Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಕಿನ್ನರಿ…

ಯಾವ ಪ್ರಚಾರವನ್ನೂ ಒಲ್ಲದ ತಮ್ಮ ಪಾಡಿಗೆ ತಾವಿರುವ ಈ ತಪಸ್ವಿನಿ ತಮ್ಮ ಪೂರ್ವಾಶ್ರಮದಲ್ಲಿ ಒಬ್ಬ ಶ್ರೇಷ್ಠ ಸಾಹಿತಿಯೂ ಆಗಿದ್ದರು. ನಾನು ಇವರ ಅದ್ಭುತ ವ್ಯಕ್ತಿತ್ವದ ಬಗ್ಗೆ ಬರೆದ ಒಂದು ಲೇಖನ ಇವರಿಗೆ ಮುಜುಗರ ತಂದಿತ್ತು. ಅಸಮಾಧಾನಕ್ಕೆ ಕಾರಣವಾಗಿತ್ತು. ಇಂತಹವರನ್ನು ಭೇಟಿ ಮಾಡಿಸಬೇಕೆಂದೂ ಅವರ ಸಮ್ಮುಖದಲ್ಲಿ ಒಂದು ಪತ್ರಿಕಾ ಸಭೆಯನ್ನು ಕರೆಯಬೇಕೆಂದೂ ನನ್ನ ಪರಿಚಯದ ಸಾಹಿತಿಯೊಬ್ಬರು ನನಗೆ ಬಹಳ ದಿನಗಳಿಂದ ದುಂಬಾಲು ಬಿದ್ದಿದ್ದರು. ಯಾರಿಗೂ ತಿಳಿಯದಂತೆ ಅಜ್ಞಾತವಾಗಿ ಬದುಕುತ್ತಿರುವ ಇವರನ್ನು ನಾನು ಒಮ್ಮೆ ಭೇಟಿಯಾಗಿ ಬಂದಿದ್ದುದೇ ಇದಕ್ಕೆ ಕಾರಣವಾಗಿತ್ತು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

Read More

ಮತನಿರಪೇಕ್ಷ ಪ್ರಾಜ್ಞ ಸಾಧು ಕರೀಮುದ್ದೀನ್

ತೊಂಬತ್ತು ವರುಷದ ಪ್ರೊ. ಕರಿಮುದ್ದೀನ್ ಅವರು ಅಪಾರ ಜ್ಞಾನ ಭಂಡಾರದ ಮೇರುವಿನಂತೆ ನೆಟ್ಟಗೆ‌ ಕುತೂಹಲದಿಂದ ಕುಳಿತಿದ್ದರು.ಅವರ ಕಣ್ಣುಗಳಲ್ಲಿ ಸಾತ್ವಿಕತೆಯ ಪ್ರಖರತೆಯಿದೆ. ಮಕ್ಕಳಿಗೆ ಮಾನವೀಯತೆಯ ಶಿಕ್ಷಣ ಕೊಡಬೇಕು ಎಂದು ಆಗ್ರಹಿಸುತ್ತಾರೆ ಅವರು. ಮೂಲಭೂತವಾದವನ್ನು ಖಂಡತುಂಡವಾಗಿ ನಿರಾಕರಿಸುವವರು. ಶ್ರೀರಂಗಪಟ್ಟಣದ ಪ್ರಸಿದ್ಧ “ಗಂಜಾಂ”  ಬಡಾವಣೆಯಲ್ಲಿ ತಲೆತಲಾಂತರದ ಒಂದು ಹಳ್ಳಿ ಮನೆಯ ಪುಟ್ಟ ಕೋಣೆಯಲ್ಲಿ, ಅಣ್ಣನ ಮಕ್ಕಳ ನಿಗಾದಲ್ಲಿ ವಾಸ ಮಾಡುತ್ತಿರುವ ಅವರನ್ನು ಕಂಡುಬಂದು ಬರೆದಿದ್ದಾರೆ ಗಿರಿಜಾ ಶಾಸ್ತ್ರಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ