Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾದಂಬರಿಯ ಪಾತ್ರಗಳು ಎರಡನೆಯ ಭಾಗದಲ್ಲಿ ಮುಖಾಮುಖಿಯಾಗುತ್ತವೆಯಾದರೂ ಅದು ತೀವ್ರತೆಗೆ ಎಡೆಮಾಡುವುದಿಲ್ಲ. ಅಲ್ಲೆಲ್ಲ ಒಂದು ಪಾತ್ರ ಸುಮ್ಮನೆ ಆ ಸ್ಥಳವನ್ನು ಬಿಟ್ಟು ದೂರಸರಿಯುತ್ತದೆ. ಚಿದಂಬರನ ಕಾಲಘಟ್ಟದಲ್ಲಿ ಅರವತ್ತರ ನಂತರದ ಸಾಮಾಜಿಕ ನಡವಳಿಕೆಯನ್ನು ಕಾಣಬಹುದು. ಮೊದಲ ಹಂತದಲ್ಲಿ ಗೋವಿಂದ ಮತ್ತು ಸವಿತಾ ದಂಪತಿಗಳ ಶ್ರಮ ಎದ್ದು ಕಾಣಿಸಿದರೆ ಎರಡನೆಯ ಭಾಗದಲ್ಲಿ ಚಿದಂಬರ ಮತ್ತು ಗಿರಿಜಾ ದಂಪತಿಗಳು ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಇಬ್ಬರದ್ದೂ ಹೋರಾಟದ ಬದುಕು.
ರಾಜಶೇಖರ ಜೋಗಿನ್ಮನೆ ಕಾದಂಬರಿ “ಕೇಳು ಧನಂಜಯ..” ಕುರಿತು ನಾರಾಯಣ ಯಾಜಿ ಬರಹ

Read More

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ ಪ್ರಭಾವವನ್ನು ಬೀರಿತ್ತು ಎನ್ನುವುದಕ್ಕೆ ಆಕೆ ತಾನು ವೇಶ್ಯೆಯಾಗಿ ಇರುವಾಗಲೂ ಸಂದರ್ಭ ಬಂದಾಗ ಸ್ವಾತಂತ್ರ್ಯ ಹೋರಾಟ, ಸಮಾಜ ಸೇವೆ, ದೀನದಲಿತರಿಗೆ ನೆರವು ಹೀಗೆ ಹಲವಾರು ಸಂಗತಿಗಳನ್ನು ಮಾಡುತ್ತಲೇ ಇರುತ್ತಾಳೆ. ಆದರೆ ಸ್ವಾತಂತ್ರ್ಯ ಹೊರಾಟಗಾರರಲ್ಲಿ ಎಲ್ಲವರೂ ನಂದಣ್ಣನಂತಹ ವ್ಯಕ್ತಿಗಳಲ್ಲ. ಹೆಚ್ಚಿನವರು ರಮೇಶನಂತಹ ಗೋಮುಖರೇ.
ಬಂಗಾಳಿಯ ಮಾನದಾ ದೇವಿ ಆತ್ಮಕಥನ “ವಿದ್ಯಾವಂತ ವೇಶ್ಯೆಯ ಆತ್ಮಕಥೆ”ಯನ್ನು ನಾಗ ಎಚ್ ಹುಬ್ಳಿ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ

ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ