ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ
ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು. ಮೊದಲೇ ಉಳಿದ ಜಾತಿಯವರ ವಿರೋಧ.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ ನಿಮ್ಮ ಈ ಭಾನುವಾರದ ಓದಿಗೆ