ಶ್ರೀರಂಗನಾಯಕ ರಾಜೀವ ಲೋಚನ ರಮಣ…: ವಿನಾಯಕ ಅರಳಸುರಳಿ ಅಂಕಣ
ಕೋಣೆ ಹಾಗೂ ಅದರ ಹಾಸಿಗೆಗಷ್ಟೇ ಸೀಮಿತವಾಗಿ ಹೋದ ಅಜ್ಜನಿಗೆ ಇಡೀ ಮನೆಯಲ್ಲಿ ಸ್ವಲ್ಪವಾದರೂ ಮನೋರಂಜನೆಗೆ ಒದಗುತ್ತಿದ್ದವನು ನಾನೊಬ್ಬನೇ. ಯಾವ್ಯಾವುದೋ ಸಿನಿಮಾ, ಭೂತ, ಪ್ರೇತದ ಕಥೆಗಳನ್ನು ಮನಸ್ಸಿನಲ್ಲಿ ಕಲ್ಪಿಸಿಕೊಂಡು ಅಂಗಳದಲ್ಲಿ ಡಿಶೂಂ ಡಿಶೂಂ ಎಂದು ಗಾಳಿಯೊಡನೆ ಗುದ್ದಾಡುತ್ತ ಸುಳಿದಾಡುತ್ತಿದ್ದ ನನ್ನನ್ನು ಗಣೇಶಾ ಎಂದು ಕರೆಯುತ್ತಿದ್ದ ಅಜ್ಜ ‘ಇಲ್ಲಿ ಜಗುಲೀಲಿ, ನನ್ನ ಎದುರೇ ಆಡು ಗಣೇಶಾ’ ಎಂದು ಗೋಗರೆಯುತ್ತಿದ್ದರು.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯಲ್ಲಿ ಹೊಸ ಬರಹ ನಿಮ್ಮ ಓದಿಗೆ


