ಈ ಹೊತ್ತಿಗೆ ಕಥಾ ಸ್ಪರ್ಧೆಗಳ ಫಲಿತಾಂಶ
ಕಳೆದ ಆರು ವರ್ಷಗಳಿಂದ ಕನ್ನಡ ಸಾಹಿತ್ಯದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಬೆಂಗಳೂರಿನ ಈ ಹೊತ್ತಿಗೆ ಸಂಸ್ಥೆಯು, ಕಳೆದ ವರ್ಷದಿಂದ ಕಥಾ ಸ್ಪರ್ಧೆಗಳನ್ನೂ ಏರ್ಪಡಿಸುತ್ತ ಬಂದಿದೆ. ಈ ಬಾರಿ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ಗಾಗಿ ಅಪ್ರಕಟಿತ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಹಾಗೆಯೇ ೨೫ ವಯೋಮಿತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಥಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ, ಹೊರ ರಾಜ್ಯಗಳ ಹಾಗು ವಿದೇಶದಲ್ಲಿರುವ ಕನ್ನಡಿಗರೂ ಈ ಹೊತ್ತಿಗೆ ಎರಡೂ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಪ್ರಶಸ್ತಿಗಾಗಿ ಒಟ್ಟು ೨೬ ಅಪ್ರಕಟಿತ ಕಥಾ ಸಂಕಲನಗಳು ಬಂದಿದ್ದವು. ಖ್ಯಾತ ಸಾಹಿತಿ, ಶ್ರೀ. ಅಮರೇಶ ನುಗಡೋಣಿಯವರು ಈ ವಿಭಾಗದ ತೀರ್ಪುಗಾರರಾಗಿದ್ದರು. ಮತ್ತು ನಾಡಿನ ಹೆಸರಾಂತ ಕತೆಗಾರರಾದ ಶ್ರೀಮತಿ. ಸುನಂದಾ ಕಡಮೆ ಹಾಗು ಶ್ರೀ. ಕರ್ಕಿ ಕೃಷ್ಣಮೂರ್ತಿಯವರು ಕಾಲೇಜು ವಿದ್ಯಾರ್ಥಿಗಳ ವಿಭಾಗ ತೀರ್ಪುಗಾರರಾಗಿದ್ದರು ಎಂದು ತಿಳಿಸಲು ಹರ್ಷಿಸುತ್ತೇವೆ. ೧೦ ಮಾರ್ಚ್ ೨೦೧೯ರಂದು, ಬೆಂಗಳೂರಿನ ಕಪ್ಪಣ್ಣ ಅಂಗಳ ಸಭಾಂಗಣದಲ್ಲಿ, ಬೆಳಿಗ್ಗೆ ೧೦ರಿಂದ ಸಂಜೆ ೬.೩೦ರವರೆಗೆ ನಡೆಯಲಿರುವ ಈ ಹೊತ್ತಿಗೆಯ ‘ಹೊನಲು’ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಹಾಗು ಬಹುಮಾನ ಪ್ರದಾನ ಮಾಡಲಾಗುವುದು.
Read More