Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಇಸ್ಕೂಲಿನ ಬಿಡುಗಡೆ ಮತ್ತು ಗಣರಾಜ್ಯ ದಿನದ ಸಂಭ್ರಮ

ಆರನೆಯ ವರ್ಗದ ಕನ್ನಡ ವಿಷಯದಲ್ಲಿ ಇರುವ `ಮಲ್ಲಜ್ಜನ ಮಳಿಗೆ’ ಎಂಬ ಪಾಠದ ರೀತಿಯಲ್ಲಿ ಇರುವ ಅಂಗಡಿಯಂತೆ ಒಂದೇ ಒಂದು ಅಂಗಡಿ ಅಣಶಿಯಲ್ಲಿಯೂ ಇದೆ. ಅಲ್ಲಿ ತೋರಣ ಕಟ್ಟಲು ಬೇಕಾದ ಸುತ್ಲಿ ಬಳ್ಳಿಯೂ ಸಿಗುತ್ತದೆ. ಬಣ್ಣದ ಕಾಗದಗಳು ಸಿಗುತ್ತವೆ. ಎಲ್ಲ ಒಂದೇ ಅಂಗಡಿಯಲ್ಲಿ ಲಭ್ಯ. ಆ ರಾಮಚಂದ್ರ ಕಾಜೂಗಾರನ ಅಂಗಡಿ ಅಣಶಿಯಲ್ಲಿಯೇ ಫೇಮಸ್. ಅಲ್ಲಿ ಸಿಗುವ ಬಣ್ಣದ ಕಾಗದಗಳು ಕೂಡ ಮೂರೇ ಬಣ್ಣದಲ್ಲಿ ಸಿಕ್ಕಿ ಸುತ್ತಲೂ ಪರಪರೆ ಹಚ್ಚಲು ಸಾಕಾಗದೆ ಚೂರು ಬೇಜಾರಾಗಿದೆ. ಮಕ್ಕಳ ಬೇಜಾರಿಗೆ ರಾಧಕ್ಕೋರು ಒಂದು ಪರಿಹಾರ ಸೂಚಿಸಿದ್ದಾರೆ.
ನಾಳೆ ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಅಂಕಣ ಬರಹಗಳ ಸಂಕಲನ ಬಿಡುಗಡೆಯಾಗುತ್ತಿದೆ. ಈ ಹೊತ್ತಿನಲ್ಲಿ ಇಸ್ಕೂಲಿನ ಕುರಿತ ಅವರ ಮಾತುಗಳು ನಿಮ್ಮ ಓದಿಗೆ

Read More

ಚಳಿಗಾಳಿ, ಸಿಹಿಗಾಳಿಯ ಕಂಪೆಲ್ಲ ಸೊಗಸಾಗಿ..

ಚಳಿಗಾಲಕ್ಕೆಂದೆ ಅರಳುವ ಕೆಲವು ಕಾಡ ಹೂಗಳಿಗೆ ಹೆಸರಿಲ್ಲದಿದ್ದರೂ ಬಣ್ಣಗಳಿವೆ. ಈ ಬಣ್ಣದ ಹೂಗಳಿಗೆ ಹೆಸರಿಡುವ ಕೆಲಸವೂ ಅಣಶಿ ಮಕ್ಕಳಿಂದ ಸದ್ದಿಲ್ಲದೆ ನಡೆಯುತ್ತದೆ. ಕೊರೆವ ಚಳಿಯಲ್ಲೂ ಮಕ್ಕಳೆಲ್ಲ ಹಳ್ಳದ ಅಂಚಿರುವ ಕಾಡ ಮರದ ತುದಿಯನ್ನೇರಿ ಹಳ್ಳದ ನೀರಿಗೆ ಧುಮುಕಿ ಈಜುವ ಸಾಹಸದ ಕ್ರೀಡೆಯಲ್ಲಿ ತಲ್ಲೀನರಾಗಿದ್ದಾರೆ. ಶಿಶಿರನ ಹೆಸರು ಕೇಳತ್ತಿದ್ದಂತೆಯೆ ನದಿಯೂ ಕೂಡ ನಲುಮೆಯ ಮಾತಾಡಿದೆ. ಪ್ರತಿ ಚಳಿಗಾಲಕ್ಕೆ ಕಾಂದಾಬಜ್ಜಿ ಬಿಸಿ ಬಿಸಿ ತಯಾರಿಸಿ ಮಾರುವ…

Read More

ಇರುಳಿನ ಹೊಸ ಬಣ್ಣ

ಆಗಾಗ ಊರಿನ ಬಂಧುಗಳು ತಂದು ಕೊಡುವ ಕುರ್ಲಿ ಸರಿಯಾಗಿ ಸ್ವಚ್ಛಗೊಳಿಸಿ ಹದವಾದ ಮಸಾಲೆಯೊಂದಿಗೆ ಬೇಯಿಸುವ ಕೆಲಸವು ರಾತ್ರಿಯಾದೊಡನೆ ಶುರುವಾಗುತ್ತದೆ. ಜೋರು ಮಳೆ ಬೀಳುವಾಗ, ಚಳಿ ತನ್ನ ಚಹರೆಯ ತೋರಿಸುತ್ತಿರುವಾಗ ಕಾಜುವಾಡಾದ ಯಾವುದೋ ಓಣಿಯ ಮನೆಯ ಬೆಂಕಿ ಒಲೆಯಲ್ಲಿ ತನ್ನ ತಾ ಹಸಿಯಾಗಿಯೆ ಕೆಂಡದಲ್ಲಿ ಸುಟ್ಟುಕೊಳ್ಳುವ ಏಡಿ ತನ್ನ ಅಮೋಘ ಪರಿಮಳವನ್ನು ಸುತ್ತಲಿನ ಲೋಕಕ್ಕೂ ಹರಡುತ್ತದೆ.

Read More

ಕಾಜುಗಾರ ಮನೆಯ ಇರುಳ ಬೆಳಕು

ಆ ದಿನ ನಾಗರಪಂಚಮಿ ಹಬ್ಬ. ಇದ್ದ ಸಾಮಾನಿನಲ್ಲಿಯೇ ಸೂಳಿರೊಟ್ಟಿ ಮಾಡಬೇಕೆಂಬುದು ಶಿಕ್ಷಕಿಯರ ಸಂಕಲ್ಪ. ಕರಾವಳಿ ಜನರ ಸಂಪ್ರದಾಯದಂತೆ ಹಬ್ಬಕ್ಕೆ ಮನೆ ಮಂದಿಯೆಲ್ಲ ಸೇರಿ ಮಾಡುವ ಸೂಳಿರೊಟ್ಟಿ ಆ ದಿನದ ವಿಶೇಷ ತಿಂಡಿ. ಇದನ್ನು ಮಾಡಲು ಇಡ್ಲಿ ಬೇಯಿಸುವ ಪಾತ್ರೆ ಬೇಕೆ ಬೇಕು. ಆದರೂ ಹೊಂದಿಸಿ ಗುಣಿಸಿ ಇದ್ದ ಅಡುಗೆ ಪಾತ್ರೆಯಲ್ಲಿಯೆ ಸೂಳಿರೊಟ್ಟಿ ಮಾಡಿ ತಿಂದಾಗ ಒಂದು ಸಾಹಸವೇ ಆಗಿತ್ತು. ಅಷ್ಟೊಂದು ನೀಟಾಗಿ ಬರದ ಸೂಳಿರೊಟ್ಟಿಗಳು ಸಿ.ಆರ್‌. ನಾಯ್ಕರ ಬಾಯಿಗೂ ಬಿತ್ತು.  ಅಣಶಿಯ ಚಳಿ ಮಳೆ ಗಾಳಿಯಲ್ಲಿ ಹಬೆಯಾಡುವ ಬೆಳಗ್ಗಿನ ಬಿಸಿ ಬಿಸಿ ಚಹಾದ ಜೊತೆಗೆ…

Read More

ಕಾಡಿನ ಮನೆಯ ಅಕ್ಕರೆಯ ಕಾವು

ಕಾಜುಗಾರ ಅವರು ಕಾಜುವಾಡಾದ ಮನೆಯನ್ನು ಶಿಕ್ಷಕರಿಗೆ ಬಿಟ್ಟುಕೊಟ್ಟಿದ್ದಾರೆ.  ಸದ್ಯಕ್ಕೆ ಅವರ ಮನೆ ಶಿಕ್ಷಕರಿಂದ ತುಂಬಿದೆ. ನಾಲ್ಕೈದು ಜನ ಶಿಕ್ಷಕ ,ಶಿಕ್ಷಕಿಯರು, ಒಂದೇ ಗ್ಯಾಸ್ ಒಲೆಯಲ್ಲಿ ತಯಾರಾಗುವ ಸಾಮೂಹಿಕ ಭೋಜನ. ಅದು ಬೇಕು ಇದು ಇರಲಿ ಎಂಬ ಯಾವುದೇ ತಗಾದೆ ಇಲ್ಲ.  ಇದ್ದ ಸಾಮಾನು ಗಮನಿಸಿ ಆಯಾ ದಿನದ ಮೆನು ರೆಡಿಯಾಗುತ್ತಿತ್ತು. ಏಕೆಂದರೆ ಒಮ್ಮೊಮ್ಮೆ ಅಡುಗೆಗೆ ಬೇಕಾದ ಪದಾರ್ಥಗಳು ಅಣಶಿಯಲ್ಲಿ ಸಿಗುತ್ತಿರಲಿಲ್ಲ. ಅದನ್ನು ದೂರದ ಕುಂಬಾರವಾಡಾ, ಜೋಯಿಡಾದಿಂದ ತರಿಸಬೇಕಿತ್ತು. ಇದ್ದ ಸಾಮಾನಿನಲ್ಲಿಯೆ ‘ಅಗ್ದಿ’ ಬೆಸ್ಟ ಎನಿಸಿದ ‘ಉಂಚಾ ಕ್ವಾಲಿಟಿ’ಯ ಸಾಮಾನು ತೆಗೆದು ಆರಿಸಿ ಅಂಗಡಿಯ ದಿನಕರ ಮಾಮಾ ಅವರು  ಮಾಸ್ತರರಿಗೆ..”

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ