Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಯಕ್ಷಗಾನ ಸಂಘಟಕರ ಸಂದರ್ಶನ…

ನಿಜವಾಗಿ ಹೇಳೊದಂದ್ರೆ ನಮಗೆ ಯಕ್ಷಗಾನದ ಮೇಲಿರೊ ಪ್ರೀತಿನೆ ಯಕ್ಷಗಾನ ಮಾಡಿಸೋಕೆ ಇರೊ ಕಾರಣ. ಇಲ್ಲಿ ಪ್ರತಿ ದಿನ ಒಂದಿಪ್ಪತ್ತು ಜನ ಇಲ್ಲಿ ಸೇರ್ತೇವಲ್ಲ, 365 ದಿನನೂ ಯಕ್ಷಗಾನದ ಏನಾದ್ರು ಒಂದು ಸುದ್ದಿ ಮಾತಾಡೇ ಆಡ್ತಿವಿ. ಮಳೆಗಾಲದಲ್ಲಿ ತಾಳಮದ್ದಲೆ ನೋಡ್ತಿವಿ. ಇಲ್ಲಿ ಈ ತರ ಅರ್ಥ ಹೇಳಿದರು. ಅಲ್ಲೊಂದು ಆಟ ನೋಡಿಕೊಂಡು ಬಂದೆ, ಹಿಂಗಾಯಿತು, ಹಂಗಾಯಿತು ಅಂತ ಏನೊ ಒಂದು ಮಾತು ಇರತ್ತೆ.
“ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಕೃತಿ ಆರ್ ಪುರಪ್ಪೇಮನೆ ಬರಹ

Read More

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ

ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ

Read More

ಮಡಿವಂತಿಕೆಯ ರಂಗಸ್ಥಳದಲ್ಲಿ ಹೊಸ ಪ್ರಸಂಗಗಳ ಗ್ರಹಿಕೆ

ಹೊಸ ಪ್ರಸಂಗಗಳ ಬಗ್ಗೆ ಸಾಮಾನ್ಯವಾಗಿ ಒಂದು ಸೀಮಿತ ಗ್ರಹಿಕೆಯಿರುತ್ತದೆ. ಯಕ್ಷಗಾನವೆಂದರೆ ಅದು ಹಳೆಯ ಕಲೆ, ಅದಕ್ಕೆ ನೂರಾರು ವರ್ಷಗಳ ಪರಂಪರೆಯಿದೆ. ಅದು ಪುರಾಣ ಕತೆಗಳ ಮೌಲ್ಯ ಪ್ರಸಾರಕ್ಕಾಗಿದೆ, ನಮ್ಮ ಜೀವನಕ್ಕೆ ಬೇಕಾಗುವ ಮೌಲ್ಯವೇ ಪುರಾಣಗಳಲ್ಲಿವೆ ಮತ್ತು ಹಳೆಯದೆಲ್ಲವನ್ನು ರಕ್ಷಿಸಬೇಕು ಎನ್ನುವ ನಂಬಿಕೆಯಿಂದಾಗಿ. ಜೊತೆಗೆ ಅದೊಂದು ಗಂಭೀರವಾದ ಕಲೆ ಎನ್ನುವ ದೃಷ್ಟಿಕೋನವೂ ಸೇರಿಕೊಂಡಿದೆ. ಗಂಭೀರವೆಂದರೆ ರಂಜನೆಯಿಲ್ಲದ್ದು ಅನ್ನುವುದು ಒಮ್ಮೊಮ್ಮೆ ಅವರ ಮಾತುಗಳಲ್ಲಿ ಧ್ವನಿಸುತ್ತದೆ. ಇವೆಲ್ಲ ನಂಬಿಕೆಗಳು ವಸಾಹತಿನ ಕಾಲದಲ್ಲಿ ಹುಟ್ಟಿದ ರಾಷ್ಟ್ರೀಯತೆಯ ಕಲ್ಪನೆಯೊಟ್ಟಿಗೆ ಬಂದದ್ದೆಂದು ಕಾಣುತ್ತದೆ. ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ. 

Read More

ಸರಕು ಮತ್ತು ಸಂಪ್ರದಾಯ

ಎಲ್ಲವೂ ಸರಕಾಗುತ್ತಿರುವ ಸಮಾಜದಲ್ಲಿ ನಾವಿರುವಾಗ ಸಂಪ್ರದಾಯದ ಮೇಲೆ ಅದರ ಪರಿಣಾಮಗಳೇನು? ಸರ್ವವ್ಯಾಪಿಯಾದ ವ್ಯವಸ್ಥೆ ಸಂಪ್ರದಾಯವನ್ನು ಮುಟ್ಟದೇ ಇರುತ್ತದೆಯೇ? ಸಂಪ್ರದಾಯದ ಪ್ರತಿಕ್ರಿಯೆಯ ಸಮಸ್ಯೆಗಳೇನು ಎನ್ನುವುದನ್ನು ನೋಡೋಣ. ಸಂಪ್ರದಾಯವೆನ್ನುವುದು ಸರಳವಾಗಿ ಹೇಳುವುದಾದರೆ ನಮ್ಮ ಹಿರಿಯರಿಂದ ಬಂದಿದ್ದು. ಪೀಳಿಗೆಯಿಂದ ಪೀಳಿಗೆಗೆ ಬರುವಂತದ್ದು. ಹಿರಿಯರು, ಪೀಳಿಗೆ ಅಂದಾಗ ಅದು ಸಮುದಾಯವನ್ನು, ಕುಟುಂಬವನ್ನು ಒಳಗೊಂಡಿದೆ ಎನ್ನುವುದನ್ನು ಸೂಚಿಸುತ್ತದೆ. ಕೃತಿ ಪುರಪ್ಪೇಮನೆ ಬರೆಯುವ “ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ