ಗುರುಪ್ರಸಾದ್ ಕಾಗಿನೆಲೆ ಬರೆದ ಹೊಸ ಕಾದಂಬರಿಯ ತುಣುಕು
ಮಲೀಕ ಮಾತಾಡಲಿಲ್ಲ. ಆಕೆಯನ್ನು ಸೆಳೆದುಕೊಂಡ. ತುಟಿಗೆ ತುಟಿ ಸೇರಿಸಿದ. ಇವನ ತುಟಿಗಳ ಕೊಂಕೋ, ಆಕೆಯ ಕೃತಕ ತುಟಿ ಕಳೆದುಕೊಂಡಿದ್ದ ತೇವವೋ, ಮುತ್ತಿಗೊಂದು ಸತ್ವವಿರಲಿಲ್ಲ, ಸೆಳೆತವಿರಲಿಲ್ಲ. ಸ್ಥಿತಿಸ್ಥಾಪಕತ್ವ ಕಳೆದುಕೊಂಡ ರಬ್ಬರಿನ ಬೊಂಬೆಯ ತುಟಿಯನ್ನು ಚುಂಬಿಸಿದಂತಾಯಿತು, ಮಲೀಕನಿಗೆ. ಆಕೆ ಮುತ್ತಿನಿಂದಲೇ ಮಲೀಕನನ್ನು ದೂರಸರಿಸುವುದಕ್ಕೆ ಪ್ರಯತ್ನಿಸಿದಳು. -ದೇಹ ಸೌಂದರ್ಯದ ಜಿಜ್ಞಾಸೆಯನ್ನು ಕುರಿತು ಕಾದಂಬರಿಕಾರ ಗುರುಪ್ರಸಾದ್ ಕಾಗಿನೆಲೆ ಬರೆದ ಹೊಸ ಕಾದಂಬರಿ ‘ಕಾಯಾ’ ದಿಂದ ಆಯ್ದ ಒಂದು ಅಧ್ಯಾಯ ನಿಮ್ಮ ಓದಿಗಾಗಿ.
Read More