Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ಹ್ಯಾಂಗರ್ಸ್‌ ಆನ್‌…..

ಬರಹಗಾರನಾಗಿ ನಾನು Hanger on ಸ್ಥಾನದ ಪಾತ್ರವನ್ನೇ ತುಂಬಾ ಇಷ್ಟಪಡುತ್ತೇನೆ. ಯಾರೂ ನಿಮ್ಮನ್ನು ಗಮನಿಸುವುದಿಲ್ಲ, ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಹೆಚ್ಚು ಜನ ನಿಮ್ಮನ್ನು ನಿಷ್ಪ್ರಯೋಜಕ ವ್ಯಕ್ತಿ ಎಂದು ಪರಿಗಣಿಸಿ ನಿಮ್ಮ ತಂಟೆಗೇ ಬರುವುದಿಲ್ಲ. ನಿಮ್ಮ ಸ್ವಾತಂತ್ರ್ಯ, ನಿಮಗೆ ಸಿಗುವ ಸಮಯ ಎಲ್ಲವೂ ಹೆಚ್ಚಾಗುತ್ತದೆ. ಎಲ್ಲರನ್ನೂ ನೀವು ನಿರಾಳವಾಗಿ ಗಮನಿಸಬಹುದು. ನಿಮಗೇ ಗೊತ್ತಿಲ್ಲದಂತೆ ನಿಮ್ಮ ವ್ಯಕ್ತಿತ್ವಕ್ಕೆ ಒಂದಕ್ಕಿಂತ ಹೆಚ್ಚು ಆಯಾಮಗಳು ಸಿಗುತ್ತವೆ. ನನ್ನ ಕುಟುಂಬದ ಸದಸ್ಯರು ಇದನ್ನೆಲ್ಲ ಒಪ್ಪುವುದಿಲ್ಲ. ಇದನ್ನು ಒಂದು ತಂತ್ರವೆಂದು ಭಾವಿಸುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೆರಡನೆಯ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

Read More

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ