Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

‘ಒಳ್ಳೆಯ ದೆವ್ವ’ ಕಾದಂಬರಿ: ಮಕ್ಕಳ ಮನಸ್ಸಿನ ವೈದ್ಯ

ಮಂಜುನಾಥ ಶಾಲೆಗೆ ಹೋಗುವಾಗ ದಿನಾಲೂ ಅವನ ತಾಯಿಯನ್ನು ತಬ್ಬಿ ಮುದ್ದಾಡುತ್ತಿದ್ದ. ಅಷ್ಟೊಂದು ಪ್ರೀತಿ ವಾತ್ಸಲ್ಯ ಇಬ್ಬರಲ್ಲೂ ತುಂಬಿತ್ತು. ‘ತಾಯಿ ವಾತ್ಸಲ್ಯ ಮತ್ತು ಮಗನ ಮಂದಹಾಸ ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ’ ಎನ್ನುವ ಶಿರ್ಷಿಕೆಯೊಂದಿಗೆ ಅದು ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಅಷ್ಟೊಂದು ಅಮೋಘವಾದ ಪ್ರೀತಿ ಇವರದಾಗಿತ್ತು. ಅದನ್ನು ನೋಡಿ ಮಗ ಫೋಟೋದಂತೆ ಕಟ್ಟು ಹಾಕಿಸಲು ತಾಯಿಗೆ ಹೇಳಿದ. ಬಾಲ್ಯದ ಆ ಅಮೂಲ್ಯ ನೆನಪನ್ನು ಗೆಳೆಯರಾದ ಪಲ್ಲವಿ, ಪವನ, ಆಕಾಶ ನೆನಪಿಸಿಕೊಳ್ಳುತ್ತಾರೆ.
ಡಾ. ಬಸು ಬೇವಿನಗಿಡದ ಬರೆದ “ಒಳ್ಳೆಯ ದೆವ್ವ” ಮಕ್ಕಳ ಕಾದಂಬರಿಯ ಕುರಿತು ನಾಗರಾಜ ಎಂ ಹುಡೇದ ಬರಹ

Read More

‘ಮಕ್ಕಳೇನು ಸಣ್ಣವರಲ್ಲ’: ಹಾಸ್ಯದ ಒರತೆಯ ಕೃತಿ

ಸಂಕಲನದ ಮೊದಲ ಕಥೆ ‘ಎಗ್ ರೈಸ್ ಮಂತ್ರಿ’ ಹಾಸ್ಯದ ಜೊತೆಗೆ ಎಚ್ಚರವನ್ನೂ ಮೂಡಿಸುತ್ತದೆ. ಶಾಲಾ ಸಂಸತ್ತಿಗೆ ನಡೆಯುವ ಚುನಾವಣೆಯಲ್ಲಿ ವಿದ್ಯಾರ್ಥಿಯೊಬ್ಬ ಮಂತ್ರಿಯಾಗುವ ಆತುರದಲ್ಲಿ ಪೊಳ್ಳು ಭರವಸೆ ನೀಡಿ, ಗೆದ್ದಮೇಲೆ ಎಗ್ ರೈಸ್ ಕೊಡಿಸಲಾಗದೇ ಇರುವ ಸ್ಥಿತಿ, ಅದನ್ನು ಪಡೆಯಲು ಪ್ರಯತ್ನಿಸುವ ಅವನ ಗೆಳೆಯರು ಮಾಡುವ ಸತತ ಪ್ರಯತ್ನ ಹಾಸ್ಯವನ್ನುಕ್ಕಿಸುತ್ತದೆ. ಇದರಲ್ಲಿ ಸತ್ಯಾಂಶವೂ ಇದೆ. ಆದರೆ ನಾಗ ‘ನನಗೆ ಅಷ್ಟು ದುಡ್ಡು ಎಲ್ಲಿಂದ ಬರತೈತಿ, ಆಗಲ್ಲ ಬೇಕಾದ್ರ ಶಾಲಿಗೆ ಒಳ್ಳೆ ಕೆಲ್ಸ ಮಾಡ್ತೇನಿ’ ಅಂತ ಹೇಳಿದ್ದು ಅವನ ಪ್ರಾಮಾಣಿಕತೆಯಾದರೆ, ಆಸೆಗೆ ಬಲಿಯಾಗಬೇಡಿ ಎಂಬುದನ್ನೂ ಕಥೆ ಸೂಚ್ಯವಾಗಿ ಹೇಳುತ್ತದೆ.
ಗುಂಡುರಾವ್ ದೇಸಾಯಿ ಬರೆದ “ಮಕ್ಕಳೇನು ಸಣ್ಣವರಲ್ಲ” ಮಕ್ಕಳ ಕಥಾ ಸಂಕನದ ಕುರಿತು ನಾಗರಾಜ ಎಂ ಹುಡೇದ ಬರಹ

Read More

ನೊಂದವರ ಬಾಳಿಗೆ ಮುಲಾಮಾಗುವ ಟೀಚರ್

ಶಾಲಿನಿಗೆ ರುಸ್ತುಂ ಪಪ್ಪಾ ಏಕೆ ನನ್ನ ಎಲ್ಲಾ ಖರ್ಚುಗಳನ್ನು ನೋಡಿಕೊಳ್ಳುತ್ತಾನೆ? ನನ್ನ ಬಗ್ಗೆ ಯಾಕೆ ಕಾಳಜಿ ತಗೊಳ್ತಾನೆ ಅನ್ನೋದು ಅವಳಿಗೆ ಯಕ್ಷ ಪ್ರಶ್ನೆಯಾಗಿತ್ತು. ತನ್ನ ಸಾಕು ತಾಯಿ ಮತ್ತು ಅವಳ ಚಿಕ್ಕಮ್ಮ ಒಂದು ದಿನ ಮಾತಾಡಿದ ಮಾತುಗಳನ್ನು ಕೇಳಿ ಕರಳು ಕತ್ತರಿಸಿದಂತಾಗಿ ರುಸ್ತುಂ ಪಪ್ಪಾನ ಕುರಿತು ಸತ್ಯದ ಅರಿವಾಗುತ್ತದೆ. ಬನದ ಹುಣ್ಣಿಮೆಗೆ ಸವದತ್ತಿ ಎಲ್ಲಮ್ಮನ ಗುಡ್ಡಕ್ಕೆ ಹೋದಾಗ ದೇವಿಯ ಪ್ರಸಾದವೆಂಬಂತೆ ರುಸ್ತುಂ ಅವರ ಕೈಗೆ ಬಂದ ಈ ಹಸುಗೂಸೆ ಈ ಶಾಲಿನಿ.
ವೈ.ಜಿ. ಭಗವತಿ ಬರೆದ ಮಕ್ಕಳ ಕಾದಂಬರಿ “ಮಕ್ಕಳು ಓದಿದ ಟೀಚರ್ ಡೈರಿ”ಕೃತಿಯ ಕುರಿತು ನಾಗರಾಜ್‌ ಎಂ. ಹುಡೇದ್‌ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ