ಶರೀಫ್ ಕಾಡುಮಠ ಬರೆದ ಕವಿತೆ ಉರೂಸ್
ಮೊದಲ ನೋಟಕ್ಕೇ
ಫಿದಾ ಆಗಿ
ಖುದಾನ ಬಳಿ
ಮೊಹಬ್ಬತ್ತಿನ ಮೊರೆಯಿಟ್ಟಿದ್ದೇನೆ
ಭಾಷಣದ ವೇದಿಕೆ ಮುಂದೆ
ಬಿಳಿಗೂದಲ ಹಲ್ಲಿಲ್ಲದ
ಉಪ್ಪಾಪಗಳು ಸಾಲಾಗಿ
ಕಿವಿ ಹಿರಿದಾಗಿಸಿ
ಮುದುಡಿ ಕುಳಿತಿವೆ- ಶರೀಫ್ ಕಾಡುಮಠ ಬರೆದ ಕವಿತೆ
Posted by ಕೆಂಡಸಂಪಿಗೆ | Nov 26, 2021 | ದಿನದ ಕವಿತೆ |
ಮೊದಲ ನೋಟಕ್ಕೇ
ಫಿದಾ ಆಗಿ
ಖುದಾನ ಬಳಿ
ಮೊಹಬ್ಬತ್ತಿನ ಮೊರೆಯಿಟ್ಟಿದ್ದೇನೆ
ಭಾಷಣದ ವೇದಿಕೆ ಮುಂದೆ
ಬಿಳಿಗೂದಲ ಹಲ್ಲಿಲ್ಲದ
ಉಪ್ಪಾಪಗಳು ಸಾಲಾಗಿ
ಕಿವಿ ಹಿರಿದಾಗಿಸಿ
ಮುದುಡಿ ಕುಳಿತಿವೆ- ಶರೀಫ್ ಕಾಡುಮಠ ಬರೆದ ಕವಿತೆ
Posted by ಕೆಂಡಸಂಪಿಗೆ | Nov 26, 2021 | ದಿನದ ಪುಸ್ತಕ |
ಇಂತಹ ಕಥನಗಳನ್ನು ನಿರ್ವಹಿಸುವುದು ತುಂಬಾ ಕಷ್ಟಕರವಾದುದು. ಸ್ವಲ್ಪ ಎಡವಟ್ಟಾದರೆ ಕತೆ ಹೋಗಿ ಪ್ರಬಂಧವಾಗಿ ದಿಕ್ಕು ತಪ್ಪುವ ಸಾಧ್ಯತೆ ಇರುತ್ತದೆ. ಆದರೆ ಅನಿಲ್ ಗುನ್ನಾಪೂರ ತಮ್ಮ ಮೊದಲ ಕಥಾ ಸಂಕಲನದಲ್ಲಿ ಇಂಥದ್ದೊಂದು ಅಪಾಯಕಾರಿ ಪ್ರಯೋಗ ಮಾಡಿ ಅದರಲ್ಲಿ ಯಶಸ್ಸನ್ನು ಕಂಡಿದ್ದಾರೆ. ಇಲ್ಲಿನ ಕತೆಯ ನಿರೂಪಕನೊಂದಿಗೆ ತಮ್ಮನ್ನು ಸಮೀಕರಿಸಿಕೊಂಡಂತಿರುವ ಲೇಖಕನ ಕುತೂಹಲ, ಅವನ ಗೆಳೆಯ ಗೌತಮನ ದಿಟ್ಟತನ ಹಾಗೂ ಮುದುಕಿಯ ಅಂತಃಕರಣ ಈ ಮೂರರ ಹದವಾದ ಮಿಶ್ರಣ ಕತೆಗೆ ಒಂದು ತೆರನಾದ ನಯಗಾರಿಕೆಯನ್ನು ತಂದುಕೊಟ್ಟಿವೆ.
ಅನಿಲ್ ಗುನ್ನಾಪೂರ ಬರೆದ ‘ಕಲ್ಲು ಹೂವಿನ ನೆರಳು’ ಹೊಸ ಕಥಾಸಂಕಲನಕ್ಕೆ ಚನ್ನಪ್ಪ ಕಟ್ಟಿ ಬರೆದ ಮಾತುಗಳು
Posted by ಮಂಜುಳಾ ಸುಬ್ರಹ್ಮಣ್ಯ | Nov 25, 2021 | ಸಂಪಿಗೆ ಸ್ಪೆಷಲ್ |
ವೇದಿಕೆಯಲ್ಲಿ ಕಲಾವಿದರು ಅದ್ಭುತವಾಗಿ ಅಭಿನಯಿಸಿದ್ದಾರೆ, ನರ್ತಿಸಿದ್ದಾರೆ ಎಂದಾಗ ನಾವು ಅವರಲ್ಲಿ ಕಂಡಂತಹ ವಿಶೇಷತೆಗಳ ಬಗ್ಗೆ ಮಾತನಾಡುತ್ತಿರುತ್ತೇವೆ. ಕಲಾವಿದರ ಕಣ್ಣುಗಳು ಮಾತನಾಡುತ್ತಿದ್ದವು, ಕೈಗಳೂ ಮಾತನಾಡುತ್ತಿದ್ದವು, ಕಾಲುಗಳೂ ಮಾತನಾಡುತ್ತಿದ್ದವು ಹೀಗೆ… ಇಲ್ಲಿ ಒಂದೊಂದು ಅಂಗಗಳು ತಮ್ಮ ಅಭಿನಯದ ಮೂಲಕ ನಮ್ಮ ಮನಸ್ಸನ್ನು ತಟ್ಟುವ ಕೆಲಸವನ್ನು ಮಾಡಿರುತ್ತವೆ ಎಂದೇ ಅರ್ಥ. ಹಾಗೆಂದರೆ ಇಲ್ಲಿ ಮಾತು ಎಂಬ ಪದ ಕಲಾವಿದ…
Read MorePosted by ಕೆಂಡಸಂಪಿಗೆ | Nov 25, 2021 | ದಿನದ ಪುಸ್ತಕ |
ಕುಂಟಿನಿಯ ಕತೆಗಳು ಕೆಲವೊಮ್ಮೆ ಈ ಕಾಲದ್ದಾದರೂ ಅವಧೂತರ ಆಧ್ಯಾತ್ಮಿಕ ವಿಲಾಸವನ್ನು ಹೊತ್ತಿರುತ್ತವೆ; ಜಲಾಲುದ್ದೀನ್ ರೂಮಿಯ ಕತೆಗಳನ್ನು, ಸೂಫಿ- ಝೆನ್ ಕತೆಗಳನ್ನು ನೆನಪಿಸುತ್ತವೆ. ಕೆಲವೊಮ್ಮೆ ಅತ್ಯಂತ ಪುರಾತನವೆನಿಸುವ ಇಂಥ ಕತೆಗಳಲ್ಲೇ ಹೊಸದೆನಿಸುವ ಕಾಣ್ಕೆಗಳನ್ನು ಕಾಣಿಸಬಲ್ಲ ಆಧುನಿಕ ಮನಸ್ಸೊಂದು ಮಿಡಿಯುತ್ತಿರುತ್ತದೆ. ಒಂದು ಇನ್ನೊಂದಾಗುವ, ಒಬ್ಬ ಇನ್ನೊಬ್ಬನಾಗುವ, ಒಬ್ಬರಿನ್ನೊಬ್ಬರಲ್ಲಿ ಬೆರೆತುಬಿಡುವ, ಇದೇನು ಉಪನಿಷತ್ತಿನ ಕತೆಯೇ ಎಂಬಂತೆ ಭಾಸವಾಗುವ ಹಲವು ಕತೆಗಳನ್ನು ಕುಂಟಿನಿ ಬರೆದಿದ್ದಾರೆ.
ಗೋಪಾಲಕೃಷ್ಣ ಕುಂಟಿನಿ ಅವರ ಹೊಸ ಪುಸ್ತಕ ‘ಮಾರಾಪು’ ಸಂಕಲನಕ್ಕೆ ಹರೀಶ್ ಕೇರ ಬರೆದ ಮುನ್ನುಡಿ
Posted by ಕೋಡಿಬೆಟ್ಟು ರಾಜಲಕ್ಷ್ಮಿ | Nov 25, 2021 | ಸಂಪಿಗೆ ಸ್ಪೆಷಲ್ |
ಸುಂದರವಾದ ಇಂಟೀರಿಯರ್ ಡೆಕೊರೇಶನ್ ಮಾಡಿದ ಅಡುಗೆ ಮನೆಯಲ್ಲಿ ದಿನಸಿ ಸಾಮಾನು ತುಂಬಿಡಲು ಎಷ್ಟೊಂದು ಚಂದದ ಡಬ್ಬಿಗಳನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಆದರೆ ಅತ್ತ ಸುರಿಯುತ್ತಿರುವ ಭಾರೀ ಮಳೆಯೂ, ಕೃಷಿ ಕ್ಷೇತ್ರದ ಕುರಿತು ನಡೆಯುತ್ತಿರುವ ಚರ್ಚೆಗಳು, ಏರುಪೇರಾದ ಹವಾಮಾನದ ಆತಂಕಗಳು ಯಾಕೋ ಕಂಗಾಲು ಮಾಡುತ್ತಿವೆ. ಅಂತಹುದೇ ಆತಂಕಗಳನ್ನು ನಮ್ಮ ನಡುವಿನ ಕತೆ…
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…
Read More