Advertisement

Month: April 2024

ಪ್ರಗತಿಶೀಲತೆಯ ಪ್ರಬಲ ಧ್ವನಿ ‘ಕಾರಾವಾನ್’

ರೈಲಿನಲ್ಲಿ ಪ್ರಯಾಣಿಸುವಾಗ ನಿರೂಪಕನ ಕಣ್ಣಿಗೆ ಬಿದ್ದ ಸಂಸಾರವನ್ನು ‘ಕಣ್ಣೀರ ಸಂಸಾರ’ ಎಂದೇ ಬಿಂಬಿಸುವುದರ ಮೂಲಕ ಅಂದಿನ ವಾಸ್ತವ ಪ್ರಪಂಚವನ್ನು ಓದುಗರಿಗೆ ಅರ್ಥೈಸಲು ಈ ಕೃತಿಯು ಪ್ರಯತ್ನಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬ್ರಿಟಿಷರಿಂದ ಶಿಕ್ಷೆಗೊಳಗಾಗಿ, ಆರು ತಿಂಗಳುಗಳನ್ನು ಹಿಂಡಲಗ ಸೆರೆಮನೆಯಲ್ಲಿ ಕಳೆದು, ಅಲ್ಲಿಂದ ತಿರುಗಿ ರೈಲಿನಲ್ಲಿ ತಮ್ಮೂರಿಗೆ ಬರುವ ಹಾದಿಯನ್ನೇ ಲೇಖಕರು ‘ಕಾರವಾನ್’ ಕಥನದ ಅನಾವರಣಕ್ಕೆ ಬಳಸಿಕೊಂಡಿದ್ದಾರೆ. ಬಸವರಾಜ ಕಟ್ಟೀಮನಿಯವರ ಕಾರವಾನ್ ಕತೆಯ ಕುರಿತು ಸುಮಾವೀಣಾ ಅವರ ಬರಹ ಇಲ್ಲಿದೆ.

Read More

ಗೋಳಗುಮ್ಮಟದ ಸುತ್ತಮುತ್ತ

ಸೇಂಗಾ, ಹುರಿಗಡಲೆ, ಮಸಾಲೆವಠಾಣಿ, ಪೆಪ್ಪರಮೆಂಟ್ ಮುಂತಾದವುಗಳನ್ನು ಮಾರುವ ಮಧ್ಯ ವಯಸ್ಕನೊಬ್ಬ ಆ ಚಿಕ್ಕ ಕಟ್ಟಡದಲ್ಲಿ ಆರಂಭದಲ್ಲೇ, ನೆಲದ ಮೇಲೆ ಹಾಸಿಕೊಂಡು ಕುಳಿತಿರುತ್ತಿದ್ದ. ಆ ಬಡ ವ್ಯಕ್ತಿಯ ಬದುಕು ಆನಂದಮಯವಾಗಿತ್ತು. ಸದಾ ಹಸನ್ಮುಖಿಯಾಗಿ ಇರುತ್ತಿದ್ದ. ಖಾಕಿ ಹಾಫ್ ಪ್ಯಾಂಟ್ ಮತ್ತು ಹಾಪ್ ಷರ್ಟ್ ಆತನ ‘ಯೂನಿಫಾರ್ಮ್’ ಆಗಿತ್ತು. ಆ ಪುಟ್ಟ ವ್ಯಾಪಾರದಲ್ಲಿ ಎಷ್ಟು ಗಳಿಸುತ್ತಿದ್ದನೋ ದೇವರೇ ಬಲ್ಲ. ಆದರೆ ಆತನ ಜೀವನ್ಮುಖಿ ಬದುಕು ಆದರ್ಶಪ್ರಾಯವಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಕಬೂಲ್…..

ನಿಶ್ಚಿತಾರ್ಥಕ್ಕೆ ಮೂರು ದಿನ ಉಳಿದಿತ್ತು. ಅದೇನಾಯಿತೋ ಕಾಣೆ. ರಾತ್ರಿ ಮನೆಯಲ್ಲಿ ಮಲಗಿದ್ದವಳು ಬೆಳಗ್ಗಿಗೆ ಕಾಣಲಿಲ್ಲ. ಊರೆಲ್ಲಾ ಹುಡುಕಾಯಿತು. ಸುಳಿವಿಲ್ಲ, ಸುದ್ದಿಲ್ಲ. ಅಮ್ಮ ಪಕ್ಕದೂರಿನ ದರ್ಗಾಕ್ಕೆ ಹೋಗಿ ”ಎಲ್ಲಾರ ಇರ್ಲಿ ಸುಖವಾಗಿರ್ಲಿ” ಅಂತ ದುವಾ ಕೇಳಿಕೊಂಡು ಬಂದ್ಲು. ಬಾಬಾ ‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ’ ಅನ್ನೊ ಗಾದೆ ನಿಜವಾಗಬಾರದೆಂದು ಉಳಿದ ನಾವು ನಾಲ್ಕು ಹೆಣ್ಣು ಮಕ್ಕಳನ್ನ ಹೆಚ್ಚು ಹೆಚ್ಚು ಕಾಯಲು ಶುರುಮಾಡಿದ. ಸಹಜವಾಗಿಯೇ ಪಾತಿ ಮತ್ತು ಸಯೀದನ ಮದುವೆ ಮುರಿದುಬಿದ್ದಿತ್ತು. ದಾದಾಪೀರ್‌ ಜೈಮನ್‌ ಬರಹ

Read More

ಮೋಹನ್‌ ಮಂಜಪ್ಪ ಬರೆದ ಈ ಭಾನುವಾರದ ಕಥೆ

ದೂರದ ಕಲ್ಲುಬೆಂಚಿನ ಮೇಲೆ ಕೂತಿದ್ದ ಅಪ್ಪನ ದೃಷ್ಠಿ ಶೂನ್ಯದಿಂದ ಮರಳಿರಲಿಲ್ಲ. ಮನಸ್ಸು ಗತಕಾಲದ ಕಡೆಗೆ ಹೊರಳಿತು. ಇವಳನ್ನು ತುಂಬಾ ಇಷ್ಟಪಟ್ಟು ಕಟ್ಟಿಕೊಂಡಿದ್ದೆ. ಹೊಸದರಲ್ಲೆಲ್ಲಾ ಚೆನ್ನಾಗಿಯೇ ಇತ್ತು, ಅಥವಾ ಬಿಸಿಯಲ್ಲಿ ಗೊತ್ತಾಗಲಿಲ್ಲವೆನೋ!? ಮದುವೆ ಆದ ಆರು ತಿಂಗಳಿಗೆ, ಮಲ್ಲಿಗೆ ಹೂವು ತರಲು ಮರೆತೆನೆಂದು ಮಾಡಿದ ಹಗರಣ ಮನಸ್ಸನ್ನು ತುಂಬಾ ಕದಡಿಬಿಟ್ಟಿತು. ಅಂದಿನಿಂದ ಅವಳೇ ಬೇಡ ಸಾಕು ಎನ್ನುವ ವರೆಗೆ ಫ್ರಿಡ್ಜ್‌ನಲ್ಲಿ ತರಕಾರಿ ಇಲ್ಲದಿದ್ದರೂ, ಮಲ್ಲಿಗೆ ಹೂವು ಮಿಸ್‌ ಆಗದಂತೆ ನೋಡಿಕೊಂಡಿದ್ದು ನನಗಿನ್ನೂ ನೆನಪಿದೆ.
ಮೋಹನ್‌ ಮಂಜಪ್ಪ ಬರೆದ ಕಥೆ “ಹಣೆಬರಹ”

Read More

ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು

 ಪ್ರವಾಸಿಗರಿಗೆ, ಕ್ಯಾಂಪಿಗರಿಗೆ, ಹೇಳಿ ಮಾಡಿಸಿದ ಚಳಿಗಾಲವಿದು. ಕಳೆದ ಕೆಲ ವರ್ಷಗಳಿಗಿಂತಲೂ ಈ ಬಾರಿ ಅಧಿಕ ಚಳಿಯಿದೆ. ಹಾಗಾಗಿ ಸಮುದ್ರತಟದಲ್ಲಿರಲು ಜನ ಹಾತೊರೆಯುತ್ತಾರೆ. ಅದು ನಿಜವೆಂಬಂತೆ ರಾಣಿರಾಜ್ಯದ ದಕ್ಷಿಣ-ಪೂರ್ವ ಭಾಗದ ಪ್ರತಿಯೊಂದು ನಗರಪಾಲಿಕೆಯೂ ತಮ್ಮಲ್ಲಿನ ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲು ಬಲು ಆಕರ್ಷಕವಾದ ಜಾಹಿರಾತುಗಳನ್ನು ಹಾಕುತ್ತಿದ್ದಾರೆ. ಶಾಲೆಗಳಿಗೆ ಟರ್ಮ್ ೨ ನಂತರದ ಎರಡು ವಾರಗಳ ರಜೆ ಆರಂಭವಾಗಿದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ