Advertisement

Month: April 2024

ರಂಗಭೂಮಿಯಲ್ಲಿ ಮರುಚಿಂತನೆ ಮತ್ತು ಗಾಂಧಿ ನಡಿಗೆ

ನಾಟಕ !  ಹಾಗೆಂದರೇನು? ಎಂದು ನಮಗೆ ನಾವು ಕೇಳಿಕೊಳ್ಳುವದರೊಂದಿಗೆ ಆರಂಭವಾಗುವ ಚಿಂತನೆ, ಅದರ ಸಂಘಟನೆ, ತಾಂತ್ರಿಕತೆ, ವ್ಯವಹಾರ, ಪ್ರೇಕ್ಷಕ ವರ್ಗದ ಅನಿಸಿಕೆ ಇತ್ಯಾದಿ ಹಲವು ಆಯಾಮಗಳಲ್ಲಿ ಇಂದು ಮುಂದುವರಿಯಬೇಕಿದೆ. ಸತ್ಯವನ್ನು ಸರಳಮಾರ್ಗದಲ್ಲಿ ಸಾಧಿಸಹೊರಟ ಗಾಂಧಿ ಚಿಂತನೆಯ ಮಾರ್ಗ ನಮ್ಮ ಮರುಚಿಂತನೆಗೆ ಅಗತ್ಯ ಹಾದಿಗಳನ್ನು ಕಾಣಿಸಬಲ್ಲವು ಎಂಬ ನಂಬಿಕೆ ನಮ್ಮದು.

Read More

ಸಾರಾ ಉಮ್ಮಾಗೆ ಈಗ ಎಂಭತ್ತೈದು

‘ಚಂದ್ರಗಿರಿಯ ತೀರದಲ್ಲಿ’ ಕೃತಿಯ ಮೂಲಕ ಸಾಹಿತ್ಯ ಪಯಣ ಆರಂಭಿಸಿದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ತಮ್ಮ ಎಂಭತ್ತೈದರ ಹರೆಯಲ್ಲಿದ್ದಾರೆ. ಕತೆ, ಕಾದಂಬರಿ, ಅನುವಾದ, ಪ್ರಬಂಧ ಮುಂತಾಗಿ ಅನೇಕ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ ಅವರು ತಮ್ಮ ನಿಲುವಿಗೆ ಎದುರಾದ ಹಲವು ಪ್ರತಿರೋಧಗಳ ನಡುವೆ ಜೀವನ್ಮುಖಿ ಚಿಂತನೆಗಳನ್ನು ಉಳಿಸಿಕೊಂಡವರು. ಈಗ ಸೊಸೆಯ ಆರೈಕೆಯಲ್ಲಿ ಸಮುದ್ರವನ್ನು ನೆನಪಿಸಿಕೊಳ್ಳುತ್ತಾ ಇರುವ ಸಾರಾ ಅವರ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ. 

Read More

ಬೆಳೆಯುವ ಪೈರು ಭಾದ್ರಪದದೊಳೆ ಸುಟ್ಟು ಹೋಯಿತು..

ಸಾಹಿತ್ಯವೆಂದರೆ ಬದುಕಿನ ಪ್ರತಿಬಿಂಬ ಎಂದಾದರೆ, ಸಾಹಿತ್ಯಕೃತಿಗಳಲ್ಲಿ ಬರುವ ಭಾವ, ರಸ ಲಯಗಳಲ್ಲಿಯೂ ಸಾಮ್ಯತೆಯೊಂದು ಇರಲೇಬೇಕಲ್ಲವೇ, ಈ ನಿಟ್ಟಿನಲ್ಲಿ ಯೋಚಿಸಿದಾಗ, ಗ್ರೀಕ್ ಪುರಾಣ ಕತೆ ‘ಟೆರಿಯಸ್’ ಮತ್ತು ಕನ್ನಡದ ಮದಲಿಂಗ ಕಥನ ಗೀತೆಯ ನಡುವೆ ಬಹಳ ಸಾಮ್ಯತೆಗಳಿವೆ. ಇವೆರಡೂ ಕತೆಗಳ ವಿಶ್ಲೇಷಣೆ ನಡೆಸುವ ಮೂಲಕ ಅವುಗಳ ನಡುವಿನ ಸಾಮ್ಯತೆಯನ್ನು ಸುಮಾವೀಣಾ ಅವರು ಗುರುತಿಸಿದ್ದಾರೆ.

Read More

ಮಂಜುನಾಥ್‌ ಚಾಂದ್‌ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಪತ್ರಕರ್ತ ಮಂಜುನಾಥ್ ಚಾಂದ್. ಮಂಜುನಾಥ್ ಕಥೆಗಾರರಾಗಿಯೂ ಕನ್ನಡ ಸಾಹಿತ್ಯ ವಲಯದಲ್ಲಿ ಗಮನ ಸೆಳೆದವರು. ಕದ ತೆರೆದ ಆಕಾಶ (ಕಥಾಸಂಕಲನ), ಅಮ್ಮ ಕೊಟ್ಟ ಜಾಜಿ ದಂಡೆ (ಪ್ರಬಂಧ ಸಂಕಲನ) ಹಾಗೂ ಕಾಡಸೆರಗಿನ ಸೂಡಿ (ಕಾದಂಬರಿ) ಅವರ ಪ್ರಕಟಿತ ಕೃತಿಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯ ಕೂಡಾ ಇರಲಿ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ