Advertisement

ಸ್ವ ಅರಿವಿನ ಸದ್ಭಾವವೇ ಗುರು ಕಾರುಣ್ಯದ  ಮೂಲ ಮಂತ್ರ.:  ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ನಮ್ಮನ್ನು ನಾವು ಅರಿತುಕೊಂಡಾಗ ಗುರುವನ್ನು ಅರಿತುಕೊಳ್ಳುವ ಪ್ರಜ್ಞೆ ಬಲಗೊಳ್ಳುತ್ತದೆ. ಗುರುವನ್ನು ಹೊರಗಡೆ ಹುಡುಕದೆ, ಒಳಗಡೆಯೇ ಹುಡುಕಬೇಕು. ಅಂದರೆ ಭೌತಿಕ ವಸ್ತುಗಳಲ್ಲಿ ಗುರುವನ್ನು ಕಾಣದೆ, ಅಂತರಾತ್ಮನಲ್ಲಿ ಬೆಳಕನ್ನು ಕಾಣಬೇಕು. ಗುರುವಿನ ಕೆಲಸ ಬೋಧಿಸುವುದು ಮಾತ್ರವಲ್ಲ, ನಮ್ಮಲ್ಲಿರುವ ಅಂತಃಶಕ್ತಿಯನ್ನು ಜಾಗೃತಗೊಳಿಸಿ ಗುರುವಿನೊಂದಿಗೆ ಅನುಸಂಧಾನದ ದಾರಿ ನಿರ್ಮಿಸಿಕೊಳ್ಳಬೇಕೆಂಬ ಆಲೋಚನೆಯೇ ದೊಡ್ಡದು. ವಚನಕಾರ ಮೆರೆಮಿಂಡಯ್ಯನು ಕೂಡ.
ಗುರುಪೂರ್ಣಿಮೆಯ ನಿಮಿತ್ತ ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ ನಿಮ್ಮ ಓದಿಗೆ

Loading

ಅಂಕಣ

Latest

ಒಂಟಿಹೆಣ್ಣು ಮತ್ತು ಹಂಪೆಯಾತ್ರೆ: ಸುಕನ್ಯಾ ಕನಾರಳ್ಳಿ ಅಂಕಣ

ಮೂರನೆಯ ದಿನದ ಹೊತ್ತಿಗೆ ಮನಸ್ಸನ್ನು ಉಲ್ಲಾಸಕ್ಕೆ ಹಚ್ಚುವ, ಹರಿಯುವ, ಸೆಳೆಯುವ ನದಿಯನ್ನು ನೋಡಬೇಕೆನ್ನಿಸಿತ್ತು. ತುಂಗಭದ್ರೆಯ ಹರವನ್ನು ಕಲ್ಪಿಸಿಕೊಳ್ಳುತ್ತಾ ಬೆಳಿಗ್ಗೆಯೇ ಹೋಗಿ ಒಂದು ಮೂಲೆ ಹಿಡಿದು ಕೂತು ಎಷ್ಟೋ ಹೊತ್ತು ಆಕೆಯನ್ನು ಕಣ್ತುಂಬಿಕೊಂಡ ಮೇಲೆ ಸ್ವಲ್ಪ ಸಮಾಧಾನವೆನ್ನಿಸಿತ್ತು. ಕೃಷ್ಣದೇವರಾಯ ತನ್ನ ಆಳ್ವಿಕೆಯನ್ನು ಪ್ರಾರಂಭಿಸಿದ್ದ ಆನೆಗುಂದಿಗೆ ಹೋಗಬೇಕು ಎಂದು ಹೇಳಿದ್ದರೂ ನಮ್ಮ ಆಟೋವಾಲ ಕರೆದುಕೊಂಡು ಹೋಗಿದ್ದು ಐನೂರ ಎಪ್ಪತ್ತೈದು ಮೆಟ್ಟಿಲು ಹತ್ತಬೇಕಿದ್ದ ಅಂಜನಾದ್ರಿಗೆ. ಕಡಿದರೆ ಎರಡು ಆಳಾಗುವ ಒಬ್ಬ ಧಡಿಯ ಮೈಮೂತಿ ತುಂಬ ಹನುಮಂತನ ಬಣ್ಣ ಬಳಿದುಕೊಂಡು, ಸೊಂಟದ ಹಿಂದೆ ಒಂದು ಬಾಲವನ್ನು ಅಂಟಿಸಿಕೊಂಡು, ಗದೆ ಹಿಡಿದು ನಡುದಾರಿಯಲ್ಲಿ ಹಾದಿಗುಪ್ಪೆಯ ಮೇಲೇ ನಿಂತಿದ್ದ. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

ಸಾಹಿತ್ಯ

ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ”

ಯಕ್ಷಗಾನ ಬಿಟ್ಟು ಗಂಭೀರವಾಗಿ ಯಾವುದಾದರೂ ನೌಕರಿ ಸೇರಿಕೊಂಡು ದುಡಿಯಬೇಕು ಇದು ನಮ್ಮ ತಂದೆಯ ವರಾತ. ಯಕ್ಷಗಾನ ಕಲಾವಿದನಿಗೇನು ಸಮಾಜದಲ್ಲಿ ಗೌರವವಿಲ್ಲ. ಅಷ್ಟಾಗಿ ಈಗಿನ ಕಾಲದಲ್ಲಿ ಯಕ್ಷಗಾನದವನಿಗೆ ಯಾರು ಹೆಣ್ಣು ಕೊಟ್ಟಾರು. ರಾತ್ರಿಯಿಡೀ ನಿದ್ದೆ ಬಿಡುವುದು, ಹಗಲು ನಿದ್ದೆ ಮಾಡುವುದು ಗೂಬೆಯಂತೆ. ಇದೇನು ಅಂಥಹ ಪುರುಷಾರ್ಥ ಸಾಧನೆಯ ಹಾದಿಯಲ್ಲ. ಇವುಗಳೆಲ್ಲ ನನ್ನ ತಂದೆಯವರ ಹಳವಂಡ. ತಂದೆಯವರ ಈ ಧೋರಣೆಯು ನನಗೇನೂ ಪರಿಣಾಮ ಬೀರದು. ಯಾಕೆಂದರೆ ಅವರು ಯಾವುದನ್ನೂ ಗಂಭೀರವಾಗಿ ಸ್ವೀಕರಿಸಿದವರಲ್ಲ. ಮನಸ್ಸಿಗನಿಸಿದ್ದನ್ನು ಕಾರಿಕೊಂಡಾರು. ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ "ಮನ್ವಂತರ" ನಿಮ್ಮ ಈ ಭಾನುವಾರದ ಓದಿಗೆ

ಸರಣಿ

ಮೇಷ್ಟ್ರಾಗಿ ಹೇಳಿದ  ಆ ಸುಳ್ಳು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಮಾರನೇ ದಿನದಿಂದ ಆ ತರಗತಿಯ ಮಕ್ಕಳಲ್ಲಿ ವಿಶೇಷ ಬದಲಾವಣೆ ಕಂಡಿತು. ಅದೂ ಇದೂ ನೆಪ ಹೇಳಿ ಶಾಲೆಗೆ ಚಕ್ಕರ್ ಹಾಕುತ್ತಿದ್ದವರೆಲ್ಲ ಇಂದು ಶಾಲೆಗೆ ಬಂದಿದ್ದರು ಕೊಟ್ಟ ಹೋಂ ವರ್ಕ್ ಮುಗಿಸಿದ್ದರು. ಈ ವಿಷಯವು ಕಾಡ್ಗಿಚ್ಚಿನಂತೆ ನಮ್ಮ ಶಾಲೆಯ ಇತರೆ ತರಗತಿಯ ಮಕ್ಕಳಿಗೂ ಹಬ್ಬಿತು. ಅವರೂ ಸಹ ಬುದ್ಧಿ ಶಕ್ತಿ ಹೇಳಲು ಪೀಡಿಸತೊಡಗಿದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತಾರನೆಯ ಕಂತು ನಿಮ್ಮ ಓದಿಗೆ

ಪ್ರವಾಸ

ಬೆಣ್ಣೆಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜಲಪಾತದ ಎಡಮಗ್ಗಲಿನ ತಗ್ಗಿನಲಿ ನಿಂತು ನೋಡಿದರೆ ನೀರಿನ ನಡುವೆ ಅಲ್ಲಲ್ಲಿ ಗುಲಾಲಿ ಬಣ್ಣದ ರೇಖೆಗಳು ಕಾಣಿಸಿ ನಿಮ್ಮನ್ನು ತಬ್ಬಿಬ್ಬು ಗೊಳಿಸುತ್ತದೆ. ಯಾವುದು ದಿಟ ಯಾವುದು ಮಿಥ್ಯ ಎಂದರಿಯುವ ಹೊತ್ತಿಗೆ ಜಲಪಾತ ನಿಮ್ಮ ಮನಸ್ಸನ್ನು ಮತ್ತು ಒಡಲನ್ನು ಒದ್ದೆ ಮಾಡಿಸಿರುತ್ತದೆ. ಮೌನದಲ್ಲೇ ನೀವು ಮೇಲೆ ಬಂದು ಜಲಪಾತದ ಎಡ ಭುಜಕ್ಕಾನಿಸಿ ಕುಳಿತು ಧ್ಯಾನಸ್ಥರಾಗುವಿರಿ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಬರಹ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೃಪಾಕರ ಸೇನಾನಿ ಹೇಳಿದ ಕಾಡುನಾಯಿಗಳ ಕಥಾನಕ

ನಾವು ಹೇಳಿದ ಆ ದಿನ ಸಂಜೆ. ಬೇಟೆಗೆ ಹೋದವರಲ್ಲಿ ಅಲ್ಫಾ ಗಂಡು ಮಾತ್ರ ವಾಪಸ್ಸು ಬಂತು. ಮರಿಗಳು ಬೇಟೆ ಮುಗಿಸಿ ಬಂದ ಅದನ್ನು ಬಾಯಿ ನೆಕ್ಕಿ ಸ್ವಾಗತಿಸುವ ಬದಲು ಯಾಕೋ ಅಳಲು ತೊಡಗಿದವು. ನಮಗೆ ತಟ್ಟನೆ ಹೊಳೆಯಿತು. ಆ ಮರಿಗಳ ಅಚ್ಚುಮೆಚ್ಚಿನ ಆ ಎರಡು ಗಂಡು ನಾಯಿಗಳು ಇನ್ನೊಂದು ಹಿಂಡಿನ ಅತೃಪ್ತ ಹೆಣ್ಣು ನಾಯಿಗಳ ಹಿಂದೆ ಓಡಿ ಹೋಗಿದ್ದವು. "ಹಳೆಯ ಪುಟಗಳಿಂದ..." ಸರಣಿಯಲ್ಲಿ ಕೃಪಾಕರ ಸೇನಾನಿ ಹೇಳಿದ ಕಾಡುನಾಯಿಗಳ ಕಥಾನಕ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ”

ಯಕ್ಷಗಾನ ಬಿಟ್ಟು ಗಂಭೀರವಾಗಿ ಯಾವುದಾದರೂ ನೌಕರಿ ಸೇರಿಕೊಂಡು ದುಡಿಯಬೇಕು ಇದು ನಮ್ಮ ತಂದೆಯ ವರಾತ. ಯಕ್ಷಗಾನ ಕಲಾವಿದನಿಗೇನು ಸಮಾಜದಲ್ಲಿ ಗೌರವವಿಲ್ಲ. ಅಷ್ಟಾಗಿ ಈಗಿನ ಕಾಲದಲ್ಲಿ ಯಕ್ಷಗಾನದವನಿಗೆ ಯಾರು ಹೆಣ್ಣು ಕೊಟ್ಟಾರು. ರಾತ್ರಿಯಿಡೀ ನಿದ್ದೆ ಬಿಡುವುದು, ಹಗಲು ನಿದ್ದೆ ಮಾಡುವುದು ಗೂಬೆಯಂತೆ. ಇದೇನು ಅಂಥಹ ಪುರುಷಾರ್ಥ ಸಾಧನೆಯ ಹಾದಿಯಲ್ಲ. ಇವುಗಳೆಲ್ಲ ನನ್ನ ತಂದೆಯವರ ಹಳವಂಡ. ತಂದೆಯವರ ಈ ಧೋರಣೆಯು ನನಗೇನೂ ಪರಿಣಾಮ ಬೀರದು. ಯಾಕೆಂದರೆ ಅವರು ಯಾವುದನ್ನೂ ಗಂಭೀರವಾಗಿ ಸ್ವೀಕರಿಸಿದವರಲ್ಲ. ಮನಸ್ಸಿಗನಿಸಿದ್ದನ್ನು ಕಾರಿಕೊಂಡಾರು. ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ "ಮನ್ವಂತರ" ನಿಮ್ಮ ಈ ಭಾನುವಾರದ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ