Advertisement

ನೀನು ಬೆಳೆದರೆ ನಾನು ಬೆಳೆವೆನು: ಚಿತ್ರಾ ವೆಂಕಟರಾಜು ಸರಣಿ

ಎಷ್ಟು ಸಲ ಪ್ರವೇಶ ಕೊಡಬಾರದ ಸೀನ್‌ಗಳಲ್ಲಿ ತಪ್ಪಿ ಪ್ರವೇಶ ಕೊಟ್ಟಿರುತ್ತೇವೆ, ಆಡಲೇಬೇಕಾದ ಮಾತನ್ನು ಆಡದೇ ಉಳಿದಿದ್ದೇವೆ. ಆಡಬಾರದಿದ್ದ ಸಂಭಾಷಣೆಗಳನ್ನು ಸುಲಭವಾಗಿ ಆಡಿಬಿಟ್ಟಿರುತ್ತೇವೆ. ಏನೇ ಮಾಡಲಿ ಒಮ್ಮೆ ಆ ನಾಟಕ ಮುಗಿದ ಮೇಲೆ ಮುಗಿಯಿತು… ಒಮ್ಮೆ ಪ್ರದರ್ಶನ ಮುಗಿದ ಮೇಲೆ ಮತ್ತೆ ಆ ದೃಶ್ಯದಲ್ಲಿ ನಮ್ಮ ಎಂಟ್ರಿ ಇಲ್ಲ. ಮತ್ತೆ ಬೇರೆಯದೇ ನಾಟಕದಲ್ಲಿ ಬೇರೆಯದೇ ಪಾತ್ರ! ನಾಟಕದ ಮಜಾ ಎಂದರೆ ಬದುಕಿಗಿಲ್ಲದ ಮರು ಪ್ರದರ್ಶನದ ಅವಕಾಶ ನಾಟಕದಲ್ಲಿದೆ. ಎಲ್ಲ ನಟರೂ ಒಪ್ಪಿದರೆ ಮತ್ತೆ ಅದೇ ನಾಟಕವನ್ನು ಆಡಬಹುದು. ಬೇಕಿದ್ದರೆ ಬೇರೆ ರೀತಿಯಲ್ಲಿ. ಆದರೆ, ಪ್ರತಿ ಬಾರಿಯೂ ಹೊಸದಾಗಿ ಅಭಿನಯಿಸಬೇಕು. ಕೊನೆಯ ದೃಶ್ಯದಲ್ಲಿ ಆಗುವ ಅವಘಡಗಳು ಗೊತ್ತಿದ್ದರೂ ಮೊದಲ ದೃಶ್ಯಗಳಲ್ಲಿ ಪಾತ್ರ ಖುಶಿಯಾಗಿಯೇ ಇರಬೇಕು!
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Loading

ಅಂಕಣ

Latest

ಕ್ರೌರ್ಯಕ್ಕೆ ಸಿಕ್ಕ ಮಕ್ಕಳು…: ಜಯಲಕ್ಷ್ಮಿ ಪಾಟೀಲ್ ಅಂಕಣ

ನಮ್ಮಲ್ಲೂ ಕೆಲಸ ಕೇಳಿ ಬಂದ ನೂರಾರು ಜನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ ರಾಜಕಾರಣಿ ಇದ್ದಾನೆ, ಹೈಸ್ಕೂಲು ಓದುತ್ತಿದ್ದ ದಾನಮ್ಮ ಎಂಬ ಹೆಣ್ಣುಮಗುವನ್ನು ಅತ್ಯಾಚಾರವೆಸಗಿ ಕೊಂದ ಸಹಪಾಠಿಗಳಿದ್ದಾರೆ, ಸೌಜನ್ಯಾ ಎಂಬ ಹುಡುಗಿ ಕಾಲೇಜಿಗೆ ಹೋದವಳು ಮರಳಿ ಮನೆ ತಲುಪದಂತೆ ಅತ್ಯಾಚಾರವೆಸಗಿ ಕೊಂದುಹಾಕಿದ ದುರುಳರಿದ್ದಾರೆ, ಜಾತಿಯ ಕಾರಣಕ್ಕಾಗಿ ಕರುಳ ಕುಡಿಯನ್ನೆ ಹೊಸಕಿಹಾಕಿದ ಹೆತ್ತವರಿದ್ದಾರೆ, ಧರ್ಮದ ಹೆಸರಲ್ಲಿ ಒಂಬತ್ತು ವರ್ಷದ ಹೆಣ್ಣುಮಗುವಿನ ಮೇಲೆ ದೇವಸ್ಥಾನದಲ್ಲೆ ಮುಗಿಬಿದ್ದು ಅತ್ಯಾಚಾರವೆಸಗಿದ ಮಹಾಮಹಿಮರಿದ್ದಾರೆ, ಹೆಂಗಸರು ಮನೆಯ ಹೊರಗೆ ದುಡಿಯತೊಡಗಿದರೆ ಅತ್ಯಾಚಾರಗಳಾಗುವುದು ಸಹಜ ಎಂಬರ್ಥದಲ್ಲಿ ಮಹಾಜ್ಞಾನಿ ರಾಜಕಾರಣಿಯೊಬ್ಬ ಹೇಳಿಕೆ ನೀಡಿ ಮೀಸೆ ತಿರುವುತ್ತಾನೆ... ಜಯಲಕ್ಷ್ಮಿ ಪಾಟೀಲ್ ಬರೆಯುವ "ಗರ್ದಿ ಗಮ್ಮತ್ತು" ಅಂಕಣ

ಸಾಹಿತ್ಯ

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಕ್ರಮ ತಪ್ಪಿದ ನಗರ”

"ನೀವು ಎಂದಾದರೂ ಆಕಾಶದ ನಕ್ಷತ್ರಗಳನ್ನು ಗಮನಿಸಿದ್ದೀರಾ?" ಅವನು ಕೇಳಿದ. ಅವನ ಧ್ವನಿ ಹಳೆಯ ರೇಡಿಯೋ ಸ್ಟೇಷನ್‌ನಿಂದ ಬರುವ ಸಿಗ್ನಲ್‌ನಂತೆ ಇತ್ತು. ಅದಕುತ್ತರವಾಗಿ "ಹೌದು, ನೋಡಿದ್ದೇನೆ.” ಎಂದೆ. "ಆಕಾಶದಲ್ಲಿ ನಕ್ಷತ್ರಗಳು ಸುಮ್ಮನೆ ಬಿದ್ದಿಲ್ಲ" ಅವನು ಹೇಳುತ್ತಾ ಒಂದು ನೋಟಿನ ಮೇಲೆ ಒಂದು ನಾಣ್ಯವನ್ನು ಇಟ್ಟ. "ಅವುಗಳಿಗೊಂದು ಕ್ರಮವಿದೆ. ಆ ಕ್ರಮ ತಪ್ಪಿದರೆ ಈ ಜಗತ್ತು ಕುಸಿದು ಬೀಳುತ್ತದೆ. ಈ ಸ್ಕೈವಾಕ್ ಕೆಳಗೆ ಹರಿಯುವ ಸಾವಿರಾರು ಕಾರುಗಳು, ಈ ದೊಡ್ಡ ದೊಡ್ಡ ಬಿಲ್ಡಿಂಗ್‌ಗಳು, ನಿಮ್ಮ ಕೈಯಲ್ಲಿರುವ ಈ ಕಾಫಿ ಕಪ್... ಎಲ್ಲವೂ ಒಂದು ನಿಖರವಾದ ಜಾಗದಲ್ಲಿ ಇರಬೇಕು." ಕಾರ್ತಿಕ್ ಕೃಷ್ಣ ಬರೆದ ಕತೆ “ಕ್ರಮ ತಪ್ಪಿದ ನಗರ” ನಿಮ್ಮಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ಸೇಫರ್ ಜೋನ್ ನಿಂದ ಹೊರಬರುವುದನ್ನು ಕಲೀಬೇಕು…: ಬಸವನಗೌಡ ಹೆಬ್ಬಳಗೆರೆ ಸರಣಿ

ಎಷ್ಟೋ ಜನಕ್ಕೆ ತಾವು ಈಗಿರುವ ಕೆಲಸ, ಸ್ಥಿತಿ ಸರಿಯಿಲ್ಲವೆಂದೆನಿಸಿರುತ್ತದೆ. ಯಾರನ್ನೇ ಕೇಳಲಿ ಈ ಕೆಲಸ ಸರಿಯಿಲ್ಲ ಅದು ಸರಿಯಿಲ್ಲ ಇದು ಸರಿಯಿಲ್ಲ ಎಂದು ದೂಷಣೆ ಮಾಡುತ್ತಿರುತ್ತಾರೆ. ಆದರೆ ತಮಾಷೆ ಅಂದ್ರೆ ಕಡೇವರೆಗೂ ಬೇರೆ ಕೆಲಸಕ್ಕೆ ಪ್ರಯತ್ನಿಸದೇ ಅದೇ ಕೆಲಸದಲ್ಲಿ ಮುಂದುವರೆಯುತ್ತಿರುತ್ತಾರೆ!! ಕೆಲವರಂತೂ ಅದೇ ಕೆಲಸದಲ್ಲಿದ್ದುಕೊಂಡು ಬೇರೆ ಕೆಲಸಕ್ಕೆ ಪ್ರಯತ್ನಿಸಿ ಯಶಸ್ವಿಯೂ ಆಗುತ್ತಾರೆ. ಇಲ್ಲಿ ಹೇಳೋಕೆ ಹೊರಟಿರೋದು ಏನಪ್ಪಾ ಅಂದ್ರೆ ನಾವು ಇದ್ದ ಸ್ಥಿತಿಯಲ್ಲಿ ಖುಷಿಯಾಗಿದ್ದುಕೊಂಡು ಬೇರೆಯದ್ದಕ್ಕೆ ಪ್ರಯತ್ನಿಸುತ್ತಾ ಇರಬೇಕು. ಸಿಕ್ಕರೆ ಒಳ್ಳೆಯದು, ಒಂದೊಮ್ಮೆ ಸಿಗದಿದ್ದರೆ ಈಗಿರುವ ಕೆಲಸವನ್ನು ಪ್ರೀತಿಸಬೇಕು. ಅದನ್ನು ಬಿಟ್ಟು ಬೇರೆಯದ್ದಕ್ಕೂ ಪ್ರಯತ್ನಿಸದೇ ಇರೋ ಕೆಲಸವನ್ನು ಗೊಣಗಿಕೊಂಡು ಮಾಡಿದರೆ ಅದು ನಮ್ಮ ನೆಮ್ಮದಿಗೆ ಲಾಸ್ ಅಷ್ಟೇ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತೈದನೆಯ ಕಂತು ನಿಮ್ಮ ಓದಿಗೆ

ಪ್ರವಾಸ

ಕೀರ್‌ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

ವ್ಯಕ್ತಿ ವಿಶೇಷ

ಅಭಿಮಾನಿಗಳ ಆಯರಿಯೂ, ಅಮ್ಮ ಹಾಕುತ್ತಿದ್ದ ಬರೆಗಳೂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಂದೊಂದು ಪ್ರಯೋಗದಲ್ಲೂ ಲೋಹಿತಾಶ್ವನ ಪಾತ್ರವನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೆಚ್ಚುಮಾಡಿಕೊಳ್ಳುತ್ತಿದ್ದೆ. ಜನರೆಲ್ಲ ಮನೆಗೆ ಬರಲು ಶುರುವಿಟ್ಟರು. ಭಾಗಮ್ಮನವರು ಇಂತಹದಕ್ಕೆಲ್ಲ ಸೊಪ್ಪೇ ಹಾಕುತ್ತಿರಲಿಲ್ಲ. ಎಂಟು ವರ್ಷ ಮೀರಿದಂತೆ ದೇಹ ಬದಲಾವಣೆಯಾಗುತ್ತಿತ್ತು. ನನ್ನ ಮುಖ, ಗಲ್ಲ, ಎದೆ, ಕೈ ತೋಳುಗಳು, ಇಡೀ ದೇಹವೇ ಅಗಲಿಸುತ್ತಿದ್ದ ವಯಸ್ಸು. ಅದಕ್ಕಾಗೋ ಅಥವಾ ಅಸೂಯೆಯಿಂದಲೋ ನಾನ್ಯಾರ ಬಳಿಯಾದರೂ ಮಾತಿಗೆಂದು ನಿಂತರೂ ಬೈದು, ಹೊಡೆದು ರಾದ್ಧಾಂತ ಮಾಡುತ್ತಿದ್ದರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಎಂಟನೆಯ ಕಂತು

ಸಂಪಿಗೆ ಸ್ಪೆಷಲ್

ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್

ಮಹಿಳೆಯರ ಬದುಕು ಸ್ವಾವಲಂಬಿಯಾಗಿರಬೇಕೆಂದು ಶಕ್ತಿದಾಯಕವಾಗಿ ಇರಬೇಕೆಂದು ಗಾಂಧಿ ಬಯಸಿದ್ದರು ಎಂಬುದನ್ನು ಮೂಕಮ್ಮ ಮತ್ತು ರಮಾ ಪಾತ್ರದ ಮೂಲಕ ನಾಟಕಕಾರರು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ರಮಾ ವಿಧವೆಯಾಗಿದ್ದರು ಮತ್ತೊಬ್ಬನನ್ನು ಪ್ರೀತಿಸಿ ಮರು ಮದುವೆ ಮಾಡಿಕೊಳ್ಳುವ ಉತ್ಸಾಹವನ್ನು ತೋರಿಸಿದ್ದು ಕೂಡ ಗಾಂಧಿ ವಿಚಾರಧಾರೆಗಳಿಗೆ ಮನಸೋತು. ರಮಾ ಮತ್ತು ರಹಿಮರ ಪ್ರೇಮ ಭಾವೈಕ್ಯತೆಯ ಪ್ರತೀಕವಾಗಿ ಹೊರಹೊಮ್ಮಿದೆ. 'ನಮ್ಮೊಳಗೊಬ್ಬ ಗಾಂಧಿ' ನಾಟಕದ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ವೈ ಬಿ ಹಾಲಬಾವಿ ಬರೆದ ಎರಡು ಗಜಲ್‌ಗಳು

"ಹಸಿರೇ ಇಲ್ಲದೇ ಉಸಿರಾಡುತ್ತಿವೆ ಊರು, ಶಹರ ಮೈಯೆಲ್ಲಾ ವಿಷವಾಗಿ ಅಶುದ್ಧ ಗಾಳಿ, ಅಸ್ವಸ್ಥ ಬೆಳಕನ್ನುಂಡು ನರಳುತ್ತಿವೆ ನಗರಗಳು ನರಕವಾಗಿ ಪ್ರೀತಿ, ನೀತಿ, ಸ್ನೇಹ ಇರದೇ ಹಳಸಿವೆ ಸಂಬಂಧಗಳು ಕಾಲ ಕಸವಾಗಿ ಯಾಂತ್ರಿಕ ನಗರ ಜೀವನ, ಉರುಳುತ್ತಿವೆ ದಿನಗಳು ಮೈಯೆಲ್ಲಾ ಸಾವಾಗಿ"- ವೈ ಬಿ ಹಾಲಬಾವಿ ಬರೆದ ಎರಡು ಗಜಲ್‌ಗಳು

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಕ್ರಮ ತಪ್ಪಿದ ನಗರ”

"ನೀವು ಎಂದಾದರೂ ಆಕಾಶದ ನಕ್ಷತ್ರಗಳನ್ನು ಗಮನಿಸಿದ್ದೀರಾ?" ಅವನು ಕೇಳಿದ. ಅವನ ಧ್ವನಿ ಹಳೆಯ ರೇಡಿಯೋ ಸ್ಟೇಷನ್‌ನಿಂದ ಬರುವ ಸಿಗ್ನಲ್‌ನಂತೆ ಇತ್ತು. ಅದಕುತ್ತರವಾಗಿ "ಹೌದು, ನೋಡಿದ್ದೇನೆ.” ಎಂದೆ. "ಆಕಾಶದಲ್ಲಿ ನಕ್ಷತ್ರಗಳು ಸುಮ್ಮನೆ ಬಿದ್ದಿಲ್ಲ" ಅವನು ಹೇಳುತ್ತಾ ಒಂದು ನೋಟಿನ ಮೇಲೆ ಒಂದು ನಾಣ್ಯವನ್ನು ಇಟ್ಟ. "ಅವುಗಳಿಗೊಂದು ಕ್ರಮವಿದೆ. ಆ ಕ್ರಮ ತಪ್ಪಿದರೆ ಈ ಜಗತ್ತು ಕುಸಿದು ಬೀಳುತ್ತದೆ. ಈ ಸ್ಕೈವಾಕ್ ಕೆಳಗೆ ಹರಿಯುವ ಸಾವಿರಾರು ಕಾರುಗಳು, ಈ ದೊಡ್ಡ ದೊಡ್ಡ ಬಿಲ್ಡಿಂಗ್‌ಗಳು, ನಿಮ್ಮ ಕೈಯಲ್ಲಿರುವ ಈ ಕಾಫಿ ಕಪ್... ಎಲ್ಲವೂ ಒಂದು ನಿಖರವಾದ ಜಾಗದಲ್ಲಿ ಇರಬೇಕು." ಕಾರ್ತಿಕ್ ಕೃಷ್ಣ ಬರೆದ ಕತೆ “ಕ್ರಮ ತಪ್ಪಿದ ನಗರ” ನಿಮ್ಮಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ