ಇರಾನ್ ದೇಶಕ್ಕೆ ತೆರಳಿದ್ದ ಕ್ರೀಡಾಪಟು ಅರ್ಜುನ ಬಸಪ್ಪ ಗಾಯಕವಾಡ
ಗಂಟಿಚೋರ್ ಸಮುದಾಯದಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದ ಕ್ರೀಡಾಪಟು ಅಂದರೆ, ಅರ್ಜುನ ಬಸಪ್ಪ ಗಾಯಕವಾಡ. ಕ್ಷೇತ್ರಕಾರ್ಯದಲ್ಲಿ ರಾಯಭಾಗ ಸಮೀಪದ ಶಾಹು ಪಾರ್ಕ್ ನೋಡಲು ಹೋದಾಗ ನಮ್ಮ ಜತೆಗೆ ಎ.ಬಿ. ಗಾಯಕವಾಡ ಅವರ ಮಗ ವಿಜಯ್ ನಮ್ಮ ಜೊತೆಗೆ ಬಂದಿದ್ದರು. ತನ್ನ ತಂದೆಯ ಕ್ರೀಡಾ ಸಾಹಸವನ್ನು ವಿವರಿಸಿದರು. ಗಾಯಕವಾಡರ ರಾಯಭಾಗದ ಮನೆಗೆ ಹೋಗಿದ್ದೆವು. ಅಲ್ಲಿ ಗಾಯಕವಾಡರು ಕ್ರೀಡೆಯಲ್ಲಿ ಭಾಗವಹಿಸಿದ ಫೋಟೋ ಚಿತ್ರಗಳು ನೋಡಲು ಸಿಕ್ಕವು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಇಪ್ಪತ್ತಮೂರನೆಯ ಕಂತು
ವಚನದ ಹಾದಿಗೆ ಸೆಳೆದ ಫ.ಗು. ಹಳಕಟ್ಟಿಯವರು…
ಈ ನೆನಪು ಏಕೆ ಉಳಿದಿದೆ ಎಂದರೆ, ಜನ ಈ ಬಡ ವಯೋವೃದ್ಧರ ಕಾಲಿಗೆ ಏಕೆ ಬೀಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಬ್ಯಾಂಕಿಗೆ ಭೇಟಿ ಕೊಡಬೇಕಾದ ಪ್ರಸಂಗವಿದ್ದಾಗ ಹಳಕಟ್ಟಿಯವರು ಆ ಬೃಹತ್ ದೇವಾಲಯದ ಮುಂದೆ ನಿಧಾನವಾಗಿ ಹಾಯ್ದು ಬ್ಯಾಂಕ್ ಕಚೇರಿಗೆ ಹೋಗುವ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮತ್ತು ಪುರುಷರು ಅವರ ಕಾಲುಮುಟ್ಟಿ ನಮಸ್ಕಾರ ಮಾಡುತ್ತಿದ್ದರು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೊಂಭತ್ತನೆಯ ಕಂತು
ನರಭಕ್ಷಕ ಹೆಜ್ಜೆಗಳ ಸಪ್ಪಳ
ಇವನೇನಾ ಆ ಸಾಹೇಬ… ಕುದುರೆ ಗಾಡಿಯ ಮೇಲೆ ಬಂದು ದಿಕ್ಕೆಟ್ಟವರಿಗೆ ಹೊಸ ಬಟ್ಟೆ ದಾನ ಮಾಡುತ್ತಿದ್ದವನು ಎನಿಸಿ ಅಚ್ಚರಿಗೊಂಡೆ. ಆ ಕಾಲಕ್ಕೇ ಆತ ವಿಪರೀತ ಲಂಚಕೋರನಾಗಿ ಹಲವು ಬಾರಿ ಸಸ್ಪೆಂಡ್ ಆಗಿದ್ದ. ಡಿಸ್ಮಿಸ್ ಒಂದೇ ಬಾಕಿ ಇದ್ದದ್ದು. ಆ ಮನೆಯೂ ಅವನದಾಗಿರಲಿಲ್ಲ. ಬಾಡಿಗೆ ಮನೆ ಅದು. ಅದರ ಅಳತೆಯೊ ಹತ್ತು ಬೈ ಹತ್ತು ಅಡಿ ಮಾತ್ರ. ಮೇಲೆ ತಗಡು ಹಾಸಿದ್ರು. ಸಾಲಾಗಿ ಅದೇ ತರದ ಇನ್ನೂ ನಾಲ್ಕು ಮನೆಗಳಿದ್ದವು.
ಮೊಗಳ್ಳಿ ಗಣೇಶ್ ಬರೆಯುವ ಸರಣಿ
ಔಚಿತ್ಯ ಅಂದ್ರೆ ಬೇಸಿಕ್ ರೂಲ್ಸ್ : ಎಮ್ ಎಲ್ ಭಟ್
ಯಕ್ಷಗಾನ ಪ್ರದರ್ಶನವೊಂದರಲ್ಲಿ ಪೂರ್ವರಂಗವು ಕಲಿಕೆಗಾಗಿ ಇರುವ ಅವಕಾಶ. ತೆಂಕು ತಿಟ್ಟಿನಲ್ಲಿ ಅದನ್ನು ಇನ್ನೂ ಉಳಿಸಿಕೊಳ್ಳಲಾಗಿದೆ. ಬಡಗು ತಿಟ್ಟಿನಲ್ಲಿಯೂ ತಕ್ಕಮಟ್ಟಿಗಾದರೂ ಪೂರ್ವರಂಗವನ್ನು ಉಳಿಸಿಕೊಳ್ಳಬೇಕು ಎಂದು ಹೇಳುವ ಎಂ.ಎಲ್. ಭಟ್ ಅವರು, ಯಕ್ಷಗಾನದ ಜೊತೆಗೆ ದೀರ್ಘವಾದ ನಂಟು ಹೊಂದಿದವರು. ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯಲ್ಲಿ ಅವರೊಡನೆ ನಡೆಸಿದ ಮಾತುಕತೆಯನ್ನು ಬರಹರೂಪಕ್ಕಿಳಿಸಿದ್ದಾರೆ.
ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ
ಬೇಸಿಗೆ ರಜೆಯ ಕುರಿತು ಅನೇಕ ಅಭಿಪ್ರಾಯಗಳಿವೆ. ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ ಇಲ್ಲಿದೆ.
ಕ್ರಿಯಾಶೀಲ ಸಂಘಟನೆಗಳು ಮತ್ತು ಆಗ್ರಹಗಳು
ಗಂಟಿಚೋರರ ಸಂಘಟನೆಗಳು ಆಯಾ ಭಾಗದ ಸಮಸ್ಯೆಗಳನ್ನು ಗುರುತಿಸುವ ಮತ್ತು ಆ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕಿದೆ. ಸಮುದಾಯದ ಸಮಸ್ಯೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಲಿಂಗದ ನೆಲೆಯಲ್ಲಿ ಮಹಿಳೆಯರ ಸಮಸ್ಯೆಗಳು ಬೇರೆಯೇ ಆಗಿರುತ್ತವೆ. ಗಂಟೀಚೋರರ ಕಥನಗಳು ಸರಣಿಯಲ್ಲಿ ಗಂಟಿಚೋರರ ಸಂಘಟನೆಗಳ ಕುರಿತು ಅರುಣ್ ಜೋಳದ ಕೂಡ್ಲಿಗಿ ಬರೆದ 22ನೆಯ ಕಂತು ಇಂದಿನ ಓದಿಗಾಗಿ
ಅಧಿಕಾರವೆಂಬ ಮುಳ್ಳಿನ ಹಾದಿಯಲ್ಲಿ..
ಡಾ. ವೈ.ವಿ. ಅವರು ತೆಲುಗಿನಲ್ಲಿ ಬರೆದ ‘ನಾ ಜ್ಞಾಪಕಾಲು’ ಅನ್ನುವ ಆತ್ಮಕಥೆಯಲ್ಲಿ ತಮ್ಮ ಜೀವನದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದ್ದಾರೆ. ಆಂಗ್ಲ ಭಾಷೆಯಲ್ಲಿ ಬರೆದ ಪುಸ್ತಕವು, ದೇಶದ ಆರ್ಥಿಕತೆಯ ಬಗೆಗಿನ ಸಂಕೀರ್ಣ ವಿಷಯಗಳನ್ನು ಒಳಗೊಂಡಿದೆ. ಇವೆರಡನ್ನು ಒಟ್ಟುಗೂಡಿಸಿ, ಹಣಕಾಸು ವಿಷಯದಲ್ಲಿ ಜ್ಞಾನ ಇಲ್ಲದವರಿಗೂ ಅರ್ಥವಾಗುವಂತೆ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸುವುದು ಖಂಡಿತವಾಗಿಯೂ ಸುಲಭದ ವಿಷಯವಲ್ಲ. ಎಂ.ಎಸ್. ಶ್ರೀರಾಮ್ ಈ ಕೆಲಸವನ್ನುಯಶಸ್ವಿಯಾಗಿ ಮಾಡಿದ್ದಾರೆ. ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ
ಜಪಾನ್ ನ ʻಡ್ರೈವ್ ಮೈ ಕಾರ್ʼ: ವಿಷಾದ ಪ್ರಧಾನ ಚಿತ್ರ
ಹಿರೋಶಿಮಾಗೆ ಆ ನಾಟಕವನ್ನು ನಿರ್ದೇಶಿಸಲು ಹೊರಟವನಿಗೆ ಪ್ರಾರಂಭದಲ್ಲಿಯೇ ಅನಿರೀಕ್ಷಿತ ಪ್ರಸಂಗ ಎದುರಾಗುತ್ತದೆ. ನಾಟಕ ಸಂಸ್ಥೆಯವರು ಕಫುಕುನ ಕಾರಿಗೆ ಡ್ರೈವರೊಬ್ಬಳನ್ನು ಏರ್ಪಾಡು ಮಾಡಿರುತ್ತಾರೆ. ಆದರೆ ಕಫುಕುಗೆ ಇಷ್ಟವಾಗುವುದಿಲ್ಲ. ಏಕಾಂಗಿಯಾಗಿ ಕಾರಲ್ಲಿ ಓಡಾಡುವುದು ಇಷ್ಟವೆನಿಸಿ ಬೇಡವೆಂದರೂ ಕೇಳದೆ ಮಿಸಕಿ ವಕಾರಿ ಎಂಬ ಯುವತಿಯನ್ನು ಗೊತ್ತು ಮಾಡುತ್ತಾರೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಜಪಾನೀ ಚಿತ್ರದ ಕುರಿತ ಹೊಸ ಬರಹ
ಬದುಕಿಗೆ ಸಾವಿರ ತಿರುವುಗಳು
ಹೊಸದಾಗಿ ಬಂದ ಕೃಷ್ಣಾ ಜಾಣನೂ ಮೃದು ಸ್ವಭಾವದವನೂ ಆಗಿದ್ದ. ಹೆಣ್ಣು ಧ್ವನಿಯ ಆತ ‘ಬ್ಯೂಟಿಫುಲ್’ ಆಗಿದ್ದ. ಆತ ಬಂದ ಹೊಸದರಲ್ಲಿ ಜಗ್ಗು ಒಂದು ಸಲ ಕೃಷ್ಣಾಗೆ ಮತ್ತು ನನಗೆ ಐಸ್ಕ್ರೀಮ್ ತಿನ್ನಲು ಪಾರ್ಲರ್ಗೆ ಕರೆದುಕೊಂಡು ಹೋದ. ವಿಜಾಪುರದಲ್ಲಿ ಇದ್ದುದರಲ್ಲೇ ಅದು ಬಹಳ ಪಾಶ್ ಆಗಿತ್ತು. ಒಳಗೆ ಕ್ಯಾಬಿನ್ಗಳಿದ್ದವು. ಒಂದು ಕ್ಯಾಬಿನ್ನಲ್ಲಿ ಹೋಗಿ ಕುಳಿತೆವು. ನನಗೆ ಅಂಥ ಅನುಭವ ಮೊದಲನೆಯದಾಗಿತ್ತು. ಒಂದು ಪೆಗ್ ತುಂಬ ಐಸ್ಕ್ರೀಮ್ ಕೂಡ ಮೊದಲ ಬಾರಿಗೆ ತಿಂದದ್ದು. ಕೃಷ್ಣಾ ಬಹಳ ಮುಜುಗರದಿಂದ ತಿನ್ನುತ್ತಿದ್ದ.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೆಂಟನೆಯ ಕಂತು