Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅಪರಾಧಕ್ಕೆ ತಕ್ಕ ಶಿಕ್ಷೆ ಮತ್ತು…. ಮುಂದಿನ ಹಾದಿ

ಅಪರಾಧಿಯು ತಪ್ಪೊಪ್ಪಿಕೊಂಡ ಐದು ತಿಂಗಳ ನಂತರ ತೀರ್ಪು ಹೊರಬಂದಿತು. ರಝುಮಿಖಿನ್ ಸಾಧ್ಯವಾದಾಗಲೆಲ್ಲ ಸೆರೆಮನೆಗೆ ಹೋಗಿ ಅವನ ಭೇಟಿ ಮಾಡುತ್ತಿದ್ದ. ಸೋನ್ಯಾಳೂ ಅಷ್ಟೇ. ದೂರವಾಗುವ ದಿನ ಬಂದಿತು. ಶಾಶ್ವತವಾಗಿ ದೂರವಾಗುತ್ತಿಲ್ಲ ನಾವು ಎಂದು ದುನ್ಯಾ ಆಣೆ ಮಾಡಿ ಹೇಳಿದಳು ಅಣ್ಣನಿಗೆ. ರಝುಮಿಖಿನ್ ಕೂಡ ಅದನ್ನೇ ಹೇಳಿದ. ಕನಿಷ್ಠಪಕ್ಷ ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ ಏನು ಮಾಡಬೇಕೆಂಬ ಬಗ್ಗೆ ಅವನ ಸ್ನೇಹಪೂರ್ಣ ಮನಸಿನಲ್ಲಿ ಆಗಲೇ ಒಂದು ಯೋಜನೆ ದೃಢವಾಗಿ ರೂಪುತಳೆದಿತ್ತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಕೊನೆಯ ನುಡಿಗಳು.

Read More

ಅಪರಾಧ ಮತ್ತು ಶಿಕ್ಷೆ: ಸ್ಥಿಮಿತವಿಲ್ಲದ ಮನಸ್ಸು

ಈ ಎಲ್ಲ ಮಾತು ರಾಸ್ಕೋಲ್ನಿಕೋವ್‌ನನ್ನು ತಡೆದು ನಿಲ್ಲಿಸಿದವು. ಅವನ ನಾಲಗೆ ತುದಿಗೆ ಬಂದಿದ್ದ, ‘ನಾನು ಕೊಲೆಮಾಡಿದೆ,’ ಅನ್ನುವ ಮಾತು ಅಲ್ಲೇ ಹೆಪ್ಪುಗಟ್ಟಿತು. ಈ ಎಲ್ಲ ಉದ್ಗಾರ ಶಾಂತವಾಗಿ ಕೇಳಿಸಿಕೊಂಡ. ಹಿಂದೆ ತಿರುಗಿ ನೋಡದೆ ಪೋಲೀಸು ಸ್ಟೇಷನ್ನಿನ ರಸ್ತೆಯಲ್ಲಿ ನಡೆದ. ದಾರಿಯಲ್ಲಿ ಅವನ ಮುಂದೆಯೇ ಯಾವುದೋ ನೆರಳು ಹಾದು ಹೋದ ಹಾಗೆ ಅನ್ನಿಸಿತು. ಅವನಿಗೆ ಆಶ್ಚರ್ಯವಾಗಲಿಲ್ಲ. ಇದು ಹೀಗೇ ಆಗುತ್ತದೆ ಎಂದು ಮೊದಲೇ ಅವನು ಊಹಿಸಿದಂತಿತ್ತು. ಹೇಮಾರ್ಕೆಟ್ಟಿನಲ್ಲಿ ಎರಡನೆಯ ಬಾರಿ ಇಡೀ ಲೋಕಕ್ಕೆ….

Read More

ನಾನಿನ್ನು ಹೋಗಿ ಬರ್ತೀನಿ…. ಅಮ್ಮಾ…!

ಹೌದು. ಅವನಿಗೆ ಸಂತೋಷಾಗಿತ್ತು. ಮನೆಯಲ್ಲಿ ಯಾರೂ ಇಲ್ಲದೆ ಇರುವುದರಿಂದ, ಅಮ್ಮನ ಜೊತೆ ಅವನೊಬ್ಬನೇ ಇದ್ದದ್ದರಿಂದ ಬಹಳ ಸಂತೋಷವಾಗಿತ್ತು. ಇದ್ದಕಿದ್ದ ಹಾಗೆ, ಇಷ್ಟೆಲ್ಲ ಭಯಂಕರ ತಿಂಗಳುಗಳ ನಂತರ ಅವನ ಮನಸ್ಸು ಬಹಳ ಮೃದುವಾಗಿತ್ತು. ಅಮ್ಮನ ಕಾಲಿಗೆ ಬಿದ್ದ, ಅಮ್ಮನ ಪಾದಕ್ಕೆ ಮುತ್ತಿಟ್ಟ. ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ಈಗ ಅವಳಿಗೆ ಆಶ್ಚರ್ಯವಿರಲಿಲ್ಲ, ಯಾವ ಪ್ರಶ್ನೆಯನ್ನೂ ಕೇಳಲಿಲ್ಲ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಯಾವುದು ಕನಸು? ಯಾವುದು ನನಸು?

ಸೋನ್ಯಾಳನ್ನು ಅವಳ ದಿಗ್ಭ್ರಾಂತಿ, ಅಸ್ಪಷ್ಟ ಭಯಗಳಲ್ಲಿ, ಅಪಶಕುನದ ಹೆದರಿಕೆಗಳಲ್ಲಿ ಹಾಗೇ ಬಿಟ್ಟು ಅವನು ಹೊರಟು ಹೋದ. ಅವನು ಇನ್ನೊಂದು ವಿಚಿತ್ರವಾದ, ಅನಿರೀಕ್ಷಿತವಾದ ಭೇಟಿ ನೀಡಿದ್ದ ಅನ್ನುವುದು ಆನಂತರ ತಿಳಿಯಿತು. ಹನ್ನೊಂದು ಗಂಟೆಯ ನಂತರ ತಿಳಿಯಿತು. ಮಳೆ ಇನ್ನೂ ನಿಂತಿರಲಿಲ್ಲ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕೊನೆಯ ಬುಲೆಟ್ಟು ಹಾರುವ ಮುನ್ನ….

ದುನ್ಯಾ ಅವನ ಹತ್ತಿರವೇ ನಿಂತಿದ್ದಳು. ಸೇತುವೆಯ ಮೇಲೆ ಕಾಲಿಡುತ್ತಿದ್ದ ಹಾಗೇ ರಾಸ್ಕೋಲ್ನಿಕೋವ್ ಅವಳನ್ನ ನೋಡಿದ್ದ, ಗಮನಿಸದೆ ಮುಂದೆ ಹೋಗಿದ್ದ. ದುನ್ಯಾ ಹೀಗೆ ಯಾವತ್ತೂ ಅವನನ್ನ ರಸ್ತೆಯ ಮೇಲೆ ನೋಡಿರಲಿಲ್ಲ. ಈಗ ಹೀಗೆ ಅವನನ್ನು ನೋಡಿ ಭಯವಾಯಿತು. ನಿಂತಳು. ಹೇಮಾರ್ಕೆಟ್ಟಿನ ಕಡೆಯಿಂದ ಸ್ವಿದ್ರಿಗೈಲೋವ್ ಬರುತ್ತಿರುವುದನ್ನು ದುನ್ಯಾ ತಟ್ಟನೆ ಗಮನಿಸಿದ್ದಳು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ