ಭಾವಾತಿರೇಕ ಎಂಬ ಖಾಯಿಲೆ: ಸುಕನ್ಯಾ ಕನಾರಳ್ಳಿ ಅಂಕಣ
ಈಗ ಬದುಕಿನ ಈ ಹಂತದಲ್ಲಿ ಅವರ ಕಾಳಜಿ ಒಂದೇ. ಬದುಕಿನುದ್ದಕ್ಕೂ ತಮ್ಮ ತಂಗಿಯರ ಬದುಕನ್ನು ದಡ ಹತ್ತಿಸಲು ಕಳೆದಾಗಿದೆ. ಅವರೆಲ್ಲ ತನ್ನನ್ನು ಪ್ರೀತಿಯಿಂದ ನೋಡಿಕೊಂಡರೂ ಸಹ ಈಗ ತನ್ನದೇ ಒಂದು ನೆಲೆ ಬೇಕೆನ್ನಿಸಿದೆ. ತನಗೆ ನಾಲ್ಕು ಗೋಡೆ, ಒಂದು ತಾರಸಿಯಾದರೂ ಇರುವ ಮನೆ ಕಟ್ಟಿಕೊಂಡು ಉಳಿದ ಬದುಕನ್ನು ಒಬ್ಬಳೇ ಕಳೆಯಲು ಒಂದು ಸೈಟು ಬೇಕು, ಅಷ್ಟೇ. ಅಸಂಖ್ಯಾತ ವಿದ್ಯಾರ್ಥಿಗಳು, ಸಾಹಿತ್ಯ ವಲಯದ ಹಲವಾರು ಆಪ್ತರು, ಭೋಪರಾಕ್ ಹೇಳುತ್ತಿರುವ ಅಪಾರವಾದ ಸ್ನೇಹಿತರ ಬಳಗ… ಇಷ್ಟೆಲ್ಲ ಇದ್ದು ಸುಮಾರು ಎಪ್ಪತ್ತರ ದಶಕದ ವಯಸ್ಸಿನ ಆಕೆ ಹೀಗೆ ಬಹಿರಂಗವಾಗಿ ಹೇಳಿಕೊಳ್ಳಬೇಕಾಯಿತೆ? ಕಣ್ಣೀರು ತಡೆಯಲಾಗದೆ ಎದ್ದು ಓಡಿಯೇ ಬಿಟ್ಟೆ!
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ

