Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಚಾಲಕ ಖಾನ್ ಅಲ್ಲಿಂದ ಒಂದು ಗಂಟೆ ಐದು ನಿಮಿಷಗಳ ಪ್ರಯಾಣದಲ್ಲಿ ತಲುಪಿಸಿದ್ದು ನೀರ್ದೇವನ ಪಾದಕ್ಕೆ. ಒಂದು ಬದಿ ಪ್ರಪಾತ ಮತ್ತೊಂದು ಬದಿ ಸಮುದ್ರ… ನಡುವೆ ಈ ನೀರ್ಮಕ್ಕಳ ಕಾಯ್ವ ದೇವನ ಪಳಿಯುಳಿಕೆ. ಸೂರ್ಯ ಮುಳುಗುತ್ತಿದ್ದ, ಬಂದಿದ್ದವರು ವಿಧವಿಧ ಭಂಗಿಯಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಜೋರು ಗಾಳಿ, ತಂಪು ಸಮಯ ಸಮುದ್ರ ನೋಡುತ್ತಾ ಕೂರಲು ಒಂಟಿ ನಿಂತ ಸಣ್ಣ ಬಂಡೆ. ಅದೆಷ್ಟು ಚಂದಿತ್ತು ಅಲ್ಲಿ ಕೂತು ಇಹಪರವನ್ನು ಮರೆತಿದ್ದು. ಸಾಯಂಕಾಲ 6 ಗಂಟೆಯ ನಂತರ ಅಲ್ಲಿ ಇರಲು ಬಿಡುವುದಿಲ್ಲ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಗ್ರೀಸ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಸಾಧುಸಂತರ ಸಂಗಮದಲ್ಲಿ…..

ಇಂತಹ ಮಹಾಕುಂಭಮೇಳವನ್ನು ಪ್ರತ್ಯಕ್ಷವಾಗಿ ನೋಡಿ ಸಾಕ್ಷಿಯಾಗಿ ಅನುಭವಿಸುವ ಅವಕಾಶ ಸಿಕ್ಕಿದ್ದು ನನ್ನ ಜೀವನದ ಅಪರೂಪದ ಘಳಿಗೆ. ಇಲ್ಲಿ ಸಾಧುಗಳ ಸಂಖ್ಯೆ ಹೆಚ್ಚಿದ್ದರೂ ಸಾಧ್ವಿಗಳಿಗೂ ಕೊರತೆಯಿರಲಿಲ್ಲ. ಅಲ್ಲಿದ್ದ ನೂರಾರು ಸಾಧ್ವಿಯರಲ್ಲಿ ಒಬ್ಬರಿಗಿಂತ ಒಬ್ಬರು ಅದ್ಭುತ ಪ್ರವಚನಕಾರರು. ಜಪಾನಿನ ಯೋಗಮಾತಾ ಕಿಯೋಕೋ ಅಕೀವಾ ಅನ್ನುವ ಸಾಧ್ವಿಯೊಬ್ಬರು ದೀಕ್ಷೆತೊಟ್ಟು ಹಿಂದುಧರ್ಮದ ಅನುಯಾಯಿಯಾಗಿದ್ದು ಅಲ್ಲಿ ವರ್ಲ್ಡ್ ಪೀಸ್ ಕ್ಯಾಂಪೇನ್ ಕ್ಯಾಂಪ್ ಹಾಕಿದ್ದರು. ಆಕೆ ವಿಮೆನ್ ಪವರ್ ಎನ್ನುವ ಪ್ರವಚನದಲ್ಲಿ ಸಿದ್ಧ ಹಸ್ತೆ.
ಅಂಜಲಿ ರಾಮಣ್ಣ ಬರಹ

Read More

ಸ್ಥಬ್ಧ ತುಟಿಗಳು ಪಿಸುಗುಡುವ ಹೃದಯವೆಂಬ ರೂಪಕ

ನಾನು ಅಸ್ಸಾಮ್‌ ನ ಸಾಹಿತಿ ವೈ.ಡಿ ತೊಂಗ್ಚಿ  ಅವರನ್ನು ಭೇಟಿ ಮಾಡಿದೆ. ಭಾಷೆಯ ಬಗ್ಗೆ ಅವರ ಮಾತುಗಳು ಬಹಳ ಮುಖ್ಯವಾದವು. ʻʻಇಲ್ಲಿನ ಶಾಲೆಗಳಲ್ಲಿ ಈಗ ಅಸ್ಸಾಮಿಸ್ ಭಾಷೆಯನ್ನು ಕಲಿಸುತ್ತಿಲ್ಲ. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಮಾತ್ರ ಕಲಿಸಲಾಗುತ್ತಿದೆ. ಅರುಣಾಚಲದ ಎಲ್ಲಾ ಭಾಷೆಗಳು ನಶಿಸಿಹೋಗಿ ಹಿಂದಿ ಈ ರಾಜ್ಯದ ಭಾಷೆಯಾಗಿ ಬಿಡುವ ದಿನ ದೂರವಿಲ್ಲ” ಎನ್ನುತ್ತಲೇ ತೊಂಗ್ಚಿಯವರು, ಲಿಪಿ ಇರುವ ಭಾಷೆಗಳನ್ನೇ ಉಳಿಸಿಕೊಳ್ಳುವುದು ಕಷ್ಟವಾಗುತ್ತಿರುವ ಈ ಕಾಲದಲ್ಲಿ ಲಿಪಿ ಇಲ್ಲದ ಭಾಷೆಯನ್ನು ಉಳಿಸಿಕೊಳ್ಳುವುದು ಅಸಾಧ್ಯವೇ ಸರಿ. ಅಂಜಲಿ ರಾಮಣ್ಣ ಬರಹ

Read More

ಅಂದುಕೊಳ್ಳದ ಪವಾಡ ಹೇಗೆ ಸಂಭವಿಸಿತು?

ಬೆಳಗ್ಗೆ ನಾಲ್ಕಕ್ಕೇ ಆಶ್ರಮಕ್ಕೆ ಹೋದರೆ ಬಾಬಾರ ದರ್ಶನವಾಗುತ್ತೆ ಅಂತ ಅಲ್ಲಿ ಯಾರೋ ಹೇಳಿದರು. ಸರಿರಾತ್ರಿಯವರೆಗೂ ಬೀದಿ ಸುತ್ತಿ ಮೀನಖಂಡ ಮುನಿಸಿಕೊಂಡರೂ ನಿದ್ದೆಯ ಸುಳಿವಿಲ್ಲ. ನಾಲ್ಕಕ್ಕೆ ಎದ್ದೆ ಆದರೆ ಬಿಳಿಬಣ್ಣದ ಬಟ್ಟೆ ನನ್ನ ಬಳಿ ಇರಲಿಲ್ಲ. ಅಲ್ಲಿ ಬಾಬಾ ಭಕ್ತರೆಲ್ಲಾ ಬೆಳ್ಳಂಬಿಳಿ ಬಿಟ್ಟರೆ ಕೇಸರಿ ಬಟ್ಟೆನೇ ತೊಡುವುದು. ನಾನು ಹೇಗೂ ಭಕ್ತೆ ಅಲ್ಲವಲ್ಲ, ಹಾಗಾಗಿ ಹಸಿರಾದರೂ ಏನಂತೆ ಎಂದುಕೊಂಡು ಇದ್ದ ಒಂದು ಹಸಿರು ಬಣ್ಣದ ಚೂಡಿದಾರ್ ಹಾಕಿಕೊಂಡು ಹೊರಟೆ. “ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ದಿವಾನಿಯಾದ ಮಸ್ತಾನಿಯ ಕತೆ

ಹೌದಲ್ಲ. ಇವಳು ಎಲ್ಲಿಂದ ಬಂದಳು ಎಲ್ಲಿಗೆ ಹೋದಳು? ಸಂಜಯ್ ಲೀಲಾ ಬನ್ಸಾಲಿಯ ವೈಭವಪರದೆಯಲ್ಲಿ ದೀಪಿಕಾಳ ಮೂಲಕ ಅನಾವರಣಗೊಂಡವಳು.. ಕೊಟ್ಟಿಗೆಯಂತಾಗಿದ್ದ ಮನದ ನಡುವಿನಲ್ಲಿ ನೊರೆ ಹಾಲ್ಗರೆದುಕೊಟ್ಟ, ಬಾಜಿರಾಯನ ‘ಮಸ್ತಾನಿ’ಯನ್ನು ಹುಡುಕಿ ನಾನು ಹೊರಟೆ. ಹಾಡುತ್ತಿದ್ದೆ ನಾನೂ “ಕಹತೆ ಹೆ ಯೇ ದಿವಾನಿ ಮಸ್ತಾನೀ ಹೋಗಯೀ…” ಅವಳು ಇರಲೇ ಇಲ್ಲ, ಅವಳು ಮುಸ್ಲಿಂ ಆಗಿರಲಿಲ್ಲ, ಅವಳು ಬಾಜಿರಾಯನಿಗಿಂತ ಮೊದಲೇ ಸತ್ತಳು, ಆತ್ಮಹತ್ಯೆ ಮಾಡಿಕೊಂಡಳು ವಗೈರೆ ವಗೈರೆ ಎಂದು ಮಾಧ್ಯಮಗಳು ಟಿಆರ್‌ಪಿ ಸಂಕಷ್ಟದಲ್ಲಿ ಹೊರಳಿ ಧುಮ್ಮಿಕ್ಕುತ್ತಿರುವಾಗ ನಾನು ಹಾಡುತ್ತಿದ್ದೆ “ಜ಼್ಅಖಮ್ ಐಸ ತೂನೇ ಲಗಾಯಾ… ಮರ್ಹಮ್ ಐಸ ತೂನೇ ಲಗಾಯಾ… ಮೇ ದಿವಾನಿ ಹೋಗಯೀ… ಹಾಂ ದಿವಾನೀ ಹೋಗಯೀ” ಅಂಜಲಿ ರಾಮಣ್ಣ ಬರೆಯುವ `ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ