Advertisement

Month: April 2024

ಅಚಲ ಅಸಾಮಾನ್ಯ ಸುಧಾರಕನ ಅಳಿಯದ ನೆನಪುಗಳು

ರಾಜಾರಾಮಮೋಹನ ರಾಯರು ಇಂಗ್ಲೆಂಡ್ ನ ಉತ್ತರಕ್ಕಿರುವ ಬಂದರು ನಗರ ಲಿವರ್ಪೂಲ್ ಅನ್ನು ತಲುಪಿದರು. ಲಿವರ್ಪೂಲ್ ಬಂದರನ್ನು ಜಗತ್ತಿನ ಮೊದಲ ಜಲ ಹಡಗುಕಟ್ಟೆ ಎನ್ನುತ್ತಾರೆ.  ಭಾರತದಿಂದ ಹೊರಟು ಲಿವರ್ಪೂಲ್ ಸೇರಿದ ಹಡಗಿನಲ್ಲಿ ರಾಮಮೋಹನರಾಯರ ಜೊತೆಯಲ್ಲಿ, ಸಾಕು ಮಗ ,ಇಬ್ಬರು ನೌಕರರು ಹಾಗು ಅವರ ನಿತ್ಯದ ಹಾಲಿನ ಬೇಡಿಕೆಯನ್ನು ಪೂರೈಸಲು ಕೆಲವು ದನಗಳು ಇದ್ದವಂತೆ. ಯೋಗೀಂದ್ರ ಮರವಂತೆ ಸರಣಿ

Read More

ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್.  ಬರಹ

Read More

ಕಳೆದುಕೊಂಡವರ ನೆನಪಿನಲ್ಲಿ…

ಕರ್ಫ್ಯೂ ಆಗಿ ಅಂಚೆ ವ್ಯವಸ್ಥೆ ನಿಂತು ಹೋಗಿತ್ತು. ಒಂದು ಮುಖ್ಯವಾದ ಪಾರ್ಸೆಲ್ ಅಂಚೆ ಇಲಾಖೆಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಊರಿನಲ್ಲಿರುವ ಹೈಸ್ಕೂಲ್ ಗೆಳೆಯ ಆನಂದನಿಗೆ ಫೋನ್ ಮಾಡಿದ್ದೆ. ಅವರ ತಂದೆ ಊರಿನಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದರು. ‘ಏನಾದರೂ ಮಾಡಕ್ಕಾಗತ್ತಾ?’ ಕೇಳಿದ್ದೆ. ಆಗ ಚೆನ್ನಾಗೆ ಮಾತಾಡಿದ್ದ. ಅದಾಗಿ ಒಂದು ವಾರಕ್ಕೆ ಫೇಸಬುಕ್ಕಲ್ಲಿ ‘ರೆಸ್ಟ್ ಇನ್ ಪೀಸ್ ಆನಂದ್’ ಎಂದು ಸುದ್ದಿ ಬಂತು. ಕೋವಿಡ್ ಇಷ್ಟು ಹತ್ತಿರಕ್ಕೆ ಬಂತು. ಒಂದು ಸಾಂಕ್ರಾಮಿಕ ರೋಗ ಎಲ್ಲವನ್ನೂ ಹೀಗೆ ಕಸವನ್ನು ಬುಟ್ಟಿಯಲ್ಲಿ ಹಾಕಿ ಹೊತ್ತೊಯ್ಯುವಂತೆ ಮನುಷ್ಯರನ್ನು ಹೊತ್ತೊಯ್ಯಲು ಆರಂಭಿಸಿತ್ತು. ವ್ಯಾಪಾರವೇ ಇಲ್ಲದೆ ಜನ ಊಟಕ್ಕಾಗಿ ಪರದಾಡಿದ್ದರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಎಂಬತ್ತರ ದಶಕದ ಮಹತ್ವದ ಸಾಹಿತ್ಯ

ವಿಮರ್ಶಾ ಕ್ಷೇತ್ರದಲ್ಲಿ ಕಣ್ಣನ್ನು ಸೆಳೆಯುವಂತಹ ಬೆಳವಣಿಗೆ ಆಗಿದೆ. ಸೃಜನಶೀಲ ಸಾಹಿತ್ಯದ ಹಿಂದೆಯೂ ಪ್ರಜ್ಞಾಪೂರ್ವಕ ಚಿಂತನೆ ಇರುವುದು ಅನಿವಾರ್ಯವಾದ ಯುಗದಲ್ಲಿ ಸಾಹಿತ್ಯ ವಿಮರ್ಶೆ ಬೆಳೆದಷ್ಟೂ ಸೃಜನಶೀಲ ಸಾಹಿತ್ಯಕ್ಕೂ ಲಾಭ. ಜಿ.ಎಚ್. ನಾಯಕ, ಕೆ.ವಿ. ನಾರಾಯಣ, ಎಚ್.ಎಸ್. ರಾಘವೇಂದ್ರರಾವ್, ರಾಜೇಂದ್ರ ಚನ್ನಿ, ಡಿ.ಆರ್. ನಾಗರಾಜ ಮೊದಲಾದವರ ವಿಮರ್ಶೆಯ ಬರಹಗಳನ್ನು ಓದಿದಾಗ ವಿಮರ್ಶೆಯ ಉಪಕರಣಗಳು ಎಷ್ಟು ಸೂಕ್ಷ್ಮವಾಗಿವೆ ಎನ್ನುವುದು ಸಂತೋಷವನ್ನುಂಟು ಮಾಡುತ್ತದೆ. ಹಲವೊಮ್ಮೆ ಈ ವಿಶ್ಲೇಷಣೆಯಲ್ಲಿ ಬೌದ್ಧಿಕ ಅಂಶ ತಾನೇತಾನಾಗಿ, ರಸಾ ಸ್ವಾದನೆ ಹಿಂದುಳಿಯುತ್ತಿದೆಯೋ ಎಂದು ಆತಂಕವಾಗುತ್ತದೆ.
ಪ್ರೊ. ಎಲ್.ಎಸ್. ಶೇಷಗಿರಿರಾವ್ ಬರೆದ “ಆಧುನಿಕ ಕನ್ನಡ ಸಾಹಿತ್ಯ” ಕೃತಿಯಿಂದ ಒಂದು ಲೇಖನ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ