Advertisement

Month: April 2024

ಅರ್ಥಲೋಕದ ಬೆರಗುಗಳ ಅನಾವರಣ

ಈ ಕಾದಂಬರಿಯ ಕಥನ ಶೈಲಿ ಸರಳವಾಗಿಲ್ಲ; ಯಾಕೆಂದರೆ, ಇಕೋ ತಾನು ಪ್ರಸ್ತುತ ಪಡಿಸುತ್ತಿರುವುದು ಮಧ್ಯಯುಗೀಯ ಅಧಿಕೃತ ಹಸ್ತಪ್ರತಿಯೆಂಬ ಕಲ್ಪನೆ ಓದುಗರಲ್ಲಿ ಮೂಡಿಸಲಿಕ್ಕಾಗಿ ಪ್ರಯತ್ನಿಸಿದ್ದಾನೆ. ಮಧ್ಯಯುಗದ ಐತಿಹಾಸಿಕ ವಿವರಗಳು, ಅಂದಿನ ಸಮಕಾಲೀನ ಚರ್ಚೆಗಳು, ಆವಿಷ್ಕಾರಗಳು, ಚರ್ಚು ಮತ್ತದರ ಆಂತರಿಕ ವಿವಾದಗಳು, ಇತ್ಯಾದಿ ಅನೇಕ ವಿವರಗಳನ್ನು ಬಳಸಿಕೊಳ್ಳಲಾಗಿದೆ. ಹಾಗೆಯೇ ಅನೇಕ ಸಮಕಾಲೀನ ವಿದ್ವಾಂಸರು, ಅನೇಕ ಭಾಷೆಗಳಲ್ಲಿರುವ ಅವರ ಬರಹಗಳನ್ನು, ಅನೇಕ ಪುರಾತನ ಉದ್ಧರಣಗಳನ್ನು ಉಲ್ಲೇಖಿಸಲಾಗಿದೆ.
ಉಂಬರ್ಟೋ ಇಕೋ ಬರೆದ “ದ ನೇಮ್ ಆಫ್ ದ ರೋಸ್”ಕಾದಂಬರಿಯ ಕುರಿತು ಬರೆದಿದ್ದಾರೆ ಕಮಲಾಕರ ಕಡವೆ

Read More

ಅವ`ಲಕ್ಕಿ’ ಎಂಬ ಅದೃಷ್ಟಶಾಲಿ ತಿನಿಸು!

ತೌಳವನಾಡಿನಲ್ಲಿ ಅವಲಕ್ಕಿಗೆ ಬಜಿಲು ಎಂದು ಹೇಳುತ್ತಾರೆ. ಬೆಳಗ್ಗೆ ಅಥವಾ ಸಂಜೆಯ ತಿಂಡಿಗೆ ಸಜ್ಜಿಗೆ-ಬಜಿಲು ಕರಾವಳಿಯಲ್ಲಿ ಬಹಳ ಪ್ರಸಿದ್ಧ. ಸಜ್ಜಿಗೆ ಎಂದರೆ ಉಪ್ಪಿಟ್ಟು. ಇದು ಕರಾವಳಿಯ ಹೊರಗಿನವರಿಗೆ ತಿಳಿದಿರಲಿಕ್ಕಿಲ್ಲ. ಇನ್ನೊಂದು ಅಷ್ಟೇ ಪ್ರಸಿದ್ಧ ತಿಂಡಿಯೆಂದರೆ ಕಡ್ಳೆ-ಬಜಿಲು. ಇವು ಇಲ್ಲಿನ ಹೊಟೇಲುಗಳಲ್ಲೂ ಸಿಗುತ್ತವೆ. ಸಮಾರಂಭಗಳಲ್ಲಿ ಉಳಿದ ತಿಂಡಿಗಳಿಗಿಂತ ಅವಲಕ್ಕಿ-ಸಜ್ಜಿಗೆ ಮಾಡುವುದೇ ಹೆಚ್ಚು. ಏಕೆಂದರೆ, ಇದನ್ನು ತಯಾರಿಸಲು ಕಡಿಮೆ ಶ್ರಮ-ಸಮಯ-ಪರಿಕರ ಸಾಕು. ಮಧ್ಯಾಹ್ನವಾದರೂ ಹಸಿವೆಯಾಗುವುದಿಲ್ಲ. ಹೊಟ್ಟೆಯಲ್ಲಿ ಕಾಂಕ್ರೀಟ್ ಹಾಕಿದಂತೆ ಗಟ್ಟಿ!
ಸಹನಾ ಕಾಂತಬೈಲು ಬರೆದ ಲಲಿತ ಪ್ರಬಂಧಗಳ ಸಂಕಲನ ‘ಇದು ಬರಿ ಮಣ್ಣಲ್ಲ’ ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ತ್ರಿಮೂರ್ತಿಗಳನ್ನು ರಂಗದ ಬದುಕಿನ ಚಿತ್ರಗಳೊಂದಿಗೆ ಸಮೀಕರಿಸುತ್ತ…

‘ಕಾಯೌ ಶ್ರೀಗೌರಿ..’ ಎಂಬ ನಾಡಗೀತೆಯನ್ನು ಅಂದು ಬರೆದಿದ್ದ ಬಸವಪ್ಪ ಶಾಸ್ತ್ರಿಗಳು ನೆನಪಾಗುತ್ತಾರೆ. ಮೈಸೂರನ್ನು ನಾವಿಂದು ಸಾಂಸ್ಕೃತಿಕ ನಗರಿ ಎಂದು ಕರೆದುಕೊಳ್ಳುತ್ತೇವೆ. ವಿದ್ವತ್ತಿಗೆ ಹೆಸರಾದದ್ದು ಎಂದು ತಿಳಿದೇ ಇದೆ. ಇಷ್ಟಿದ್ದೂ ಬಸವಪ್ಪ ಶಾಸ್ತ್ರಿಗಳ ಸ್ಮಾರಕದ ಕಡೆಗೆ ಅಸಡ್ಡೆ ಯಾಕೆ ಮತ್ತು ಹೇಗೆ ಬೆಳೆಯಿತೋ ಗೊತ್ತಿಲ್ಲ. ಮೈಸೂರಿನಲ್ಲಿರುವ ಎಲ್.ಐ.ಸಿ ಬಿಲ್ಡಿಂಗ್ ಬಳಿ ರಸ್ತೆ ಪಕ್ಕದಲ್ಲಿ ಬಸವಪ್ಪ ಶಾಸ್ತ್ರಿಗಳ ಸ್ಮಾರಕವಿದೆ. ಅದರ ಬಣ್ಣ ಮಾಸಿ, ಗೋಡೆಗಳ ಮೇಲೆಲ್ಲ ಬಳ್ಳಿ ಹಬ್ಬಿಕೊಳ್ಳುವಷ್ಟು ನಿರ್ಲಕ್ಷ್ಯವೇಕೆ..”

Read More

ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

“ಬಸ್ಸು ಥೀಯೇಟರ್ ಬಸ್ಟ್ಯಾಂಡಿನಲ್ಲಿ
ಪಕ್ಕ ಕುಳಿತವರು
ವಿನಾಕಾರಣ
ಮೌನ ಮುರಿದಾಗ
ಮಾತಿಗಿಳಿದಾಗ
ಆಗುತ್ತದೆ
ಎಂಥದೋ ಸಮಾಧಾನ”- ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

Read More

ಸಾತ್ವಿಕ ಜೀವನವಿಧಾನವೇ ಬಹುದೊಡ್ಡ ಆಸ್ತಿ

ಒಂದು ಸಲ ಮಳೆಗಾಲದಲ್ಲಿ ರಾತ್ರಿ ಹೀಗೆ ಸಿಕ್ಕಿಹಾಕಿಕೊಂಡು ನಾವು ಮಕ್ಕಳು ಮತ್ತು ಹಿರಿಯರೆಲ್ಲ ಬಹಳ ಹಸಿದು ಆ ಹಾಸ್ಟೆಲ್ ಕೋಣೆಯಲ್ಲಿ ಕುಳಿತಿದ್ದೆವು. ಅಷ್ಟೊತ್ತಿಗೆ ಜಂಬಗಿಯವರು ರಾತ್ರಿ ಒಂಬತ್ತು ಗಂಟೆ ಹೊತ್ತಿಗೆ ಯಾವುದೋ ಖಾನಾವಳಿಯಿಂದ ನಮಗೆಲ್ಲ ಸಾಕಾಗುವಷ್ಟು ಬಿಸಿ ಅನ್ನ ಮತ್ತು ಸಾರು ತೆಗೆದುಕೊಂಡು ಬಂದರು. ಅವೆರಡೂ ರುಚಿ ಶುಚಿಯಾಗಿದ್ದವು. ಆ ಚಳಿ, ಆ ಹಸಿವು, ಆ ಬಿಸಿ ಬಿಸಿ ಅನ್ನ ಮತ್ತು ಸಾರಿನ ರುಚಿ ಎಂದೂ ಮರೆಯಲು ಸಾಧ್ಯವಿಲ್ಲ. ನಾನು ದೊಡ್ಡವನಾದ ಮೇಲೆ ಜಂಬಗಿಯವರನ್ನು ಹುಡುಕಲು ಯತ್ನಿಸಿ ವಿಫಲನಾದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ