ಮುಗುದನೊಬ್ಬನ ಮುನಿಸು ಮತ್ತು ನೆಲದ ನೆರಳ ಹಂಬಲದವರು: ಎಸ್. ಗಂಗಾಧರಯ್ಯ ಅನುಭವ ಕಥನ
ಸುಮ್ಮನೇ ಅತ್ತ ನೋಡಿದೆ. ಅದಕ್ಕಾಗೇ ಕಾಯುತ್ತಿದ್ದೆ ಅನ್ನುವಂತೆ ಮಾದು ಸೀದಾ ನನ್ನ ಬಳಿಗೆ ಬಂದರು. ತಮ್ಮ ಬೊಚ್ಚು ಬಾಯಿಂದ ಹೇಳ ಹೊರಟ ಮಾತುಗಳೆಲ್ಲಾ ಬಿಕ್ಕಳಿಕೆಗಳಾದವು. ಮೂಳೆ ಬಿಟ್ಟುಕೊಂಡಿದ್ದ ಅವರ ಮುಖದಲ್ಲಿನ ಕಣ್ಣೀರು ಮಾತಾಡತೊಡಗಿದವು. ಗೆಳೆಯನ ಸಾವು ಅವರನ್ನು ದಿಕ್ಕೆಡಿಸಿತ್ತು. ಅದಾದ ನಂತರ ನಾವಿಬ್ಬರೂ ಮುಂಚಿನ ಥರವೇ ಗೆಳೆಯರಾಗಿದ್ದೆವು. ಮಾದು ಮೆತ್ತಗಾಗತೊಡಗಿದ್ದರು. ವಯಸ್ಸು ದೇಹವನ್ನು ಜಪ್ಪುತ್ತಿತ್ತು. ಆದರೆ ಆ ಮುಗ್ಧ ನಗು, ಆ ತಾಳ್ಮೆ, ನಿಷ್ಕಲ್ಮಷ ಪ್ರೀತಿ, ಆ ತಮಾಷೆ ಮಾತ್ರ ಹಂಗೇ ಇದ್ದವು. `
ಎಸ್. ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಹದಿಮೂರನೆಯ ಕಂತು


