆ ಪೂರಕವಾಗಿ ಹಲವಾರು ನನ್ನ ಮೆಡಿಕಲ್ ರೆಪ್ ಗೆಳೆಯರು ಅಲ್ಲಿ ಪೆನ್ಶನ್ ಇಲ್ವಂತೆ. ಸುಮ್ನೇ ಇಲ್ಲೇ ಇದ್ಬಿಡು ಎಂದರು. ನಾನು ಇದೇ ರೀತಿ ಮಾಡಬೇಕು ಎಂದುಕೊಂಡರೆ ನಮ್ಮ ಸಂಬಂಧಿಕರು ಇದಕ್ಕೆ ಒಪ್ಪಲಿಲ್ಲ. ಸರ್ಕಾರಿ ಕೆಲಸ ಸಿಗೋಕೂ ಪುಣ್ಯ ಮಾಡಿರಬೇಕು ಈ ರೀತಿ ಮಾಡಿ ತಿನ್ನೋ ಅನ್ನದಾಗೆ ಕಲ್ಲು ಹಾಕಿಕೊಳ್ಳಬೇಡ ಎಂದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೆರಡನೆಯ ಕಂತು ನಿಮ್ಮ ಓದಿಗೆ

