ಮೋಸದ ಆಟ…: ಜುಲೇಖಾ ಬೇಗಂ ಜೀವನ ವೃತ್ತಾಂತ
ಮಾರನೇ ದಿನ, ನಾವೆಲ್ಲರೂ ಏಳುವ ಹೊತ್ತಿಗಾಗಲೇ ಸಾಲಗಾರರೆಲ್ಲ ಸೇರಿದ್ದರು. ಸಹಾಯರ್ಥ ಪ್ರದರ್ಶನ ಆಡಿದ ಮೇಲೆ, ಅದರಲ್ಲೂ ಹೌಸ್ಫುಲ್ ಕಲೆಕ್ಷನ್ ಗಳಿಸಿದ ಮೇಲೆ ದುಡ್ಡು ವಾಪಾಸು ಕೇಳಲು ಬರುವುದು ನ್ಯಾಯಸಮ್ಮತ ತಾನೆ. ಈ ಬಾರಿ, ಪಕ್ಕಾ ವ್ಯವಹಾರಸ್ಥರಂತೆ ಅವರೆಲ್ಲ ಕಂಡಿದ್ದರು. ನಾವೂ ಅಷ್ಟೇ, ಕಂಪೆನಿಯ ಸಾಲವನ್ನು ನಮ್ಮ ಮಾಲೀಕರು ಈಗ ತೀರಿಸುತ್ತಾರೆ ನೋಡಿ ಎಂಬ ಭಾವಭಂಗಿಯಲ್ಲೇ ನಿಂತಿದ್ದೆವು. ದುಡ್ಡಿನ ಗಂಟು ಇಟ್ಟುಕೊಂಡಿದ್ದ ಸಣ್ಣಪ್ಪನವರೆಲ್ಲಿ?
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹತ್ತೊಂಭತ್ತನೆಯ ಕಂತು


