‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’
ಚಿಕ್ಕಮಗಳೂರಿನಲ್ಲಿ ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು. ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.
ಗಿರಿಜಾ ರೈಕ್ವ ಬರೆಯುವ ಹೊಸ ಅಂಕಣ ‘ದೇವಸನ್ನಿಧಿ’
ತಿರಿಗಾಡಿದಷ್ಟೂ ಕಾಣುವ ಇಂತಹ ದೇಶಗಳ ಹಂಗಿಲ್ಲದ ನಂಬಿಕೆಗಳ ಪ್ರಪಂಚ ನನಗೊಂದು ಸೋಜಿಗ ಮತ್ತು ಭರವಸೆಯ ಸ್ಪರ್ಶಮಣಿಯಂತೆ ತೋರುತ್ತದೆ. ಕೆಲವು ವರ್ಷಗಳ ಹಿಂದೆ ಬಾಲ್ಟಿಕ್ ದೇಶಗಳಲ್ಲಿ ಅಲೆಯುತ್ತಿದ್ದೆ. ಆಗ ಹೋಗಿ ನೋಡಿದ್ದು ಲಿಥುಯೇನಿಯಾದಲ್ಲಿರುವ ‘ಹಿಲ್ ಆಫ್ ಕ್ರಾಸ್ʼ ಅನ್ನುವ ಗುಡ್ಡ. ಲಿಥೂಯೇನಿಯಾ ಬಾಲ್ಟಿಕ್ ಸಾಗರದ ನಡುವಿನ ಒಂದು ದೇಶ. ೧೪ ನೇ ಶತಮಾನದಿಂದ ಸೋವಿಯತ್ ರಷ್ಯಾದ ಆಳ್ವಿಕೆಯಲ್ಲಿದ್ದು ೧೯೯೧ ರಲ್ಲಿ ಸ್ವತಂತ್ರವಾದ ದೇಶ.
ಗಿರಿಜಾ ರೈಕ್ವ ಬರೆಯುವ ದೇಗುಲಗಳ ಕುರಿತ ಹೊಸ ಪ್ರವಾಸ ಅಂಕಣ “ದೇವಸನ್ನಿಧಿ” ಇಂದಿನಿಂದ
ದೀಪಧಾರಿಣಿಯ ಬೆಳಕಿನಲ್ಲಿ ಹೊಳೆದ ಮಿಂಚು
ಹೀಗೆಲ್ಲಾ ಓದುತ್ತಾ, ಫೋಟೊ ತೆಗೆಯುತ್ತಾ ಮುಂದೆ ಹೋಗುತ್ತಿದ್ದೆ. ಅಲ್ಲೇ ಅಲ್ಲೇ ಇನ್ನೊಂದು ಫಲಕ. ಅದರಲ್ಲಿ ಸಣ್ಣಸಣ್ಣ ಅಕ್ಷರಗಳು. ಆಸ್ಪತ್ರೆಯಲ್ಲಿ ಒಳರೋಗಿಯಾಗಿದ್ದವರಿಗೆಲ್ಲಾ ತಿಳಿದೇ ಇರುತ್ತದೆ ರೋಗಿಯ ಹಾಸಿಗೆಯ ಪಕ್ಕದಲ್ಲಿ ಒಂದು ಕರೆಗಂಟೆಯ ಸ್ವಿಚ್ ಇರುತ್ತದೆ ಎನ್ನುವುದು. ಆಮ್ಲಜನಕದ ಸಿಲಿಂಡರ್ ಒಂದೊಮ್ಮೆ ಖಾಲಿಯಾಗಿದ್ದರೂ ಆತಂಕಗೊಳ್ಳದ ವ್ಯಕ್ತಿ ಈ ಕರೆಗಂಟೆ ಕೆಲಸ ಮಾಡದಿದ್ದರೆ ಮಾತ್ರ ಸಾವಿನಷ್ಟೇ ಭಯಬೀಳುವುದು ಖಚಿತ.
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ
ಸಿಸಿಲಿಯನ್ ಡೈರೀಸ್: ಯುರೇಕಾ ನಗರಿ ಸಿರಕುಸಾ
ಸಿಸಿಲಿಯ ಹತ್ತು ದಿನದ ಪ್ರವಾಸದಲ್ಲಿ ಮೊದಲು ಭೇಟಿ ಕೊಟ್ಟಿದ್ದು “ಸಿರಕುಸಾ”ಗೆ. ಹೌದು! ಇದು ಆರ್ಕಿಮಿಡಿಸ್ ನ ಜನ್ಮಸ್ಥಳ ಹಾಗೂ ವಾಸಸ್ಥಳವಾಗಿತ್ತು. ಆರ್ಕಿಮಿಡಿಸ್ ಎಂದಾಕ್ಷಣ ಯುರೇಕಾ ಎಂದು ಮಾತ್ರ ತಿಳಿದಿದ್ದ ನನಗೆ, ಈ ಪ್ರವಾಸ ಬೇರೆಯ ಪ್ರಪಂಚವನ್ನೇ ತೆರೆದಿಟ್ಟಿತು. ಆರ್ಕಿಮಿಡಿಸ್ ತನ್ನ ಬುದ್ಧಿಮತ್ತೆಯನ್ನು ಉಪಯೋಗಿಸಿ ರಾಜ್ಯವು ಭದ್ರವಾಗಿರಲು ಬೇಕಾದ ಅನೇಕ ಸಲಹೆಗಳನ್ನು ಕೊಡುತ್ತಿದ್ದ. ಅವನ ರಾಜ್ಯ ಸಿರಕುಸಾದಲ್ಲಿ ಓಡಾಡಿದ ಅನುಭವಗಳನ್ನು ಗುರುದತ್ ಅಮೃತಾಪುರ ಅವರು ತಮ್ಮ ‘ದೂರದ ಹಸಿರು’ ಅಂಕಣದಲ್ಲಿ ಪ್ರಸ್ತುತಪಡಿಸಲಿದ್ದಾರೆ.
ಮಾರ್ಟಿನ್ ಲೂಥರ್ ಕಿಂಗ್ ನೆನಪಿನಲ್ಲಿ ಹಾಕಿದ ಹೆಜ್ಜೆಗಳು
ನಾನು ವಿದೇಶದಲ್ಲಿರುವ ಪರದೇಶಿ ಎನ್ನಿಸಲಿಲ್ಲ. ಅಮೆರಿಕ ದೇಶವನ್ನು ನೋಡುವ ದೃಷ್ಟಿಕೋನವೇ ಬದಲಾಯ್ತು. ಆ ದಿನ ನನ್ನುಸಿರಿಗೆ ಉಸಿರು ಕೊಟ್ಟ ಮಾರ್ಟಿನ್. ನನಗೀಗ ಜೀವನ ಬೇಕು ಅನಿಸಲು ಶುರುವಾಯ್ತು. ಒಳಗಿನ ಕಣ್ಣು ಇಂಚಿಂಚೇ ತೆರೆಯ ಹತ್ತಿತು. ಮುಂದಿನ ಎಲ್ಲಾ ದಿನಗಳ ಪ್ರಯಾಣದಲ್ಲಿ ಅಲ್ಲಿನ ಎಲ್ಲೆಡೆಯಲ್ಲೂ ಕೆಳಮಟ್ಟದ ಕೆಲಸ ಎಂದು ಗುರುತಿಸಲ್ಪಟ್ಟಿರುವ ಎಲ್ಲಾ ಕೆಲಸಗಳನ್ನು ಕಪ್ಪು ಜನರೇ ಮಾಡುತ್ತಿದ್ದದ್ದು ಎದ್ದು ಕಾಣುತ್ತಿತ್ತು. ಬಿಳಿಯರ ಜೊತೆಗೆ ತಮ್ಮನ್ನು ಗುರುತಿಸಿಕೊಳ್ಳಬೇಕೆನ್ನುವ ಹಪಾಹಪಿ ಅವರಲ್ಲಿ ಇನ್ನೂ ಜೀವಂತವಿರುವುದನ್ನು ಕಂಡೆ.
‘ಕಂಡಷ್ಟು ಪ್ರಪಂಚ’ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ
ಟ್ಯಾಗೋರರ ಮನೆಯಂಗಳದಲ್ಲಿ ಕಂಡ ಸತ್ಯಗಳು
ತಮ್ಮ 77ನೇ ಹುಟ್ಟುಹಬ್ಬದಂದು ಟ್ಯಾಗೋರರು ಇದೇ ಮನೆಯಿಂದ ’ಜನಮ್ ದಿನ್’ ಎನ್ನುವ ತಮ್ಮ ಕವಿತೆಯನ್ನು ಆಕಾಶವಾಣಿಯ ನೇರ ಪ್ರಸಾರದಲ್ಲಿ ಓದಿದ್ದರು. ದೇಶದ ಮೊಟ್ಟಮೊದಲ ನೇರ ಪ್ರಸಾರ ಆಕಾಶವಾಣಿಯಲ್ಲಿ ಅದಾಗಿತ್ತು. ಆದರೀಗ ಆ ಮನೆ ಇಳಿ ವೇಳೆಯ ಎಲ್ಲಾ ಅಪರ ಕೃತ್ಯಗಳಿಗೆ ಚಾವಡಿಯಾಗಿದೆಯೆಂದು ತಿಳಿಯಿತು. ಎಷ್ಟು ಆಸಕ್ತಿ ಉತ್ಸಾಹದಿಂದ ಅಲ್ಲಿಗೆ ಬಂದಿದ್ದೆನೋ ಅಷ್ಟೇ ಮನನೊಂದು ಅಲ್ಲಿ ನಿಂತಿದ್ದೆ. ಅಂಜಲಿ ರಾಮಣ್ಣ ಬರಹ
ವೆರೋನಾ: ಅಮರ ಪ್ರೇಮದ ನಿದರ್ಶನ
ರೋಮಿಯೋ ಜೂಲಿಯೆಟ್ ದುರಂತ ಪ್ರೇಮ ಕಥೆಯ ಎಳೆಯ ಮೇಲೆ ಇಂದಿಗೂ ಬರುತ್ತಿವೆ, ಮುಂದೆಯೂ ಬರುತ್ತವೆ. ಆದರೆ ಈ ಕಥೆ ಕಾಲ್ಪನಿಕವಲ್ಲ ಎಂಬುದು ಗೊತ್ತೇ? ಇದು ನಿಜವಾಗಿಯೂ ಇಟಾಲಿಯ “ವೆರೋನಾ” ಎಂಬಲ್ಲಿ ನಡೆದಿರುವ ಘಟನೆ! ಈ ಅಮರ ಪ್ರೇಮದ ಘಟನೆಗಳು ಅನೇಕ ಸಾಹಿತಿಗಳನ್ನು ಪ್ರಭಾವಿಸಿದೆ. ಅದರಲ್ಲಿ ವಿಲಿಯಂ ಷೇಕ್ಸ್ಪಿಯರ್ ಕೂಡ ಒಬ್ಬರು!
‘ದೂರದ ಹಸಿರು’ ಸರಣಿಯಲ್ಲಿ ರೋಮೀಯೋ-ಜೂಲಿಯಟ್ ಕಥೆ ನಡೆದ ಸ್ಥಳದ ಕುರಿತು ಬರೆದಿದ್ದಾರೆ ಗುರುದತ್ ಅಮೃತಾಪುರ
‘ಬದಲಾಗದೆ ಉಳಿದವರು ಮಾತ್ರ ಪುರುಷರು’
ಬಹುತೇಕ ಎಲ್ಲಾ ವಸ್ತು ಸಂಗ್ರಹಾಲಯಗಳಲ್ಲಿ ಇರುವಂತೆ ಇಲ್ಲಿಯೂ ಸಹ ಕಜಾರ್ ಮಹಿಳೆಯರು ಕರಕುಶಲದಲ್ಲಿ, ಅಡುಗೆ ವಿಧಾನದಲ್ಲಿ, ಸೌಂದರ್ಯ ಕಲೆಯಲ್ಲಿ, ಕಾವ್ಯ ಕಟ್ಟುವಿಕೆಯಲ್ಲಿ ಬೆಳೆದು ಬಂದ ಬಗೆಗಳ ಬಗ್ಗೆ ಸಾಕ್ಷಿಸಹಿತ ಪ್ರದರ್ಶನ ಇತ್ತು. 1789-1925 ಈ ಕಾಲದಲ್ಲಿ ಇರಾನ್ ದೇಶವನ್ನು ಆಳಿದ ಕಜಾರ್ ಮನೆತನದ ಹೆಣ್ಣು ಮಕ್ಕಳು ಇಸ್ಲಾಮೀಯರಲ್ಲೇ ಅತ್ಯಂತ ಆಧುನಿಕ ಆಲೋಚನೆ ಇದ್ದವರು ಎಂದು ಹೆಸರಾಗಿದ್ದಾರೆ. ಅಂಜಲಿ ರಾಮಣ್ಣ ಬರಹ
ಪಂಜಾಬಿಗೆ ಹೋಗಿ ಲಸ್ಸಿ ಕುಡಿಯದಿರೆ ಮೆಚ್ಚನಾ ಪರಮಾತ್ಮನು
ಅಮೃತಸರ ಸಿಖ್ಖರ ಮುಖ್ಯ ಸ್ಥಳವಾದರೂ ಇಲ್ಲಿಂದ 11 ಕಿಲೋಮೀಟರ್ ದೂರದಲ್ಲಿ ಇದೆ ಲವ-ಕುಶರ ಜನ್ಮಸ್ಥಾನ. ಈಗ ಅದನ್ನು ರಾಮತೀರ್ಥ ಮಂದಿರ ಎಂದು ಗುರುತಿಸಲಾಗಿದೆ. ಅಲ್ಲೊಂದು ಸಣ್ಣ ಗುಡಿ ಇದೆ. ಅದರ ಮುಂದೆ ಕುಳಿತಿದ್ದ ಹಿರಿಯರೊಬ್ಬರು ‘ಇಲ್ಲಿಗೆ ಯಾರೂ ಬರುವುದೇ ಇಲ್ಲ ಅದಕ್ಕೇ ನಿತ್ಯ ಪೂಜೆಯೂ ಇಲ್ಲ’ ಎಂದರು. ಸಲಾಕೆಯಿಂದ ಮಾಡಿದ್ದ ಬಾಗಿಲಿಗೆ ಬೀಗ ಹಾಕಿತ್ತು. ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ