ಗ್ರಾಮದೇವತೆ ಮಾರಮ್ಮನ ಕೃಪೆಯಿಂದ…: ಬಸವನಗೌಡ ಹೆಬ್ಬಳಗೆರೆ ಸರಣಿ
ಬಿದ್ದ ಗಾಯ ವಾಸಿಯಾದರೂ ಗಾಯದ ನೋವು ಮಾತ್ರ ಕಡಿಮೆಯಾಗಲಿಲ್ಲ. ನಾನು ಹಲವು ವೈದ್ಯರ ಹತ್ತಿರ ತೋರಿಸಿದರೂ ಕೂಡ ಅವರು ‘ಏನೂ ಸಮಸ್ಯೆ ಇಲ್ಲ’ ಎಂದು ಹೇಳುತ್ತಿದ್ದರು, ಆದರೆ ರಾತ್ರಿ ಮಲಗಿದಾಗ ಮಾತ್ರ ವಿಪರೀತ ಕಾಲು ಸೆಳೆತ, ಕಾಲು ನೋವು ಆಗುತ್ತಿತ್ತು. ಆಗ ನನಗೆ ಮನಸ್ಸಿನಲ್ಲಿ “ಇದು ದೇವರ ಶಾಪವಿರಬಹುದೋ ಏನೋ?” ಅಂದುಕೊಂಡು ದೇವರ ಕುರಿತು “ಅಮ್ಮಾ ನನ್ನಿಂದ ತಪ್ಪಾಗಿದ್ದರೆ ಕ್ಷಮಿಸು, ನಾನು ಊರಿಗೆ ಬಂದು ದರ್ಶನ ಮಾಡುತ್ತೇನೆ” ಎಂದು ಹೇಳಿಕೊಂಡೆ. ಏನಾಶ್ಚರ್ಯ!! ಅಂದರೆ ಮಾರನೇ ದಿನದಿಂದ ನನ್ನ ನೋವೆಲ್ಲಾ ಕಮ್ಮಿಯಾಯಿತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ನಾಲ್ಕನೆಯ ಕಂತು ನಿಮ್ಮ ಓದಿಗೆ


