Advertisement
ಅನುಸೂಯ ಯತೀಶ್

ಅನುಸೂಯ ಯತೀಶ್ ಅವರು ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ವೃತ್ತಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದಾರೆ. ಕಥೆ ಕವನ ಗಜಲ್ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಬರೆಯುವ ಇವರ ಮೆಚ್ಚಿನ ಆದ್ಯತೆ ವಿಮರ್ಶೆಯಾಗಿದೆ. ಈಗಾಗಲೆ ಅನುಸೂಯ ಯತೀಶ್ ಅವರು 'ಕೃತಿ ಮಂಥನ', 'ನುಡಿಸಖ್ಯ', 'ಕಾವ್ಯ ದರ್ಪಣ' ಎಂಬ ಮೂರು ವಿಮರ್ಶಾ ಸಂಕಲನಗಳನ್ನು ಪ್ರಕಟಿಸಿದ್ದಾರೆ.

ಐಕ್ಯಗಾನ ಮೊಳಗಿಸಿದ, ಜನಪರ ಕವಿ ಕಯ್ಯಾರ ಕಿಞ್ಞಣ್ಣ ರೈ

1933 ರ ಹೊತ್ತಿಗಾಗಲೇ ಹದಿನೆಂಟರ ಯುವಕ ಕಯ್ಯಾರರು ಒಳ್ಳೆಯ ಕವಿಯಾಗಿ ಗುರುತಿಸಿಕೊಂಡದ್ದಕ್ಕೆ ಒಂದು ಉದಾಹರಣೆ: ಪುತ್ತೂರಿನಲ್ಲಿ ಕಾರಂತರು ನಡೆಸುತ್ತಿದ್ದ ನಾಡಹಬ್ಬದಲ್ಲಿ ಬೇಂದ್ರೆಯವರ ಅಧ್ಯಕ್ಷತೆಯ ಕವಿಗೋಷ್ಠಿಯಲ್ಲಿ ಅವರು ‘ಊರ್ಮಿಳಾ’ ಎಂಬ ಕವನ ಓದಿದರು. ಅದನ್ನು ಕೇಳಿದ ಬೇಂದ್ರೆಯವರು ಕಯ್ಯಾರ ಅವರಿಂದ ಇನ್ನೊಂದುಕವಿತೆಯನ್ನು ಓದಿಸಿದರು.
‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಕಯ್ಯಾರ ಕಿಞ್ಞಣ್ಣ ರೈ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಆಂಗ್ಲ ಸಾಹಿತ್ಯ ವಿಹಾರಿ ಹಟ್ಟಿಯಂಗಡಿ ನಾರಾಯಣ ರಾವ್

ಹ. ನಾ. ರಾ. ಅವರ ಅನುವಾದದ ಮಹತ್ವವನ್ನು ಆ ಕಾಲದಲ್ಲಿ ಅಷ್ಟಾಗಿ ಗುರುತಿಸಲಿಲ್ಲವೆಂದೇ ಅನಿಸುತ್ತದೆ. ಅದಕ್ಕೆ ಕಾರಣ ಮುಖ್ಯವಾಗಿ ಬೆಂಗಳೂರು- ಮೈಸೂರು ಕೇಂದ್ರದ ಸಾಹಿತಿಗಳಿಗೆ ಅವರ ಅನುವಾದಗಳು ಅಲಭ್ಯವಾಗಿದ್ದವು ಎಂದು ಊಹಿಸಬಹುದು. ದಕ್ಷಿಣ ಕನ್ನಡದವರು ಅವರನ್ನು ಮುಖ್ಯ ಕವಿ-ಚಿಂತಕ ಎಂದು ಪರಿಗಣಿಸಿದ್ದರು. ಪಂಜೆಯವರು ‘ವಾಗ್ಭೂಷಣ’ದ ಸಂಚಿಕೆಯಲ್ಲಿ ಬಂದ ‘ಶೇಕ್ಸ್‌ಪಿಯರಿನ ಸುಭಾಷಿತ ಕಲಾಪಗಳ’ ಚೌಪದಿಗಳನ್ನು ಪಠ್ಯ ಪುಸ್ತಕಗಳಲ್ಲಿ ಬಳಸಿಕೊಂಡಿದ್ದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಹಟ್ಟಿಯಂಗಡಿ ನಾರಾಯಣ ರಾವ್ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಅಚ್ಚಗನ್ನಡದ ಹರಿಕಾರ ಮುಳಿಯ ತಿಮ್ಮಪ್ಪಯ್ಯ

ತಮ್ಮ ವಿಮರ್ಶೆಯ ಕೃತಿಗಳಲ್ಲಿ ಮುಳಿಯ ತಿಮ್ಮಪ್ಪಯ್ಯನವರು ತೋರಿಸಿಕೊಟ್ಟ ದೇಸೀ ವಿಮರ್ಶೆಯ ಮಾರ್ಗದ ಮಹತ್ವವನ್ನು ಕೂಡ ಸರಿಯಾಗಿ ಗುರುತಿಸಲಾಗಿಲ್ಲ. ಉದಾಹರಣೆಗೆ ಅವರು ಪಂಪನ ‘ಆದಿಪುರಾಣ’ವು ರಸಕಾವ್ಯ, ‘ವಿಕ್ರಮಾರ್ಜುನ ವಿಜಯ’ವು ಶೀಲ ಪ್ರತಿಪಾದನೆಯ ಕಾವ್ಯ ಎಂದು ಗುರುತಿಸಿರುವುದು ಮಹತ್ವದ ಸಂಗತಿಯಾಗಿದೆ. ಭಾರತೀಯ ಕಾವ್ಯಮೀಮಾಂಸೆಯನ್ನು ಅರಗಿಸಿಕೊಂಡವರ ಒಳನೋಟ ಇದು. ಅಲ್ಲದೆ ಅರಿಸ್ಟಾಟಲ್ ಕೂಡ ‘ಇಥೋಸ್’ ಅನ್ನುವುದನ್ನು…”

Read More

ಭಕ್ತಿ-ವಿರಕ್ತಿ–ಅನುರಕ್ತಿಗಳ ಸಂಗಮ ಹರಿದಾಸ ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ

ಹರಿದಾಸರು ಹೀಗೆ ಅಲೆದದ್ದು ಸುಮಾರು ಎಂಟು ವರ್ಷಗಳ ಕಾಲ. ಆ ದುರ್ದಿನಗಳು ಕಳೆದ ಮೇಲೆ ಹರಿದಾಸರು ಸುಮಾರು 1905 ರಲ್ಲಿ ಊರಿಗೆ ಮರಳಿದರು. ಬಂದವರು ಮತ್ತೆ ಕಾರ್ಕಳ ವೆಂಕಟರಮಣನ ಸನ್ನಿಧಿಯಲ್ಲಿ ಎಂಟು ತಿಂಗಳುಗಳ ಕಾಲ ಇದ್ದರು. ಹಿಂದೆ ಅವರು ತಾನೇ ಶನಿವಾರ ಶನಿವಾರ ತಿರುಪತಿಗೆಂದು ಕಾಣಿಕೆ ಹಾಕುತ್ತ ಕಟ್ಟಿಟ್ಟ ಮುಡಿಪನ್ನೇ ಬಡತನದ ಕಾರಣ ತೆಗೆದು ಖರ್ಚು ಮಾಡುವ ಪ್ರಸಂಗವೂ…”

Read More

ಗಜಪಥದಲ್ಲಿ ಸಾಗಿದ ರಾಷ್ಟ್ರಕವಿ ಗೋವಿಂದ ಪೈ

ಗೋವಿಂದ ಪೈಗಳಿಗೆ 1949 ರಲ್ಲಿ ಮದರಾಸು ಸರಕಾರ ‘ರಾಷ್ಟ್ರಕವಿ’ ಬಿರುದು ನೀಡಿ ಗೌರವಿಸಿತು. ಅವರು 1950 ರಲ್ಲಿ ಮುಂಬಯಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು. ಅವರು ಸನ್ಮಾನ, ಗೌರವಗಳನ್ನು ಸ್ವೀಕರಿಸಲು ಒಪ್ಪುತ್ತಿರಲಿಲ್ಲ. ಮೈಸೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಬೇಕೆಂದು ಬಯಸಿದಾಗ ಪೈಗಳು ವಿನಯದಿಂದ ನಿರಾಕರಿಸಿದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ರಾಷ್ಟ್ರಕವಿ ಗೋವಿಂದ ಪೈಗಳ ಕುರಿತು ಬರೆದಿದ್ದಾರೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ