Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಜಿ.ಟಿ. ನಾರಾಯಣರಾವ್ ಹೇಳುವ ಎನ್‌ಸಿಸಿ ದಿನಗಳ ಕಥೆಗಳು

ಇಲ್ಲಿ ಬರುವ ವೈಜ್ಞಾನಿಕ ವಿವರಣೆಗಳು ಮಾತ್ರ ಎಲ್ಲರಿಗಲ್ಲ. ಅದು ವಿಜ್ಞಾನದಲ್ಲಿ ಆಸಕ್ತಿಯಿದ್ದು ಅರ್ಥಮಾಡಿಕೊಳ್ಳಲು ಶ್ರಮ ಹಾಕಲು ಸಿದ್ಧರಿರುವವರಿಗೆ ಮಾತ್ರ. ಕನ್ನಡದಲ್ಲಿ ಇರುವ ಕಾರಣ ಕೆಲ ಶಬ್ದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಅದು ಈ‌ ಪುಸ್ತಕ ಅಂತಲ್ಲ. ಎಲ್ಲಾ ವೈಜ್ಞಾನಿಕ ಗ್ರಂಥಗಳನ್ನು ಕನ್ನಡೀಕರಿಸಬೇಕಾದರೆ ಆಗುವ ಸಾಮಾನ್ಯ ಸಮಸ್ಯೆ. ಪದಗಳನ್ನು ಕನ್ನಡದಕ್ಕೆ ತರುವುದು ಬಹಳ ಕಷ್ಟ. ನನ್ನ ಪ್ರಕಾರ ಅವುಗಳನ್ನು ಆಂಗ್ಲದಿಂದ ನೇರವಾಗಿ ಬಳಕೆ ಮಾಡುವುದೇ ಉತ್ತಮ‌. ಕನ್ನಡ ಸಂಸ್ಕೃತ, ಪರ್ಶಿಯನ್ ಮೊದಲಾದ ನುಡಿಗಳಿಂದ ಪದಗಳನ್ನು ಸ್ವೀಕರಿಸಿರುವ ಹಾಗೇ ಆಂಗ್ಲದಿಂದಲೂ ಸ್ವೀಕರಿಸುತ್ತದೆ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಕಾಡುವ ಕತೆಗಳ ರೂವಾರಿ….

ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.

Read More

ನವಿರು ಹಾಸ್ಯದ ನುಡಿತೋರಣ

ಈ ಪುಸ್ತಕದ ನಿಜವಾದ ಸತ್ವ ಇರುವುದು ಅಮೆರಿಕಾದ ಜಾಗಗಳ ವರ್ಣನೆಯಲ್ಲಲ್ಲ. ಅವರು ಅಮೆರಿಕಾ ಮತ್ತು ಕೆನಡಾ ಪ್ರವಾಸವನ್ನು ಹೇಗೆ ಅರ್ಥಪೂರ್ಣವಾಗಿ ಬಳಸಿಕೊಂಡರು ಅನ್ನುವುದರಲ್ಲಿ. ಅವರ ಪ್ರತಿ ನಡೆ ನುಡಿಯಲ್ಲೂ ಅವರ ವ್ಯಕ್ತಿತ್ವದ ದರ್ಶನವಾಗುತ್ತದೆ. ಹಾಗಂತ ಎಲ್ಲವೂ ಗಂಭೀರವಾಗಿಯೇ ಸಾಗುತ್ತದೆ ಅಂತ ಅಲ್ಲ, ತಪ್ಪಿ ಅವರು ಕೆಎಫ್‌ಸಿ ಚಿಕನ್ ತಿನ್ನಲು ಹೋದ ಪ್ರಸಂಗ, ಆಮೇಲೆ ಡೋನಟ್ ಪರಿಚಯವಿಲ್ಲದ ಅವರು ಅನುಮಾನವೇ ಬೇಡವೆಂದು ತಿನ್ನದಿರುವುದು .. ಹೀಗೆ ಅಲ್ಲಿನ ಅನೇಕ ಘಟನೆಗಳನ್ನು ನವಿರು ಹಾಸ್ಯದಿಂದ ವರ್ಣಿಸುತ್ತಾರೆ.

Read More

ನಿಂತಲ್ಲಿ ಕುಂತಲ್ಲಿ ಕಾಡುವ ಕಥೆ ಬರೆದ ದಾದಾ

ಇಲ್ಲಿರುವ ಎಲ್ಲಾ ಕತೆಗಳಿಗಿಂತ ಕೊನೆಯ ಕತೆ ‘ಎಲ್ಲೋ ಯಲ್ಲೋ’
ಕಥೆಯೇ ಯಾಕೆ ಜಾಸ್ತಿ ಇಷ್ಟವಾಯಿತು ಅಂದುಕೊಂಡರೂ ಯಾವುದ್ಯಾವುದೋ ಕಾರಣಗಳು ತೋಚುತ್ತವೆ. ಆದರೆ ಮುಖ್ಯವಾಗಿ ಇಷ್ಟವಾಗಿದ್ದು ಒಂದು ಗಂಡು ಮತ್ತು ಹೆಣ್ಣಿನ ನಡುವೆ ಇರಬಹುದಾದ ಸಹಜವಾದ ಗೆಳೆತನದ ರೀತಿ ಮತ್ತು ಒಬ್ಬಳು ಶಿಕ್ಷಕಿಯ ಗಂಡನಾಗಿ ಅವರ ಕಷ್ಟ‌ನಷ್ಟಗಳ ಬಗ್ಗೆ ಅರಿವಿರುವುದು. ಹೇಗೆ ಹುಡುಗ ಹುಡುಗ ಆತ್ಮೀಯ ಗೆಳೆಯರಾಗಿರಲು ಸಾಧ್ಯವೋ ಅದೇ ರೀತಿ ಹುಡುಗ ಹುಡುಗಿ ಕೂಡಾ ಅದೇ ಆತ್ಮೀಯತೆಯಲ್ಲಿರಲು ಸಾಧ್ಯ. ಸಮಾಜ ಈ ವಿಷಯದಲ್ಲಿ ಮುಂಚಿನಷ್ಟು ಮಡಿವಂತಿಕೆ ಇಟ್ಟುಕೊಂಡಿಲ್ಲವಾದರೂ ಪೂರ್ತಿ ಬದಲಾಗಿಯೂ ಇಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಸಮಾನತೆಯ ಆಶಯವನ್ನು ಒರೆಗೆ ಹಚ್ಚುವ ಕತೆ

ಸಿದ್ಧಾಂತಗಳು ಎಷ್ಟೇ ಉದಾತ್ತವಾಗಿದ್ದರೂ ಅದನ್ನು ಜಾರಿಗೊಳಿಸುವ ವಿಧಾನ ಸರಿಯಿಲ್ಲದಿದ್ದರೆ ಎಲ್ಲಾ ಅನರ್ಥವೇ ಆಗುತ್ತದೆ ಎಂಬುದು ಇದರ ಮುಖ್ಯ ಸಾರ. ಒಂದು ತೋಟದಲ್ಲಿರುವ ಪ್ರಾಣಿಗಳೆಲ್ಲಾ ದುಷ್ಟ ಒಡೆಯನ ವಿರುದ್ಧ ಬಂಡೆದ್ದು ತೋಟವನ್ನು ವಶಪಡಿಸಿಕೊಂಡು ಸಮಾನತೆಯ ಸಮಾಜ ಕಟ್ಟಲು ಹೊರಡುವ ಕತೆಯಿದು. ಆದರೆ ಕಾಲಕಳೆಯುತ್ತಾ ಹೋದಂತೆ ನಾಯಕನ ಆದರ್ಶಗಳೆಲ್ಲಾ ಮಣ್ಣುಪಾಲಾಗಿ ಅವನೂ ಒಬ್ಬ ಭ್ರಷ್ಟನೇ ಆಗುತ್ತಾನೆ. ಒಂದು ಕೆಟ್ಟ ಸಮಾಜದಲ್ಲಿನ ಎಲ್ಲಾ ಗುಣಗಳು ಅಲ್ಲೂ ಬರುತ್ತದೆ. ಪ್ರಬಲರಾದ ಹುದ್ದೆಯಲ್ಲಿರುವವರಿಂದ ದುರ್ಬಲರ ಶೋಷಣೆ ನಿರಂತರವಾಗಿ ನಡೆಯುತ್ತದೆ. ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ