Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಕ್ಕಿಗಳ ಸಂಗೀತದ ಕಛೇರಿಯಂತಹ
ಒಡ್ಡೋಲಗ
ಮಾತೂ ನಾದದ ಬೆನ್ನು ಹತ್ತಿದ
ಈ ಕ್ಷಣಕೆ
ನನ್ನೊಳಗೊಂದು ದಿವ್ಯ ಮೌನ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಬೀಸುಕಲ್ಲು ಸಾಗಿಸಿದ ಕಥೆ

ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು. 
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

‘ಮೋಡದೊಡನೆ ಮಾತುಕತೆ’ಯ ಒಂದೆರಡು ಪುಟಗಳು

‘ಒಂದು ನಾಡಿನ ಸಂಕಥನಗಳನ್ನು ತಳಮಟ್ಟ ವಿಶ್ಲೇಷಿಸುತ್ತ ಆ ನಾಡಿನ ಮನಸ್ಸನ್ನು ತಿಳಿಯಬೇಕೆಂದೂ, ಹಾಗೂ ಆ ಮೂಲಕ ಆ ಭೂಭಾಗವನ್ನು ಆಕ್ರಮಿಸಿ ಆಳುವ ಸಾಮರ್ಥ್ಯ ಪಡೆಯಬೇಕೆಂದೂ ಬಯಸುವ ಜಾಗತಿಕ ಮಹತ್ತ್ವಾಕಾಂಕ್ಷೆಯ ಕಾಲದಲ್ಲಿ ನಾವಿದ್ದೇವೆ. ತತ್ಫಲವಾಗಿ ಈಗ ಬಾಳುವ ದಾರಿಗಳನ್ನೆಲ್ಲ ಆಳುವ ಮಾರ್ಗಗಳನ್ನಾಗಿ ಮಾರ್ಪಡಿಸುವ ಅಪಾಯಕಾರಿ ಸನ್ನಿವೇಶ ನಿರ್ಮಾಣಗೊಳ್ಳುತ್ತಿದೆ; ಈ ಸನ್ನಿವೇಶದೊಳಗೆ ಸಾಹಿತ್ಯ-ಕಲೆಗಳೂ ಅಂಥ ಆಳುವ ಸಾಧನಗಳಾಗಿ ರೂಪಾಂತರಗೊಳ್ಳುತ್ತಿರುವವೋ ಎಂಬ ಸಂಶಯ ಮೂಡುತ್ತದೆ’ ಎಂಬ ಮಾತುಗಳನ್ನು ಲೇಖಕ ಕೆ.ವಿ. ಅಕ್ಷರ ಅವರು ‘ಮೋಡದೊಡನೆ ಮಾತುಕತೆ’ ಎಂಬ ತಮ್ಮ ಹೊಸ ಕೃತಿಯಲ್ಲಿ ಉಲ್ಲೇಖಿಸಿದ್ದಾರೆ. ಆ ಕೃತಿಯ ಒಂದು ಅಧ್ಯಾಯ ಇಲ್ಲಿದೆ. 

Read More

ದಿವಿಜ ಕೆ ಎನ್.  ತೆಗೆದ ಈ ದಿನದ ಫೋಟೋ

ಕವಲೇದುರ್ಗದ ಈ ಫೋಟೋ ತೆಗೆದವರು ದಿವಿಜ ಕೆ ಎನ್. ಮೂಲತಃ ತೀರ್ಥಹಳ್ಳಿಯವರು, ಈಗ ಬೆಂಗಳೂರು ವಾಸಿ. ವೃತ್ತಿಯಲ್ಲಿ ಸಾಫ್ಟವೇರ್ ಎಂಜಿನಿಯರ್. ಫೋಟೋಗ್ರಫಿ ಹಾಗೂ ಓದುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಾಲದ ಗಾಳಕ್ಕೆ ಸಿಕ್ಕ ಮೀನು

ಅವತ್ತು ಅಮ್ಮ, ಅಣ್ಣ ಮನೆಗೆ ಬಂದಾಗ, ತೇಜಸ್ವಿಯವರು ಮನೆಯ ಚಮಚೆ ಬಳಸಿ, ಸ್ಪಿನರ್ ತಯಾರಿಸಿದ ಬಗ್ಗೆ  ಸವಿವರವಾಗಿ ಹೇಳಿದೆ. ಅಮ್ಮ ಬೆಚ್ಚಿ ಬಿದ್ದರು. `ಅಲ್ಲೇ, ನೀನು ಕುವೆಂಪು ಎಂದು ಕೆತ್ತಿಸಿದ್ದ ಚಮಚ ಕೊಟ್ಟು ಬಿಟ್ಟೆಯಾ`?. ಈ ಚಮಚಗಳನ್ನು ಚಿತ್ರಕೂಟದ ಮನೆಗೆ ಒಕ್ಕಲು ಬರುವಾಗ ಕುವೆಂಪು ಹೆಸರು ಹಾಕಿಸಿ ಅಮ್ಮ ತಂದಿಟ್ಟವು. ಆಗ ನನ್ನ ಪಜೀತಿ ಏನೆಂದು ಹೇಳಲಿ. ಇವರು ಕೇಳಿದ ಮೇಲೆ ಕೊಡದೇ ಇರುವುದು ಹೇಗೆ ಸಾಧ್ಯ. ತಮಾಷೆಯಾಗಿದೆ ಅಲ್ವೆ. ಅಮ್ಮನಿಗೆ ಕುವೆಂಪು ಮುಖ್ಯ, ನನಗೆ ನನ್ನವರು ಮುಖ್ಯ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ