ಪಪ್ಪುನಾಯಿ ಮತ್ತು ದೆಯ್ಯದ ಚಪ್ಪಲಿ: ವಿಜಯಶ್ರೀ ಹಾಲಾಡಿ ಪ್ರಬಂಧ
ಮಲೆನಾಡು, ಕರಾವಳಿ ಭಾಗದ ಹಳ್ಳಿಯ ಮನೆ ಮನೆಗಳಲ್ಲಿ ನಾಯಿಗಳಿರುವುದು ಕಡ್ಡಾಯ. ಕಾಡು, ಹಾಡಿ, ಗುಡ್ಡ, ಬಯಲುಗಳ ನಡುವೆ ಫರ್ಲಾಂಗುಗಳ ಅಂತರದಲ್ಲಿ ಅವಿತುಕೊಂಡಿರುವ ಮನೆಗಳ ರಕ್ಷಣೆಗೆ, ಜೀವಂತಿಕೆಗೆ ನಾಯಿಗಳು ಅನಿವಾರ್ಯ. ಕಳ್ಳಕಾಕರು, ಜೀವಾದಿಗಳು, ದೆವ್ವ-ಭೂತ-ಪೀಡೆ-ಕುಲೆಗಳನ್ನು ಕೂಡಾ ನಾಯಿಗಳು ದೂರವಿಡುತ್ತವೆಂಬ ನಂಬಿಕೆಯಿದೆ! ಮನುಷ್ಯರ ಕಣ್ಣಿಗೆ ಕಾಣದ ದೆವ್ವ ಭೂತಗಳು ನಾಯಿಗಳಿಗೆ ಕಾಣುತ್ತವಂತೆ, ಇದರಿಂದಾಗಿಯೇ ಅವು ರಾತ್ರಿಯಿಡೀ ಬೊಗಳುವುದಂತೆ! ನಮ್ಮ ಹಳ್ಳಿಯವರ ಈ ತರದ ಕಲ್ಪನೆಗಳಿಗೆ ಯಾವುದೇ ಆಧಾರವಿಲ್ಲವಾದರೂ ಇಂತವುಗಳನ್ನು ಕೇಳುವುದು ರೋಮಾಂಚನಕಾರಿಯಾಗಿತ್ತು.
ವಿಜಯಶ್ರೀ ಹಾಲಾಡಿ ಹೊಸ ಪ್ರಬಂಧ ಸಂಕಲನ “ಕಣ್ಣ ಕಾಡಿದ ಹಾಡು” ಒಂದು ಪ್ರಬಂಧ ನಿಮ್ಮ ಓದಿಗೆ
ಭುವನೇಶ್ವರದ ಭವ್ಯ ಲಿಂಗರಾಜ ದೇವಾಲಯ: ಡಾ. ಜೆ. ಬಾಲಕೃಷ್ಣ ಬರಹ
ಭುವನೇಶ್ವರದಲ್ಲಿ 500ಕ್ಕೂ ಹೆಚ್ಚು ದೇವಾಲಯಗಳಿದ್ದರೂ ಸಹ ಅವುಗಳಲ್ಲಿ ಲಿಂಗರಾಜ ದೇವಾಲಯ ವಾಸ್ತುಶೈಲಿಯ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ. ಒರಿಸ್ಸಾದಲ್ಲಿ ನಿರ್ಮಿತವಾಗಿರುವ ಮೊಟ್ಟಮೊದಲ ಅತಿ ದೊಡ್ಡ ದೇವಾಲಯವಾಗಿರುವುದಲ್ಲದೆ, ಒರಿಸ್ಸಾದ ಶೈವ ದೇವಾಲಯಗಳಲ್ಲಿಯೇ ದೊಡ್ಡ ದೇವಾಲಯವಾಗಿರುವ ಲಿಂಗರಾಜ ದೇವಾಲಯ `ಕಳಿಂಗ ವಾಸ್ತುಶೈಲಿ’ಯ ಅತಿ ಸುಂದರ ಉದಾಹರಣೆಯಾಗಿದೆ. ಕ್ರಿ.ಶ. 6-7ನೇ ಶತಮಾನದಲ್ಲಿ ಆರಂಭವಾದ ಒರಿಸ್ಸಾ ದೇವಾಲಯಗಳ ವಾಸ್ತು ಶಿಲ್ಪ ನಿರ್ಮಾಣ 11ನೇ ಶತಮಾನದಲ್ಲಿ ಲಿಂಗರಾಜ ದೇವಾಲಯದ ನಿರ್ಮಾಣದ ಹೊತ್ತಿಗೆ ಉತ್ತುಂಗಕ್ಕೇರಿತ್ತು. ಆ ವಾಸ್ತು ನಿರ್ಮಾಣ 13ನೇ ಶತಮಾನದ ನಂತರ ಕ್ರಮೇಣ ಕಡಿಮೆಯಾಯಿತು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಮತ್ತೊಂದು ಬರಹ ನಿಮ್ಮ ಓದಿಗೆ
‘ಮೋಹಿತ’ನ ಮೋಹಕ ಕವಿತೆಗಳು: ಅಬ್ದುಲ್ ರಶೀದ್ ಕವನ ಸಂಕಲನಕ್ಕೆ ಎಸ್. ಮಂಜುನಾಥ್ ಮುನ್ನುಡಿ
ಕರಗಿ-ಹರಿಯುವ- ಈ ಶಬ್ದಗಳನ್ನು ಬಳಸಬೇಕಾಗುವುದರಿಂದ ರಶೀದರದ್ದು ಒಂದು ‘ದ್ರವ ಪ್ರತಿಭೆ’! ತನ್ನನ್ನು ಪೂರಾ ಬಿಟ್ಟುಕೊಟ್ಟೇ ಹರಿದುಹೋಗುವಂತಿರುವುದು ನದಿಯ ಜೀವಂತಿಕೆ ತಾನೇ? ಇಷ್ಟು ಹೇಳಿದರೆ ರಶೀದರ ಕವಿತೆಯ ಗುಣವನ್ನು ಪೂರ್ತಿ ಹೇಳಿದಂತಾಗುವುದಿಲ್ಲ. ಅಷ್ಟು ವೈಚಿತ್ರ್ಯಗಳನ್ನು ಒಳಗೊಂಡುದು ಅದು. ಮಾತಿನಲ್ಲಿ ಪ್ರತಿಮೆಯಲ್ಲಿ ಚಿಂತನೆಯಲ್ಲಿ ಭಾವನೆಯಲ್ಲಿ ಹಾಗೆ ವಿಚಿತ್ರವಾದುದು. ಒಂದು ಕಾರಣ: ಇದು ಕವಿತೆಗೆ ಸೇರುವುದು. ಇದು ಸೇರಲಾರದ್ದು ಎಂಬ ಭೇದವಿರದೆ ಏನೆಲ್ಲವನ್ನು ಬೇಕಾದರೂ ಒಳಗೊಳ್ಳುವಂಥದು. ಹಾಗಿದ್ದೂ ಅಂತಿಮವಾಗಿ ಸಹಜತೆಯೇ ಹೆಗ್ಗುರುತಾದ್ದು.
ಅಬ್ದುಲ್ ರಶೀದ್ ಕವನ ಸಂಕಲನ “ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನ ಹುರಿ”ಗೆ ಎಸ್. ಮಂಜುನಾಥ್ ಬರೆದ ಮುನ್ನುಡಿ
ಒರಿಸ್ಸಾ ವಾಸ್ತುಕಲೆ: ಡಾ. ಜೆ. ಬಾಲಕೃಷ್ಣ ಬರಹ…..
ಒರಿಸ್ಸಾದ ವಾಸ್ತು ಶಿಲ್ಪಿಗಳು ದೇಗುಲಗಳನ್ನು ದೇವರ ಅಥವಾ ಮಾನವನ ದೇಹಕ್ಕೆ ಹೋಲಿಸಿದ್ದರು. ಆದುದರಿಂದಲೇ ದೇಗುಲದ ವಿವಿಧ ಭಾಗಗಳಿಗೆ ದೇಹದ ಅಂಗಗಳ ಹೆಸರುಗಳನ್ನೇ ನೀಡಿದ್ದಾರೆ: ಪಾಭಗ (ಪಾದ), ಜಂಘ (ಮೊಣಕಾಲು), ಗಂಡಿ, ಮಸ್ತಕ ಮುಂತಾದವು. ಮುಖ್ಯ ಶಿಖರವುಳ್ಳ ದೇಗುಲವನ್ನು ಗಂಡು ಅಥವಾ ಮದುಮಗನೆಂದೂ ಹಾಗೂ ಜಗಮೋಹನ ದೇಗುಲವನ್ನು ಹೆಣ್ಣು ಅಥವಾ ಮದುಮಗಳೆಂದೂ ಭಾವಿಸಲಾಗುತ್ತಿತ್ತು. ಒರಿಸ್ಸಾದ ದೇಗುಲಗಳಲ್ಲಿ ವಾಸ್ತು ಕಲೆ ಹಾಗೂ ಶಿಲ್ಪಕಲೆಯನ್ನು ಪ್ರತ್ಯೇಕವಾಗಿ ನೋಡುವುದು ಸಾಧ್ಯವೇ ಇಲ್ಲ. ಆದುದರಿಂದಲೇ ಕಲಾ ಸಂಶೋಧಕಿ ಡಾ.ಸ್ಟೆಲ್ಲಾ ಕ್ರಮರೀಷ್ `ಒರಿಸ್ಸಾದ ವಾಸ್ತುಕಲೆ ದೈತ್ಯಾಕಾರದ ಶಿಲ್ಪಕಲೆ’ ಎಂದಿದ್ದಾರೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಮತ್ತೊಂದು ಬರಹ ನಿಮ್ಮ ಓದಿಗೆ
ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ: ಸಂಗೀತ ರವಿರಾಜ್ ಬರಹ
ಇಲ್ಲಿನ ಕವಿತೆಗಳಲ್ಲಿ ಅತಿರಂಜಿತ ಕಲ್ಪನೆಗಳಿಗಿಂತ ತನ್ನ ನಡುವಿನ ಬದುಕನ್ನೇ ಭಿನ್ನವಾಗಿ ಅವಲೋಕಿಸುತ್ತ, ಆ ಮೂಲಕವೇ ತನ್ನ ಭಾವನೆಗಳನ್ನು ಮಿಳಿತಗೊಳಿಸಿ ಕವಿತೆಯಲ್ಲಿ ಸ್ಪುರಿಸುತ್ತಾರೆ. ಕಾವ್ಯದಿಂದಲೇ ಏನನ್ನೋ ಗೆಲ್ಲಬಯಸುತ್ತೇನೆ ಎಂಬ ಸಣ್ಣ ಆಸೆಯಿಂದ, ಜೊತೆಗೆ ಆಸ್ಥೆಯಿಂದ ಹೇಳುವಂಥದನ್ನು ಹೇಳಿಕೊಂಡಿದ್ದಾರೆ. ಮಾತಿಗಿಂತ ಕಾವ್ಯವೇ ತನ್ನ ಅಭಿವ್ಯಕ್ತಿ ಮಾಧ್ಯಮ ಎನಿಸುವಂತಹ ಜೀವಂತಿಕೆಯ ಸಾಲುಗಳು ಕವಿತೆಗಳಲ್ಲಿವೆ.
ಜಗದೀಶ್ ಜೋಡುಬೀಟಿ ಕವನ ಸಂಕಲನ “ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ” ಕುರಿತು ಸಂಗೀತ ರವಿರಾಜ್, ಚೆಂಬು ಬರಹ
ಅಚ್ಚಿಯ ಮದುವೆ….: ಚಂದ್ರಮತಿ ಸೋಂದಾ ಕಾದಂಬರಿಯ ಪುಟಗಳು
ಊರಲ್ಲಿ ಗೌಡ್ರ ಮನೆ ಅಂತ ಇದ್ದಿದ್ದೆ ಎರಡು. ಗಂಡುಹುಡುಗ್ರು ಶಾಲಿಗೆ ಬಂದ್ರೂ ಅವ್ರ ಹೆಣ್ಮಕ್ಳನ್ನ ಕಳುಸ್ತಿರ್ಲೆ. ಬ್ರಾಹ್ಮಣ ಹೆಣ್ಮಕ್ಳಷ್ಟೆ ಶಾಲಿಗೆ ಹೋಗ್ತಿದ್ದ. ಅಚ್ಚಿ ಕಲಿಯದ್ರಲ್ಲಿ ಹುಷಾರಿತ್ತು. ಗೊತ್ತಾಗದಿದ್ನ ಕೇಳಕ್ಕೆ ಅಣ್ಣ ಹ್ಯಾಂಗೂ ಮನೇಲಿದ್ದ. ಎರಡನೇ ತರಗತಿ ಮುಗದಾಗ ಕೂಸು ದೊಡ್ಡಾತು ಅಂತ ಸೀರೆ ಉಡಸಕ್ಕೆ ಶುರುಮಾಡಿದ್ದ. ಇಲ್ಲಿವರಿಗೆ ಅಕ್ಕಯ್ಯದಿಕ್ಳು ಹಾಕಿಬಿಟ್ಟ ಅಂಗಿನ ಅಮ್ಮ ಸರಿಮಾಡಿಕೊಡ್ತಿತ್ತು, ಅದ್ನೇ ಅಚ್ಚಿ ಮನೇಲಿ ತೊಟ್ಗಳ್ತಿತ್ತು. ಶಾಲಿಗೆ ಹೋಪ್ಲೆ ಅಂತ ತಂದಿದ್ದ ಎರಡೂ ಅಂಗಿ ಹರದುಹೋಗಿತ್ತು. ಅಂಟವಾಳಕಾಯಿ ಹಾಕಿ ಬಟ್ಟೆ ತೊಳದ್ರೂ ಚೊಕ್ಕ ಆಗದು ಅಷ್ಟರಲ್ಲೇ ಇತ್ತು.
ಡಾ. ಚಂದ್ರಮತಿ ಸೋಂದಾ ಹೊಸ ಕಾದಂಬರಿ “ದುಪಡಿ”ಯ ಕೆಲವು ಪುಟಗಳು ನಿಮ್ಮ ಓದಿಗೆ
ಕೊನಾರ್ಕ್ನ ಭವ್ಯ ಸೂರ್ಯ ದೇವಾಲಯ: ಡಾ. ಜೆ. ಬಾಲಕೃಷ್ಣ ಬರಹ
ಈಗ ಶಿಖರವೇ ಇಲ್ಲದಿರುವ ಮುಖ್ಯ ದೇಗುಲದ ಉಳಿದಿರುವ ಪೀಠ ಭಾಗದ ಪಶ್ಚಿಮ, ಉತ್ತರ ಹಾಗೂ ದಕ್ಷಿಣ ಭಾಗಗಳಲ್ಲಿ ಕ್ಲೋರೈಟ್ ಶಿಲೆಯಿಂದ ನಿರ್ಮಿಸಿರುವ ಸೂರ್ಯನ ಮೂರು ಪಾರ್ಶ್ವ ದೇವತಾ ವಿಗ್ರಹಗಳಿವೆ. ಆ ವಿಗ್ರಹಗಳ ಮೇಲಿನ ಒಡವೆ, ಆಭರಣಗಳ ಕುಸರಿ ಕಲೆಯಂತೂ ಚಿನಿವಾರನ ಕುಸರಿ ಕಲೆಯಷ್ಟೇ ಸೂಕ್ಷ್ಮ ಹಾಗೂ ಸುಂದರವಾಗಿವೆ. ವಿಶೇಷವೆಂದರೆ ಈ ಪಾರ್ಶ್ವ ದೇವತೆಗಳು ಬೂಟುಗಳನ್ನು ಧರಿಸಿವೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ
ಅಂಕುಡೊಂಕಿನ ಪಯಣ: ಡಾ. ಎಂ ಉಷಾ ಕಾದಂಬರಿಯ ಪುಟಗಳು
ಮೊದಲೇ ಅಸಮಧಾನಗೊಂಡಿದ್ದ ಪುಟ್ಟಮ್ಮನಿಗೆ ಮಕ್ಕಳ ಈ ಕಳ್ಳಾಟದಿಂದ ಪಿತ್ತ ನೆತ್ತಿಗೇರಿತು. ಕಂಕುಳಲ್ಲಿದ್ದ ಮಲ್ಲಿಯನ್ನು ಕೆಳಕ್ಕೆ ಕುಕ್ಕಿದವಳೆ ಸರೋಜಳ ಮೇಲೆ ಮುಗಿಬಿದ್ದಳು. ‘ಮನೆ ಕೆಲಸ ಮಾಡದು ಬುಟ್ಟು ಸೂಳೆರಂಗೆ ಅಲಂಕಾರ ಮಾಡ್ಕತಾ ಕೂತಿದಿಯಾ ಇಲ್ಲಿ? ಯಾವ ನಾಯಕಸಾನಿ ಕೊಟ್ಲೆ ಇದ್ನ ನಿಂಗೆ… ʼ ಎಂದು ಸಿಕ್ಕಸಿಕ್ಕಲ್ಲಿ ಬಡಿಯ ತೊಡಗಿದಳು. ಈ ಬಾರಿ ಗೌರಿಹಬ್ಬಕ್ಕೆಂದು ರಾಜಶೇಖರ ದಾಕ್ಷಾಯಿಣಿಗೆ ಹೊಸ ಸ್ನೋಪೌಡರ್ ಡಬ್ಬಿಗಳನ್ನು ತಂದುಕೊಟ್ಟಿದ್ದನ್ನು ಗಮನಿಸಿದ ಸರೋಜ ಚಿಕ್ಕಮ್ಮನಲ್ಲಿ ಹಳೆಯ ಡಬ್ಬಿಯನ್ನು ಕೇಳಿ ಪಡೆದಿದ್ದಳು. ಇವತ್ತು ಹಬ್ಬದ ದಿನವಾಗಿದ್ದುದು ಮತ್ತು ಕೆಲಸದಲ್ಲಿ ಮುಳುಗಿ ಹೋಗಿರುವ ಅಮ್ಮ ಗಮನಿಸುವುದಿಲ್ಲ ಎನ್ನುವ ಧೈರ್ಯದಲ್ಲಿ ಹಚ್ಚಿಕೊಂಡಿದ್ದಳು.
ಡಾ. ಎಂ. ಉಷಾ ಹೊಸ ಕಾದಂಬರಿ “ಬಾಳ ಬಟ್ಟೆ”ಯ ಕೆಲವು ಪುಟಗಳು ನಿಮ್ಮ ಓದಿಗೆ
`ವ್ಯವಹಾರ ಚತುರ’ ಉಲುವಾಟು ಮಂಗಗಳು: ಡಾ. ಜೆ. ಬಾಲಕೃಷ್ಣ ಬರಹ
ಅಧ್ಯಯನದ ಮತ್ತೊಂದು ಪ್ರಮುಖ ಅಂಶವೆಂದರೆ, ಗಂಡು ಮಂಗಗಳು ಹೆಚ್ಚು ಕದಿಯುತ್ತಿದ್ದವು ಹಾಗೂ ಹದಿಹರೆಯದ ಗಂಡು ಮಂಗಗಳು ಈ ಕ್ರಿಯೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿದ್ದವು. ವಿಜ್ಞಾನಿಗಳು ಹೇಳುವಂತೆ ಹದಿಹರೆಯದ ಮಂಗಗಳು ಹೆಚ್ಚು ಅಪಾಯಕ್ಕೆ ಒಡ್ಡಿಕೊಳ್ಳುವ ನಡವಳಿಕೆ ಹೊಂದಿರುತ್ತವೆ. ಈ ರೀತಿಯ ನಡವಳಿಕೆಯನ್ನು ಉಲುವಾಟು ಮಂಗಗಳು ಮೊದಲಿಗೆ ಹೇಗೆ ಕಲಿತವು ಎಂಬುದೇ ಅಚ್ಚರಿಯ ವಿಷಯವಾಗಿದೆ. ಬಹುಶಃ ಪ್ರಾರಂಭದಲ್ಲಿ ಮನುಷ್ಯರ ಪ್ರಭಾವವಿದ್ದರೂ ಇರಬಹುದು, ಆದರೆ ನಂತರ ಅದು ಹೇಗೆ ಒಂದು `ಸಾಂಸ್ಕೃತಿಕ ನಡವಳಿಕೆ’ಯಾಗಿ ಸಮುದಾಯದಲ್ಲಿ ಪ್ರಸಾರವಾಗಿದೆ ಎನ್ನುವುದರ ಕುರಿತು ಇನ್ನೂ ಹೆಚ್ಚಿನ ಮನೋವೈಜ್ಞಾನಿಕ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ ಫ್ಯಾನಿಯವರು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಕೆಲವು ಬರಹಗಳ ಸರಣಿ ನಿಮ್ಮ ಓದಿಗೆ