ಮೊದಲ ಶಾಲೆಯ ಪ್ರಾರಂಭದ ಅನುಭವಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ
ನಾನು ಆ ಮನೆಗೆ ಹೋಗುತ್ತೇನೆ ಎಂದು ತಿಳಿದು ಅವರು ಬಾಕಿ ಇರುವ ಕರೆಂಟ್ ಬಿಲ್ ಕಟ್ಟಿದ್ದರಂತೆ ಹಾಗೂ ಕ್ಲೀನ್ ಮಾಡಿಸಿದ್ದರಂತೆ. ಯಾವಾಗ ನಾನು ಹೋಗೋದಿಲ್ಲ ಎಂದು ತಿಳಿದ ಮೇಲೆ ನನ್ನ ಮೇಲೆ ಗರಂ ಆದರು. ಆದರೆ ಇದನ್ನು ತೋರಿಸಿಕೊಳ್ಳುವ ಹಾಗಿರಲಿಲ್ಲ. ಮನದಲ್ಲಿ ನನ್ನ ಬಗ್ಗೆ ಕೋಪವು ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಆಗ ಇವರೇ ನಮ್ಮ ಹೆಚ್ಚೆಂ ಆದ್ದರಿಂದ ನನಗೆ ಕಿರಿಕ್ ಕೊಡಲು ಶುರು ಮಾಡಿದರು. ರಜಾ ಕೇಳಿದಾಗ ತಕ್ಷಣ ಪ್ರತಿಕ್ರಿಯೆ ನೀಡದೇ ಇರುತ್ತಿದ್ದುದು, ಸುಖಾ ಸುಮ್ಮನೇ ಅದು ಮಾಡಿಲ್ಲ ಇದು ಮಾಡಿಲ್ಲ ಎಂದು ಹೇಳುತ್ತಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ಮೂರನೆಯ ಕಂತು ನಿಮ್ಮ ಓದಿಗೆ


