ಅರಮನೆ-ಗುರುಮನೆಗಳ ನಡುವೆ: ಸುಕನ್ಯಾ ಕನಾರಳ್ಳಿ ಅಂಕಣ
ಕೊನೆಗೆ ಕುಡಿದು ಮತ್ತೇರಿದ ಅರಮನೆಯ ಸೈನಿಕರು ಬಂದು ಬೆಕೆಟ್ಟನನ್ನ ಎಲ್ಲರೆದುರು ಕೊಲ್ಲುತ್ತಾರೆ. ಬಿಷಪ್ಪನೊಬ್ಬ ಗುರುಮನೆಯೊಳಗೆ ಹುತಾತ್ಮನಾಗಿ ತನ್ಮೂಲಕ ಸಂತನೊಬ್ಬ ಉದಯಿಸಿದ್ದೇನೋ ನಿಜ. ಆದರೆ ಅರಮನೆ ಗೆದ್ದಂತಾಯಿತೆ? ಹೇಡಿ ಸೈನಿಕರು ಏನೇನೋ ಬಡಬಡಿಸುತ್ತಾ ತಾವೆಸಗಿದ ಘೋರ ಕೊಲೆಯನ್ನು ಸಮರ್ಥಿಸಿಕೊಳ್ಳುತ್ತಾರೆ. ಒಬ್ಬನಂತೂ ತಪ್ಪಿಸಿಕೊಳ್ಳುವ ಸಾಧ್ಯತೆಯಿದ್ದರೂ ಬಿಷಪ್ ತಪ್ಪಿಸಿಕೊಳ್ಳಲಿಲ್ಲವಲ್ಲಾ? ತಾವೇನು ಮಾಡುವ ಹಾಗಿತ್ತು? ಹಾಗಾಗಿ ಅದೊಂದು ಆತ್ಮಹತ್ಯೆ ಎಂದು ಸಹ ಅರ್ಥೈಸುತ್ತಾನೆ. ಬಡಹೆಂಗಸರ ಮೇಳ ತಮ್ಮ ಬದುಕಿನಲ್ಲಿ ಸುಖ ಸಂತೋಷಗಳೊಂದೂ ಇಲ್ಲ, ತಾವು ಏನನ್ನೂ ಬದಲಾಯಿಸಲು ಅಸಮರ್ಥರು. ಆದರೆ ತಾವು ಅಜ್ಞಾನಿಗಳಂತೂ ಅಲ್ಲ ಎಂದು ಅತ್ಯಂತ ವಿಷಾದದಿಂದ ನುಡಿಯುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತಾರನೆಯ ಬರಹ

