“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್ ತರೀಕೆರೆ ಬರಹ
ಆದರೆ ಆ ಕುಣಿತದಲ್ಲಿ ದಲಿತ ತರುಣರು ಭಾಗವಹಿಸಿರಲಿಲ್ಲ. ಕುಣಿಯುವಾಗ ಮೈಕೈ ತಾಗುತ್ತದೆಯೆಂದೇ? ಇಡೀ ಊರು ಒಟ್ಟಾಗಿ ಸಂಭ್ರಮದಿಂದ ಹಬ್ಬ ಆಚರಿಸುತ್ತದೆ ಎಂಬುದು ಅರೆಸತ್ಯವಲ್ಲವೆ? ಊರ ಹೋಟೆಲು, ಗುಡಿಗಳಲ್ಲಿ ಇರುವಂತೆ ಮೊಹರಂ ಮಸೂತಿಯಲ್ಲೂ ಅವರಿಗೆ ಒಳಗಿನತನಕ ಪ್ರವೇಶವಿರಲಿಲ್ಲ. ಒಂದು ಅಂತರದಲ್ಲಿ ನಿಂತು ಎಡೆ ಮಾಡಿಸಿಕೊಂಡು ಹೋಗುತಿದ್ದರು. ಹಿಂದೆ ದಲಿತರು ಹೋಟೆಲುಗಳಲ್ಲಿ ತಮಗೂ ಸರಿಸಮವಾಗಿ ಚಹ ತಿಂಡಿ ಕೊಡಬೇಕೆಂದು ಒತ್ತಾಯಿಸಿದ್ದರು. ಅದು ಸಾಧ್ಯವಾಗಿರಲಿಲ್ಲ. ನಮಗೆ ಸಮಾನತೆ ಇಲ್ಲದಿದ್ದರೆ, ನಾವು ತಮಟೆ ಬಾರಿಸುವುದಿಲ್ಲ ಎಂದು ಅವರು ನಿರಾಕರಿಸಿದ್ದರಿಂದ, ಬಳ್ಳಾರಿ ಜಿಲ್ಲೆಯ ಮೂವತ್ತಕ್ಕೂ ಹೆಚ್ಚಿನ ಊರುಗಳಲ್ಲಿ ಮೊಹರಂ ಸಂಭ್ರಮ ಕಡಿಮೆಯಾಗಿದೆ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್ ತರೀಕೆರೆ ಬರಹ ನಿಮ್ಮ ಓದಿಗೆ

