ಬಣ್ಣ ಹಚ್ಚುವ ಆಸೆಯೂ… ನನ್ನ ಅರಣ್ಯರೋಧನವೂ: ಜುಲೇಖಾ ಬೇಗಂ ಜೀವನ ವೃತ್ತಾಂತ
ಒಂಬತ್ತು ವರ್ಷದವಳಾದ ನನ್ನ ಕೈ ಬೆರಳುಗಳು ಇನ್ಹೇಗೆ ಇರುತ್ತದೆ ಹೇಳಿ! ಎಳೆಯ ಕೈಗಳಿಂದಲೇ ಆದಷ್ಟು ತೊಳೆದೆ. ಅವರಿಗೆ ಸಮಾಧಾನ ನೀಡಲಿಲ್ಲ. ‘ಆಯ್ತು, ಪರವಾಗಿಲ್ಲ ಇನ್ನೊಂದು ಅವಕಾಶ’ ಎಂದು ನಾಟಕದ ಕರಪತ್ರ ಕೊಡುವುದಕ್ಕೆ ಮತ್ತೆ ಅಂಟಿಸುವುದಕ್ಕೆ ಹೋಗೆಂದರು. ಇರುವ ಕೆಲಸಗಳನ್ನು ಬೇಗ ಮುಗಿಸಿ, ಸಮಯ ಹೊಂದಿಸಿಕೊಂಡು ಹೋಗುತ್ತಿದ್ದೆ. ‘ನಮ್ ನಾಟ್ಕಕ್ ಬನ್ರಿ’ ಎಂದು ಕೂಗಿ, ಕರೆದು ಹೆಚ್ಚುವರಿ ಕೆಲಸಗಳನ್ನೂ ಮಾಡುತ್ತಿದ್ದೆ. ಗೌರಿ ಪಾತ್ರವನ್ನು ಕಂಡು ಕಂಡು, ಸಂಭಾಷಣೆಗಳೆಲ್ಲ ಬಾಯತುದಿಯಲ್ಲೇ ಇತ್ತು. ಅಷ್ಟೇ ಅಲ್ಲ, ಪಾತ್ರಕ್ಕೆ ಬೇಕಾದ ವೈಯ್ಯಾರವನ್ನೂ ಮಾಡುತ್ತಿದ್ದೆ.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹತ್ತನೆಯ ಕಂತು

