Advertisement

Month: May 2024

ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು

ಆಗ ಲಾಸ್ಟ್ ಶೋ  ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ. 

Read More

ಟೊಟೊ ಪುರಸ್ಕಾರ: ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ  ಆರಂಭಿಸಲಾದ ಟೊಟೊ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಅವಕಾಶವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ನಿಯಮಗಳನ್ನು ಹಾಗೂ ಷರತ್ತುಗಳನ್ನು ಇಲ್ಲಿ ನೀಡಲಾಗಿದೆ.  ಪ್ರವೇಶಗಳನ್ನು ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಕಳಿಸಬಹುದು.

Read More

ಚಿತ್ರಾನ್ನದಲ್ಲಿ ಕಡ್ಳೆ ಬೀಜಕ್ಕಾಗಿ ಹೋರಾಟ

ಹಿಂದಿನ ಬೆಂಚಿನಲ್ಲಿ ಸತೀಶ ಎಂಬ ತೀಟಲೆ ಹುಡುಗನಿದ್ದ. ಅವನು ಗುಂಪು ಕಟ್ಟಿಕೊಂಡು ‘ಮರಿ’ ಜಾಗದಲ್ಲಿ ‘ಮುದಿ’ ಸೇರಿಸಿ ರಾಗವಾಗಿ ಹೇಳುತ್ತಿದ್ದನು. ಈ ಅಪಬ್ರಂಶವನ್ನು ಕೇಳಿದ್ದೆ ತಡ, ಧ್ವನಿ ಬಂದ ಕಡೆಗೆ ನುಗ್ಗಿ ಕೈಗೆ ಸಿಕ್ಕಿದವರನ್ನು ರಪರಪನೆ ಚೆಚ್ಚಿ ಬಿಡುತ್ತಿದ್ದರು. ಎಷ್ಟು ಸರ್ತಿ ಹೇಳಿಕೊಟ್ಟರೂ ಕೆಲ ಹುಡುಗರು ಮತ್ತೆ ಮತ್ತೆ ಹಾಗೆ ಹೇಳುತ್ತಿದ್ದರು. ಇದರಿಂದ ಉರಿದು ಬೀಳುತ್ತಿದ್ದ ಮಾಸ್ಟರ್ ಸಿಟ್ಟಿನಿಂದಲೇ ಹಾರ್ಮೋನಿಯಂ ಎತ್ತಿಕೊಂಡು ಹೊರ ಹೋಗಿಬಿಡುತ್ತಿದ್ದರು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಐದನೆಯ ಕಂತು

Read More

ಉಸಿರು ನೀಡುವ ಗಣಪ ಮನೆಗೆ ಬರಲಿ

ಬಣ್ಣದ ಗಣೇಶ ಮೂರ್ತಿಯ ಆರಾಧನೆಯ ಪರಿಕಲ್ಪನೆಯಲ್ಲಿರುವ ತೊಡಕುಗಳು ಜನರ ಅರಿವಿಗೆ ಬರುತ್ತಿರುವಾಗ ಸಾವಯವ ಮೂರ್ತಿಗಳ ಕಡೆಗೆ ಜನರ ಒಲವು ಹೆಚ್ಚುತ್ತಿವೆ. ಹೀಗೆ ಆರಾಧಿಸುವ ಗಣೇಶ ಮೂರ್ತಿಗಳಲ್ಲಿ ಗಿಡಗಳ ಬೀಜಗಳನ್ನು ಇರಿಸಿದರೆ, ಹಬ್ಬ ಮುಗಿದು ನವರಾತ್ರಿಯನ್ನು ಎದುರು ನೋಡುವಾಗ, ಇತ್ತ ಅಂಗಳದಲ್ಲಿ ಗಿಡಗಳು ಹುಲುಸಾಗಿ ಬೆಳೆದಿರುತ್ತವೆ. -ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ನಿಮ್ಮ ಓದಿಗಾಗಿ.

Read More

ತೇಜಾವತಿ ಎಚ್‌ ಡಿ ಬರೆದ ಕವಿತೆ: ಸೆಣೆಸಾಡುವ ಬಣ್ಣ

“ಅಲ್ಲಿ ಸಮರಗಳು ಕಾಲು ಕೆರೆಯುತ್ತಿವೆ
ವರ್ಣರಂಜಿತ ಓಕುಳಿಯಾಡಲು
ಇಲ್ಲಿ ಬಣ್ಣಗಳು ಸೆಣೆಸಾಡುತ್ತಿವೆ
ಕೆಂಪು ಹಸಿರು ನೀಲಿ ಚೆಲ್ಲಿ
ಅರಿವಿಲ್ಲದೆ ಮೂಲದ್ರವ್ಯದ ವರ್ಣ
ರಜತಬಿಲ್ಲಿಗೆ ಗೊತ್ತು ಎಲ್ಲವುಗಳ ಮರ್ಮ”- ತೇಜಾವತಿ ಎಚ್‌ ಡಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ