Advertisement

ರಂಗ ಕಲಾವಿದೆಯರ ಬದುಕು…: ಚಿತ್ರಾ ವೆಂಕಟರಾಜು ಸರಣಿ

ಹಾಗೆ ನೋಡಿದರೆ, ನಾಟಕಗಳಲ್ಲಿ ಅಭಿನಯಿಸುವ ಹೆಣ್ಣುಮಕ್ಕಳು ಸಮಾಜದ ಉಳಿದ ಹೆಣ್ಣುಮಕ್ಕಳಿಗಿಂತ ದಿಟ್ಟರಾಗಿರುತ್ತಾರೆ. ಹಾಗೆ ಮುಕ್ತವಾಗಿಲ್ಲದಿದ್ದರೆ ರಂಗಭೂಮಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಆಗುವುದಿಲ್ಲ. ನಾಟಕಾಭ್ಯಾಸದಲ್ಲಿ ಮೊದಲು ಹೇಳಿಕೊಡುವ ಪಾಠವೇ ಮುಜುಗರವನ್ನು ಬಿಟ್ಟು ಧೈರ್ಯವಾಗಿ ಅನಿಸಿದ್ದನ್ನು ಮಾಡುವುದು. ಹಾಗಾಗಿಯೇ ನಾಟಕದಲ್ಲಿ ಅಭಿನಯಿಸುವ ನಟಿಯರ ವ್ಯಕ್ತಿತ್ವ ಗುಂಪಿನಲ್ಲಿ ಎದ್ದುಕಾಣುವಂತಿರುತ್ತದೆ. ಹೊಸದಾಗಿ ನಾಟಕಕ್ಕೆ ಬಂದಾಗ ಗುಬ್ಬಿಯಂತಿರುವ ನಟಿಯರು ದಿನ ಕಳೆದಂತೆ ರಂಗದ ಆಕಾಶದಲ್ಲಿ ಗರಿಬಿಚ್ಚಿ ಹಾರುತ್ತಾರೆ, ಬೀಳುತ್ತಾರೆ‌, ಸಾವರಿಸಿಕೊಂಡು ಮತ್ತೆ ಏಳುತ್ತಾರೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Loading

ಅಂಕಣ

Latest

ಎಲ್.ಎನ್.‌ ಮುಕುಂದರಾಜ್‌ ಕವಿತೆ ಮತ್ತು ಸಮಾಜ: ಜಯಲಕ್ಷ್ಮಿ ಪಾಟೀಲ್ ಅಂಕಣ

ಮುಕುಂದರಾಜ್ ಅವರು ಈ ಕವನವನ್ನು ಬರೆದು ದಶಕಗಳೇ ಕಳೆದಿರಬಹುದು. ಆದರೆ ಸಮಾಜ, ಮನುಷ್ಯನ ಬುದ್ಧಿ, ಸ್ವಭಾವ ಮಾತ್ರ ಅವತ್ತಿಗೂ ಇವತ್ತಿಗೂ ಯಾವತ್ತಿಗೂ ಬದಲಾಗದು ಎನ್ನುವುದನ್ನು ‘ದಾರಿಯುದ್ದಕ್ಕು’ ಕವನ ತುಂಬಾ ಸಮರ್ಥವಾಗಿ ಬಿಂಬಿಸುತ್ತದೆ. ಈ ಕವಿತೆಯನ್ನು ಓದಿದ ಕೂಡಲೇ ಮುಂದಿನ ಕವಿತೆ ಓದುತ್ತೇನೆ ಎಂದರೆ ಅದು ಸಾಧ್ಯವಾಗದು. ಇದರೊಳಗೆ ಅಡಗಿದ ಅಸಹಾಯಕತೆ, ಮಾರ್ಮಿಕತೆ ಮತ್ತೆ ಮತ್ತೆ ಓದುವಂತೆ ಮಾಡುತ್ತದೆ. ಇಡೀ ಕವಿತೆ ಸರ್ರಿಯಲಿಸಂನ ಜೊತೆಗೆ ತುಸು ಗಜಲ್ ಛಾಯೆಯನ್ನೂ ಹೊತ್ತಿರುವುದು ವಿಶೇಷ. ಅಸ್ತಿತ್ವವಾದದ ನೆಲೆಯಲ್ಲಿ ನಾನು ಈ ನವ್ಯ ಕವನವನ್ನು ನೋಡುತ್ತಿದ್ದೇನೆ. ಜಯಲಕ್ಷ್ಮಿ ಪಾಟೀಲ್ ಬರೆಯುವ "ಗರ್ದಿ ಗಮ್ಮತ್ತು" ಅಂಕಣ

ಸಾಹಿತ್ಯ

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ”

ಸಿದ್ದಪ್ಪ ಮಾಸ್ತರರ ಮನೆಯ ದೃಶ್ಯ ಮಾತ್ರ ಸಂಪೂರ್ಣ ಬೇರೆಯಾಗಿತ್ತು.ಅಲ್ಲಿ ಯಾವುದೇ ಗಡಿಬಿಡಿಯಿರಲಿಲ್ಲ, ಹೊಗೆಯಿರಲಿಲ್ಲ, ಕೆಮ್ಮಿನ ಸದ್ದಿರಲಿಲ್ಲ. ಮಾಸ್ತರು ಬೆಳಿಗ್ಗೆ ಐದು ಗಂಟೆಗೆ ಎದ್ದು ತಣ್ಣೀರಿನ ಸ್ನಾನ ಮುಗಿಸಿ, ಶುಭ್ರವಾದ ಬಟ್ಟೆ ಧರಿಸಿ ಅಡುಗೆಮನೆಗೆ ಬರುತ್ತಿದ್ದರು. ಹಳೆಯ ಸ್ಟವ್‌ನ ನಾಬ್ ಅನ್ನು ಮೃದುವಾಗಿ ತಿರುಗಿಸುತ್ತಿದ್ದರು. 'ಚಿಕ್' ಎಂಬ ಸದ್ದಿನೊಂದಿಗೆ, ಅಲ್ಲಿ ನೀಲಿ ಜ್ವಾಲೆ ಮೃದುವಾಗಿ, ತಾಳಬದ್ಧವಾಗಿ ಉರಿಯಲು ಶುರುವಾಗುತ್ತಿತ್ತು. ಅವರ ಪತ್ನಿ ಶಾಂತಮ್ಮ, ಆ ನೀಲಿ ಜ್ವಾಲೆಯ ಮೇಲೆ ಹಬೆಯಾಡುವ ಮೃದುವಾದ ಇಡ್ಲಿ ಮತ್ತು ಪರಿಮಳ ಬೀರುವ ಸಾಂಬಾರ್ ಮಾಡುತ್ತಿದ್ದರು. ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ” ನಿಮ್ಮ ಓದಿಗೆ

ಸರಣಿ

ಸಂದರ್ಶಕರಿಗೆ ಆಟ ಹಾಜರಾದವರಿಗೆ ಸಂಕಟ…: ಬಸವನಗೌಡ ಹೆಬ್ಬಳಗೆರೆ ಸರಣಿ

ಈ ಘಟನೆಯಿಂದ ನಾನು ಕಲಿತ, ಪರರೂ ಅನುಸರಿಸಬಹುದಾದ ಒಂದು ಪಾಠವನ್ನು ನಾನಿಲ್ಲಿ ಹಂಚಿಕೊಳ್ಳ ಬಯಸುತ್ತೇನೆ. ನಾವು ಯಾವುದೇ ಸಂದರ್ಶನಕ್ಕೂ ಹಾಜರಾಗುವ ಮುನ್ನ ನಾವು ಅವರು ನೀಡಿದ್ದ ಸಮಯಕ್ಕಿಂತ ಮುಂಚಿತವಾಗಿ ಹೋಗಬೇಕು. ಅಲ್ಲದೇ ಅವರು ಕೋಪ ಬರುವಂತಹ ಯಾವುದೇ ಪ್ರಶ್ನೆಯನ್ನು ಕೇಳಿದ್ರೂ ಅವರು ನಿಮ್ಮ ಮಾತಿನ ಶೈಲಿ ಮತ್ತು ಸಹನೆ ಪರೀಕ್ಷಿಸುತ್ತಿದ್ದಾರೆ ಎಂದು ತಿಳಿಯಬೇಕು. ಸಾಧ್ಯವಾದಷ್ಟು ಸಂದರ್ಶಕರ ಕಣ್ಣಲ್ಲಿ ಕಣ್ಣಿಟ್ಟು ಉತ್ತರಿಸಬೇಕು. ಉತ್ತರ ಗೊತ್ತಿಲ್ಲದಿದ್ದಾಗ ಪ್ರಾಮಾಣಿಕವಾಗಿ ಗೊತ್ತಿಲ್ಲವೆಂದು ಹೇಳುವುದರ ಜೊತೆಗೆ ನಾನು ಇದರ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದು ಹೇಳಬೇಕೇ ಹೊರತು ತಪ್ಪು ಉತ್ತರ ಹೇಳಬಾರದು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

ಪ್ರವಾಸ

ಸೋಲೆಂಬ ಅಲ್ಪ ವಿರಾಮದ ನಡುವೆ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಜನ್ಮದಲ್ಲಂತು ಇಂತಹ ಭೀಕರ ಮಳೆ ಕಂಡಿದ್ದಿಲ್ಲಾ!! ಕೆಳಗಿಳಿಯುತ್ತಾ ಜೀವಾದಿಗಳು ತಲ್ಲಣಿಸುತ್ತಿದ್ದವು. ತರಗಲೆಗಳ ತೂರಾಟ, ಹನಿಗಳ ಆರ್ಭಟ. ಕೆಳಗಿಳುತ್ತಲೇ ಮಳೆ ಕಡಿಮೆ ಆಗುವುದನ್ನೇ ತಲೆಗೊಂದು ಸೂರು ಹುಡುಕಿ ಹೊರಟೆವು. ಅಷ್ಟು ಮಳೆಯಲ್ಲೂ ಒಂದೆರಡು ಚಿತ್ರ ತೆಗೆದುದರಿಂದ ಎಲ್ಲರಿಗಿಂತ ಹಿಂದುಳಿದಿದ್ದ ನಾನು ಸ್ನೇಹಿತರಿಗಾಗಿ ಹುಡುಕಿದೆ. ಯಾರೂ ಕಾಣಲಿಲ್ಲ. ಭಟ್ಟರ ಹಿಂದೇ ಹೋದರೋ ಹೇಗೆ? ಭೈರವನಿಗೆ ಪೂಜೆ ಮುಗಿಸಿ ಭಟ್ಟರು ಆಗಲೇ ಹೋಗಿಯಾಗಿತ್ತು. ಭೈರವನ ಗುಡಿಯಲ್ಲಿ ಅಡಗುವ ಆಸೆ ಬಿಟ್ಟೆವು. ಸನಿಹದಲ್ಲೇ ಚಿಕ್ಕ ಗುಡಿಸಿಲಿನಂತಹ ಮಾಡಿತ್ತು. ಕಳ್ಳನಂತೆ ಅಲ್ಲಿ ಅಡಗಿಕೊಳ್ಳಲು ಹೊರಟೆ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

ವ್ಯಕ್ತಿ ವಿಶೇಷ

ಕನಸು, ಕನವರಿಕೆ: ಜುಲೇಖಾ ಬೇಗಂ ಜೀವನ ವೃತ್ತಾಂತ

ನಾನು ಬಹುವಾಗಿ ಇಷ್ಟಪಡುತ್ತಿದ್ದ ಜುಬೇದಾಬಾಯಿ, ನನ್ನನ್ನು ಕಂಡೊಡನೆ ‘ಎಷ್ಟು ಕ್ಯೂಟ್ ಅಯ್ತಲ್ಲ ಈ ಹುಡ್ಗಿ!’ ಎಂದು ಕೆನ್ನೆಗಿಂಡಿ, ಮುತ್ತಿಟ್ಟರು. ಕಳೆದುಹೋದೆ; ಆಕಾಶಕ್ಕೇರಿಬಿಟ್ಟೆ. ಆವತ್ತಿಡೀ ಕೆಳಗಿಳಿದಿದ್ದರೆ ಕೇಳಿ. ಹೇಮರೆಡ್ಡಿ ಮಲ್ಲಮ್ಮ ನಾಟಕವೆಂದರೆ ನನಗೂ ಉತ್ಸಾಹ ಹೆಚ್ಚಿರುತ್ತಿತ್ತು. ಏಕೆಂದರೆ ಅದೊಂದೇ ನಾಟಕದಲ್ಲಿ ನನಗೆ ವೇದಿಕೆಯೇರುವ ಅವಕಾಶ ಸಿಗುತ್ತಿದ್ದದ್ದು. ಮದುವೆ, ಉಡಿ ತುಂಬುವ ಗುಂಪು ದೃಶ್ಯಗಳಲ್ಲಿ ನಾನೂ ಇರುತ್ತಿದ್ದೆ. ಗುಂಪೋ ಪ್ರತ್ಯೇಕವೋ, ಜನ ನನ್ನ ನೋಡಿ ಗುರುತಿಸುತ್ತಾರೋ ಇಲ್ಲವೋ, ನನಗೆ ಇವೆಲ್ಲವೂ ಗೌಣ. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹನ್ನೊಂದನೆಯ ಕಂತು

ಸಂಪಿಗೆ ಸ್ಪೆಷಲ್

ಇರಾನಿಗೂ ಹಿಂದೂಸ್ತಾನಕ್ಕೂ ಅಂಟಿರುವ ಸಾವಿರಾರು ವರ್ಷಗಳ ನಂಟು: ಶೇಷಾದ್ರಿ ಗಂಜೂರು ಬರಹ

ಗಹನವಾದ ವಿಚಾರಗಳನ್ನು ಪ್ರಸ್ತಾಪಿಸುವಾಗ ಅವಕ್ಕೆ ಭಾರತದೊಂದಿಗೆ ಸಂಬಂಧ ಕಲ್ಪಿಸುವುದನ್ನು ಪರ್ಷಿಯನ್ ಕಾವ್ಯಪರಂಪರೆಯಲ್ಲಿ ನಾವು ಮತ್ತೆ ಮತ್ತೆ ಕಾಣಬಹುದು. ಉದಾಹರಣೆಗೆ, ಫಿರ್ದೂಸಿಯ ಒಂದು ಶತಮಾನದ ನಂತರ ಬಂದ ನಿಜ಼ಾಮಿ ಗಂಜಾವಿಯ ಹಫ್ತ್ ಪೇಕಾರ್ ಕಾವ್ಯದಲ್ಲಿ ಭಾರತೀಯ ರಾಜಕುಮಾರಿಯೊಬ್ಬಳು ಆ ಕಥನದ ನಾಯಕ ಬೆಹ್ರಾಮನಿಗೆ ಆತ್ಮ ಸಂಯಮದ ಮಹತ್ವವನ್ನು ಹೇಳಿಕೊಡುತ್ತಾಳೆ. ಇರಾನಿಗೂ ಹಿಂದೂಸ್ತಾನಕ್ಕೂ ಇರುವ ನಂಟಿನ ಕುರಿತು ಶೇಷಾದ್ರಿ ಗಂಜೂರು ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಸುಮುಖ ಭಾರದ್ವಾಜ ಜಿ.ವಿ. ಬರೆದ ಈ ದಿನದ ಕವಿತೆ

"ಗಾಢ ನಿದ್ರೆಯ ಕನಸಲಿ ಸಿಕ್ಕ ಪಾತ್ರದಂತೆ, ಆಪ್ತನೆನಿಸಿದರೂ ಅಪರಿಚಿತ — ನೆನೆದಷ್ಟು ಮಬ್ಬು ಮಬ್ಬು. ಮನೆಯವರನ್ನು ಕೇಳಿದರೆ “ನೀನೇ” ಎಂದು ನಗುತ್ತಾರೆ, “ಎಷ್ಟು ಚೆಂದ ಇದೆ ಇದು” ಎಂದು ಹೊಗಳುತ್ತಾರೆ." -ಸುಮುಖ ಭಾರದ್ವಾಜ ಜಿ.ವಿ. ಬರೆದ ಈ ದಿನದ ಕವಿತೆ

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ”

ಸಿದ್ದಪ್ಪ ಮಾಸ್ತರರ ಮನೆಯ ದೃಶ್ಯ ಮಾತ್ರ ಸಂಪೂರ್ಣ ಬೇರೆಯಾಗಿತ್ತು.ಅಲ್ಲಿ ಯಾವುದೇ ಗಡಿಬಿಡಿಯಿರಲಿಲ್ಲ, ಹೊಗೆಯಿರಲಿಲ್ಲ, ಕೆಮ್ಮಿನ ಸದ್ದಿರಲಿಲ್ಲ. ಮಾಸ್ತರು ಬೆಳಿಗ್ಗೆ ಐದು ಗಂಟೆಗೆ ಎದ್ದು ತಣ್ಣೀರಿನ ಸ್ನಾನ ಮುಗಿಸಿ, ಶುಭ್ರವಾದ ಬಟ್ಟೆ ಧರಿಸಿ ಅಡುಗೆಮನೆಗೆ ಬರುತ್ತಿದ್ದರು. ಹಳೆಯ ಸ್ಟವ್‌ನ ನಾಬ್ ಅನ್ನು ಮೃದುವಾಗಿ ತಿರುಗಿಸುತ್ತಿದ್ದರು. 'ಚಿಕ್' ಎಂಬ ಸದ್ದಿನೊಂದಿಗೆ, ಅಲ್ಲಿ ನೀಲಿ ಜ್ವಾಲೆ ಮೃದುವಾಗಿ, ತಾಳಬದ್ಧವಾಗಿ ಉರಿಯಲು ಶುರುವಾಗುತ್ತಿತ್ತು. ಅವರ ಪತ್ನಿ ಶಾಂತಮ್ಮ, ಆ ನೀಲಿ ಜ್ವಾಲೆಯ ಮೇಲೆ ಹಬೆಯಾಡುವ ಮೃದುವಾದ ಇಡ್ಲಿ ಮತ್ತು ಪರಿಮಳ ಬೀರುವ ಸಾಂಬಾರ್ ಮಾಡುತ್ತಿದ್ದರು. ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ