ಅತ್ತಿ ಲಸಮಮ್ಮನೂ… ಜೂನಿ ಬೀರಮ್ಮನೂ…: ಸುವರ್ಣ ಚೆಳ್ಳೂರು ಸರಣಿ
ಇದನ್ನೆಲ್ಲಾ ಕೇಳಿದಾಗೊಮ್ಮೆ ಬೀರಮ್ಮ ಜೋರಾಗಿ ‘ಅಲಲೊ ಜಿಟ್ಟಿಗುಳ, ಬಿಳಿ ಧೋತ್ರ ಉಟ್ಗಂಡು ಮನ್ಯಾಗ ಹೆಂಡತಿ ಮಾಡಿರೊ ಅಡಿಗಿ ಉಂಡ್ಕಂತ, ಊರ್ ಒಣ ರಾಜಕೀಯ ಮಾಡಿಕ್ಯಂತ, ಅವರಿವರಿಂದ ಸುತ್ತಿಗ್ಯಂತ, ಅಜ್ಜ ಮಾಡಿದ್ದ ಆಸ್ತಿಗೆ ಜೋತಾಡಿಕ್ಯಂತ, ಊರಮಂದಿ ಬಗ್ಗೆ ಮಾತಾಡಿಕ್ಯಂತ ಊರ ಕಟ್ಟಿಮ್ಯಾಗ ಕುಂತಗಂಡು ಪಂಟ್ ಹೋಡಿತಿರಾದು ನೀವು. ನನ್ನಂಗ ದುಡದು ಉಂಡಿರೇನ್ ಯಾವತ್ತರಾ? ಅಜ್ಜ ನೆಟ್ಟಿರಾ ಆಲದ ಮರಕ್ಕ ಜೋತಾಡಾದಲ್ಲ, ನೀವು ದುಡದು ಉಣ್ಣಾದು ಕಲ್ತು ಆವಾಗ ನನ್ನ್ ಮುಂದ ಬಂದ್ ಇಂತಾ ಒಣ ಮಾತಾಡ್ರಿ ಕೇಳ್ತಿನಿ’. ಅವಳ ಮಾತೊಳಗಿದ್ದ ಗಟ್ಟಿತನಕ್ಕ ಅದೆಂಥಾ ದೊಡ್ಡೊರಾದರೂ ಅಂಜಿಕ್ಯಂತಿದ್ರು.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿಯ ಎಂಟನೆಯ ಬರಹ

