ಸಂತಾಲಿ ಕವಿಯ ಸ್ತ್ರೀ ಸಂವೇದಿ ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ
ಇಲ್ಲಿ ನಾನು-ನೀನು ಅಂದರೆ ಸಮುದಾಯ ಉಳಿಯಬೇಕು, ಅವರಿಂದ ಅಂದರೆ ಹೊರಗಿನವರಿಂದ ನನ್ನನ್ನು ಕಾಪಾಡು ಎಂಬ ಬೇಡಿಕೆ ಇದೆ. ನಿನ್ನಿಂದ ಅಂದರೆ ದೌರ್ಜನ್ಯದ ಮೂಲವಾದ ಕುಟುಂಬ ಎಂಬ ವ್ಯವಸ್ಥೆಯಲ್ಲಿರುವ ಲಿಂಗ ತಾರತಮ್ಯದಿಂದ ತನ್ನನ್ನು ಕಾಪಾಡಿಕೊಳ್ಳಬೇಕು ಎನ್ನುವ ಆಗ್ರಹವಿಲ್ಲ. ಇದು ನನ್ನ ಗ್ರಹಿಕೆಗೆ ದಕ್ಕುವ ರೀತಿಯಲ್ಲಿ ಕಾಡನ್ನು ನಂಬಿದ, ಕೃಷಿಯ ಮೇಲೆಯೇ ಬದುಕುತ್ತಿರುವ ಸಮುದಾಯಕ್ಕೆ ಕುಟುಂಬ ಹೇಗಾದರೂ ಬದುಕಿ ಉಳಿಯಬೇಕು ಎನ್ನುವ ನೆಲೆಯಿಂದ ಹೊಮ್ಮಿದ ಒಂದು ಸತ್ಯ. ಕೃಷಿ ಕೆಲಸಕ್ಕೆಂದೇ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವ ಕೃಷಿಕ ಕುಟುಂಬಕ್ಕೆ ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಉಪದೇಶ ಮಾಡುವುದು ಅಧಿಕಪ್ರಸಂಗತನ ತಾನೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿನೆಂಟನೆಯ ಬರಹ

