Advertisement

Month: March 2024

ಜಿಂಕೆಗಳು ಕೊಲೆ ಮಾಡಬಲ್ಲವೇ?

ಪೊಲೀಸರು ಊರಿನ ಎಲ್ಲರ ಜೊತೆಗೆ ಯನೀನಾಳನ್ನೂ ವಿಚಾರಣೆಗೆ ಒಳಪಡಿಸುತ್ತಾರೆ. ಯಾರ ಬಳಿಯೂ ಇರದ ಉತ್ತರಗಳು ಯನೀನಾಳ ಬಳಿ ದೊರೆಯುತ್ತವೆ. ಬಿಗ್ ಫೂಟ್ ಅಲ್ಲದೇ ಇತರರ ಕೊಲೆಯಾದ ಸ್ಥಳಗಳಲ್ಲಿಯೂ ಬೇರೆ ಬೇರೆ ತರಹದ ಪ್ರಾಣಿಗಳ ಹೆಜ್ಜೆ ಗುರುತುಗಳು ಕಂಡಿರುತ್ತವೆ. ನಾವೇ ಸಾಧು ಪ್ರಾಣಿಗಳ ಒಳಗಿನ ಕ್ರೌರ್ಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವೇನೋ, ಈ ಎಲ್ಲ ಸಾಧು ಪ್ರಾಣಿಗಳೇ ಒಂದಾಗಿ ಊರಿನ ಜನರನ್ನು ಸಾಯಿಸುತ್ತಿರಬಹುದು ಎಂಬ ವಾದವನ್ನು ಒಪ್ಪಿಸುವ ಯನೀನಾ ಪೊಲೀಸರ ಕುಹಕಕ್ಕೆ ಗುರಿಯಾಗುತ್ತಾಳೆ.
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ…

Read More

ಸ್ವಪ್ನಾ ಶಶಿಧರ ಭಟ್ಟ ಬರೆದ ಈ ದಿನದ ಕವಿತೆ

“ಗಳಿಸಿಯೂ, ಉಳಿಸಿಯೂ
ಎಲ್ಲ ನಿರರ್ಥ,
ಪ್ರೀತಿ ಬರಡಾದ ಸಂಬಂಧಗಳು
ಕರ್ತವ್ಯ ಲೋಪವಾಗದಂತೆ
ಎಚ್ಚರ ವಹಿಸುತ್ತವೆ.”- ಸ್ವಪ್ನಾ ಶಶಿಧರ ಭಟ್ಟ ಬರೆದ ಈ ದಿನದ ಕವಿತೆ

Read More

ಕೊಹಿಮಾದ ಟೆನ್ನಿಸ್ ಕೋರ್ಟ್ ನಲ್ಲಿ ಕಳೆದು ಹೋದವರ ಸ್ಮರಿಸುತ್ತ…

ನಾಗಾಲ್ಯಾಂಡ್ ಚಿಕ್ಕ ರಾಜ್ಯವದರೂ ಬಹು ವೈವಿದ್ಯಮಯ ನಾಡು. ಸುಮಾರು ೧೬ ವಿವಿಧ ಜನಾಂಗಗಳಿರುವ ಈ ರಾಜ್ಯದಲ್ಲಿ ಅನೇಕ ಭಾಷೆಗಳನ್ನು ಮಾತನಾಡುತ್ತಾರೆ. ಇಂಗ್ಲಿಷನ್ನು ಆಡಳಿತ ಭಾಷೆಯನ್ನಾಗಿ ಬಳಸುತ್ತಾರೆ. ನಾಗಾ ಜನಾಂಗಗಳ ಜೀವನ-ಸಂಸ್ಕೃತಿ ವರ್ಣ ರಂಜಿತ. ಅವರ ಉಡುಗೆ ತೊಡುಗೆಯಿಂದ ಹಿಡಿದು ಊಟದವರೆಗೂ ವಿಶಿಷ್ಟತೆ ಎದ್ದು ಕಾಣುತ್ತದೆ. ಬಹಳ ಜನ ನಾಗಾ ಗಳು ನಾಯಿ ತಿನ್ನುತ್ತಾರೆ. ಅರುಣಾಚಲದಲ್ಲಿ ಇಲಿ ತಿನ್ನುತ್ತಾರೆ ಎಂದು ಈಶಾನ್ಯ ರಾಜ್ಯದ ಜನರನ್ನು ಅಣಕಿಸುತ್ತಾರೆ. ಅದು ಶತಮಾನಗಳಿಂದ ಬೆಳೆದು ಬಂದ ಆಹಾರ ಪದ್ಧತಿ.

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮೂಲೆಯ ಮುರುಕು ಬೆಂಚಿನಲ್ಲಿ ಕುಳಿತು ಆ ವ್ಯಕ್ತಿಯ ಮಾತು- ವರ್ತನೆಗಳೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವೆಂಕಪ್ಪ- ಅಣ್ಣುವಿಗೆ ಇನ್ನಷ್ಟು ಕುತೂಹಲವಾಯಿತು. “ಇವನೊಬ್ಬ ಬೋನಸ್ ಆಯುಷ್ಯದಲ್ಲಿ ಬದುಕುತ್ತಿದ್ದಾನೆ. ಇವನ ದುರ್ಬುದ್ಧಿಯನ್ನು ದೇವರು ಸರಿಯಾಗಿ ಲೆಕ್ಕಕ್ಕೆ ತೆಗೆದುಕೊಂಡಿದ್ದಿದ್ದರೆ ಇಷ್ಟರಲ್ಲಾಗಲೇ ಇವನು ಕೊಟ್ಟಾಯಿ ಆಗಿ, ಇವನ ಮೂರನೇ ವರ್ಷದ ಶ್ರಾದ್ಧ ಮುಗಿದಿರಬೇಕಿತ್ತು” ಎಂದು ರಾಮಣನ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದವರು ಈ ಇಬ್ಬರು, ವೆಂಕಪ್ಪ ಮತ್ತು ಅಣ್ಣು. ಇನ್ನಷ್ಟು ದಿನ ಬದುಕಿರಬೇಕಿತ್ತು…

Read More

ಲ್ಯಾಪ್ಲ್ಯಾಂಡ್ ಕನಸು ನನಸಾದ ಕ್ಷಣಗಳ ಸುತ್ತ

ಇಷ್ಟೆಲ್ಲಾ ಬಟ್ಟೆ ಧರಿಸಿಕೊಂಡು ತಯಾರಾಗುವುದೇ ದೊಡ್ಡ ಸಾಹಸ. ಕೈ ಕಾಲುಗಳ ಸಲೀಸಾದ ಚಲನೆ ಇಲ್ಲದಂತಾಗಿ, ಯಾರೋ ಬಿಗಿಯಾಗಿ ಕಟ್ಟಿ ಹಾಕಿರುವ ಭಾವನೆ. ತಯಾರಾಗಲು ಒಂದರ್ಧ ಘಂಟೆ ಹಿಡಿಯುತ್ತಿತ್ತು. ಮನೆಯ ಒಳಗೆ ಹೀಟರ್ ವ್ಯವಸ್ಥೆ ಇರುವುದರಿಂದ ಇಷ್ಟೆಲ್ಲಾ ತಯಾರಾಗುವ ಒಳಗೆ ಮೈ ಎಲ್ಲಾ ಬೆವರಲು ಶುರು. ಹೊರಗೆ ಕೊರೆಯುವ ಚಳಿ. ನನ್ನಷ್ಟೇ ಭಾರದ ಉಡುಗೆ ತೊಡುಗೆ ತೊಟ್ಟು ಹೊರ ನಡೆದರೆ ಎಲ್ಲೆಲ್ಲೂ ಹಿಮ. ಈ ರೀತಿ ತಯಾರಾಗಿದ್ದರೂ, ಆ ದಿನದ ಸುತ್ತಾಟ ಮುಗಿಯುವ ಹೊತ್ತಿಗೆ ಕಾಲು ಬೆರಳುಗಳು ಮರಗಟ್ಟಿ ಹೋಗಿರುತ್ತಿದ್ದವು.
‘ದೂರದ ಹಸಿರು’ ಸರಣಿಯಲ್ಲಿ ಲಾಪ್ಲ್ಯಾಂಡ್‌ ಪ್ರವಾಸದ ಮತ್ತಷ್ಟು ಅನುಭವಗಳನ್ನು…

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…

Read More

ಬರಹ ಭಂಡಾರ