ಕೆಮ್ಮಣ್ಣು ಜೀರಿಂಬೆ ಮತ್ತು ಚಿಕ್ಕವ್ವನೆಂಬ ಎಮ್ಮೆ: ಎಸ್. ಗಂಗಾಧರಯ್ಯ ಅನುಭವ ಕಥನ
ನನಗೀಗ ಏನು ಮಾಡಬೇಕೆಂಬುದು ತಿಳಿಯದೆ ಪೂರಾ ಗಾಬರಿಗೊಳಗಾದೆ. ಅಂಥ ಗಾಬರಿಯಲ್ಲೂ ಚಿಕ್ಕವ್ವನ ಜಾರುತ್ತಿದ್ದ ಬಾಲವನ್ನೇ ಆಸರೆಯಾಗಿಸಿಕೊಂಡು ಅವಳ ಬೆನ್ನ ಮೇಲೆ ಕೂತು ಬಚಾವಾಗುವ ಆಸೆಯಿಂದ ಹಿಡಿದಿದ್ದ ಬಾಲವನ್ನೂ ಕೈ ಬಿಟ್ಟು ಮೆಲ್ಲಗೆ ಅವಳ ಮೈಯ್ಯ ಹತ್ತಿರ ಸಾಗಿದೆ. ಅದು ನಾನು ಮಾಡಿಕೊಂಡ ದೊಡ್ಡ ಯಡವಟ್ಟಾಗಿತ್ತು. ಮೊದಲೇ ನೊಣ ಕೂತರೆ ಜಾರುವಷ್ಟು ನುಣುಪಾಗಿದ್ದ ಅವಳ ಮೈ ನೀರಿನೊಳಗಿದ್ದುದರಿಂದ ಅದಕ್ಕೆ ಮತ್ತಷ್ಟು ನುಣುಪು ಬಂದು ಮತ್ತಷ್ಟು ಜಾರುತ್ತಾ ನಾನು ಎಷ್ಟೇ ಪಟ್ಟು ಹಾಕಿದರೂ ಆ ಪಟ್ಟುಗಳೆಲ್ಲಾ ಮಕಾಡೆ ಮಲಗಿದವು.
ಎಸ್. ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಐದನೆಯ ಕಂತು


