ಬೆಂಗಳೂರು ಟೂ ಶಿವಮೊಗ್ಗ…: ವಿನಾಯಕ ಅರಳಸುರಳಿ ಅಂಕಣ
ತನ್ನ ದಾರಿಯಲ್ಲಿ ಸಿಗುವ ಪ್ರತಿಯೊಂದು ಪುಟ್ಟ ಪಟ್ಟಣದ ನಿಲ್ದಾಣವನ್ನೂ ಹೊಕ್ಕು, ಆತಿಥ್ಯ ಸ್ವೀಕರಿಸಿ, ಟಾಟಾ ಹೇಳಿಯೇ ಅದು ಹೊರಡುವುದು. ಅಂಥಾ ನಿಲ್ದಾಣಗಳಲ್ಲಿ ನುಗ್ಗಿ ಹತ್ತಿಕೊಳ್ಳುವ, ಉದ್ಯೋಗಕ್ಕಾಗಿ ಪಕ್ಕದೂರಿನ ಶಾಲೆಗೋ, ಆಚೆ ಪಟ್ಟಣಕ್ಕೋ ಹೋಗುವ ಉದ್ಯೋಗಿಗಳು. ಬೆಂಗಳೂರಿನಷ್ಟು ಕಿಕ್ಕಿರಿಯದ, ಬರೀ ಆಕಾಶ ಕಾಣುವಷ್ಟು ಗಗನಚುಂಬಿಗಳಿರುವ ಕಟ್ಟಡಗಳ ಸಮುದ್ರವಲ್ಲದ, ಎಲ್ಲವನ್ನೂ ಮಾರಾಟಕ್ಕಿಡದ, ಕೊಂಚ ಸಾಗಿದರೆ ಮುಗಿದು ಹೋಗಿ ಕಾಡು, ಮರಗಳ ಹಳ್ಳಿಯೊಂದು ಪ್ರತ್ಯಕ್ಷವಾಗುವ ಈ ಪುಟ್ಟ ಪಟ್ಟಣದಲ್ಲಿ ಬದುಕು ಕಟ್ಟಿಕೊಂಡ ಇವರೆಲ್ಲ ಎಷ್ಟು ಪುಣ್ಯಾತ್ಮರಲ್ಲವೇ ಎಂದುಕೊಳ್ಳುವಾಗಲೇ ಅವರು ಬಸ್ಸಿಳಿದು ಹೆದ್ದಾರಿಯಿಂದ ಕವಲೊಡೆದ ರಸ್ತೆಯೊಂದರಲ್ಲಿ ನಡೆಯುತ್ತ ಮರೆಯಾಗುತ್ತಾರೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

