Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಉಳಿದದ್ದೀಗ ನೆನಪುಗಳಷ್ಟೇ….

ಅಡಿಗರ ರಾಮನವಮಿಯ ದಿವಸ ಪದ್ಯದ ಬಗ್ಗೆ ಅವರೊಡನೆ ಚರ್ಚಿಸುತ್ತಿದ್ದ ದಿನಗಳು ನನ್ನ ಬದುಕಿನ ಸುವರ್ಣ ಯುಗ. ಅವ್ರಿಗೆ ತಂತ್ರದ ಬಗ್ಗೆ ವಿಶೇಷ ಆಸಕ್ತಿ ಎಂದಾಗ ಒಪ್ಪಿಕೊಂಡಿದ್ದರು. ಅಡಿಗರ ಕುರಿತ ದೂರುಗಳನ್ನೂ, ಮೆಚ್ಚುಗೆಯನ್ನೂ ಮುಕ್ತವಾಗಿ ಹೇಳುತ್ತಿದ್ದರು. ನೀವೇಕೆ ನಿಮ್ಮ ಬರೆಯುವ ರೀತಿಯನ್ನು ಪದೇ ಪದೇ ಬದಲಾಯಿಸಿದಿರಿ.
ತಮ್ಮ ಗ್ರಹಿಕೆಗೆ ಸಿಕ್ಕ ಕೆ.ವಿ. ತಿರುಮಲೇಶರ ಕುರಿತು ಬರೆದಿದ್ದಾರೆ ಮಾಲಿನಿ ಗುರುಪ್ರಸನ್ನ

Read More

ಸಂಕಟ, ಸಂಘರ್ಷದ ಕಥೆ ಹೆಣೆಯುವ ಗೈರಸಮಜೂತಿ

 ಒಂದು ಕಾಲದ ನಮ್ಮ ಹಿಂದಿ ಕವಿಗಳಾದ ಬಚ್ಚನ್, ನಿರಾಲಾ, ಸುಮಿತ್ರಾನಂದನ್ ಪಂತರಂತಹ ಲೇಖಕರು ರೂಪಿಸಿಕೊಂಡಿದ್ದ ಆಜ್ಞೆಯತಾವಾದದ ಇನ್ನೊಂದು ಉದಾರೀಕೃತ ತಾತ್ವಿಕ ಸುಕುಮಾರ ರೂಪವೇ ಈ ಕಾದಂಬರಿಯ ಅಡಿಪಾಯದಲ್ಲೂ ಇದೆ ಎನ್ನಿಸುತ್ತದೆ. ಹಾಗೆಂದ ಮಾತ್ರಕ್ಕೆ ಈ ಬಗೆಯಲ್ಲಿ ರಸರಮ್ಯಲೋಕವೊಂದನ್ನು ಕಟ್ಟಿಕೊಡುವ ಕಥನಗಳು ಇಲ್ಲಿವೆ.  ರಾಘವೇಂದ್ರ ಪಾಟೀಲರ “ಗೈರ ಸಮಜೂತಿ” ಕಾದಂಬರಿಯ ಕುರಿತು ಮಾಲಿನಿ ಗುರುಪ್ರಸನ್ನ ಬರಹ

Read More

‘ಶಿಲಾಲತೆ’ಯಲ್ಲಿ ಪದುಮಳ ಬಳೆಗಳ ದನಿಯಿಲ್ಲವಲ್ಲ

ಕೆ.ಎಸ್. ನರಸಿಂಹ ಸ್ವಾಮಿ ಅವರು ಪ್ರೇಮಕವಿಯಾಗಿ ಸುಪ್ರಸಿದ್ಧರಾದರೂ ಅವರು ಬದುಕಿನ ಜಿಜ್ಞಾಸೆಗಳ ಬಗ್ಗೆ, ಅಧ್ಯಾತ್ಮದ ಕುರಿತು, ಇತರ ಸಂದಿಗ್ಧಗಳ ಕುರಿತು ಎಷ್ಟೊಂದು ಕವಿತೆಗಳನ್ನು ಬರೆದಿದ್ದಾರೆ. ಅವರ ಕಾವ್ಯ ಸರಳವಾಗಿತ್ತು, ರಮ್ಯವಾಗಿತ್ತು, ಕನಸುವಂತಿತ್ತು… ಎಲ್ಲಿಯವರೆಗೆ? ಶಿಲಾಲತೆಯವರೆಗೆ. ಅಲ್ಲಿಂದ ನರಸಿಂಹಸ್ವಾಮಿ ಕಠಿಣರಾಗುತ್ತಾ ಹೋದರು, ಪ್ರತಿಮೆಗಳಲ್ಲಿ ಮಾತನಾಡಲಾರಂಭಿಸಿದರು. ಅವರ ಜನ್ಮದಿನವಾದ ಇಂದು, ಅವರ ಬಹು ಪ್ರಸ್ತಾಪಿತ ಕವನಗಳನ್ನು ಬಿಟ್ಟು ‘ಶಿಲಾಲತೆ’ಯ ನಲವತ್ತರ ಚೆಲುವೆಯ ಬಗ್ಗೆ ವಿಶ್ಲೇಷಣಾ ಬರಹ ಬರೆದಿದ್ದಾರೆ ಲೇಖಕಿ ಮಾಲಿನಿ ಗುರುಪ್ರಸನ್ನ.

Read More

‘ಕಾವ್ಯದ ಕನ್ನಡಿಯಲ್ಲಿ ಕಂಡ ಜೀವನಪಥ’

ಅನುಭವಕ್ಕೆ ಸ್ವತಃ ಯಾವುದೇ ರೀತಿಯ ಆಕೃತಿ ಇಲ್ಲ. ಆದರೆ ನಾವು ಮಾತ್ರ ಇದು ಸುಖದ ಅನುಭವ, ಇದು ದುಃಖದ ಅನುಭವ, ಇದು ವಿಹ್ವಲತೆ, ತಲ್ಲಣ, ಇದು ವಿಷಾದದ ಅನುಭವ ಎಂದೆಲ್ಲ ಹೆಸರಿಡುತ್ತೇವೆ ಎಂದು  ಹೇಳುವ ಆನಂದ ಝುಂಜರವಾಡ ಮೂಲತಃ ಕಾವ್ಯಶಕ್ತಿಯನ್ನು ಒಲಿಸಿಕೊಂಡ ಕವಿ. ಇತ್ತೀಚೆಗೆ ಅವರ ಹೊಸ ಕವನ ಸಂಕಲನ ಶಬ್ದ ಸುಪಾರಿ ಬಿಡುಗಡೆಯಾಯಿತು.

Read More

ಲೌಕಿಕದ ಅನಿವಾರ್ಯತೆಯನ್ನು ಒಪ್ಪಿಕೊಳ್ಳುವ ಕಾವ್ಯಪ್ರೀತಿ

ಅದಮ್ಯವಾದ ಕಾಮ, ಅನಿವಾರ್ಯವಾದ ಸಾವು ಮತ್ತು ಬಾಳಿನ ನಿರರ್ಥಕತೆ ಇವು ನನ್ನ ಕಾವ್ಯಕ್ಕೆ ಪ್ರೇರಕ ಶಕ್ತಿಗಳು ಎಂದು ಹೇಳುವ ಬಿ.ಆರ್. ಲಕ್ಷ್ಮಣರಾಯರ ಕವನಗಳಲ್ಲಿ ಗೇಯಗುಣವು ಸಹಜವಾಗಿ ಒಲಿದು ಬಂದಿದೆ. ಅವರ ಸಾಲುಗಳಲ್ಲಿ ವೈನೋದಿಕ ಶಕ್ತಿಯೂ ಸೇರಿಕೊಂಡಿದೆ.  ಅವರು ಆ ಕಾಲಕ್ಕೆ ಅತ್ಯಂತ ಆಧುನಿಕ ವಿಷಯಗಳನ್ನೇ ಬರೆದರೂ…”

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ